6:47 AM Sunday15 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ಪಿಎಫ್ ಐ ನಿಷೇಧ ಮಾಡಿಯೆಂದು ಯು.ಟಿ.ಖಾದರ್ ಕಣ್ಣೀರು ಹಾಕ್ತಾ ಇದ್ದರೆಂಬ ನಳಿನ್  ಹೇಳಿಕೆಗೆ ಪ್ರತಿಪಕ್ಷ ಉಪ ನಾಯಕ ಏನು ಹೇಳಿದರು ಗೊತ್ತೆ?

28/09/2022, 20:16

ಮಂಗಳೂರು(reporterkarnataka.com):ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಾಜಕಾರಣದಲ್ಲಿ ಗಾಳಿಯಲ್ಲಿ ಗುಂಡು ಹೊಡೆದು ವಿಕೃತ ಖುಷಿ ತಗೊಳ್ಳುವ ವಿಚಾರದಲ್ಲಿ ಅತ್ಯಂತ ಹೆಸರುವಾಸಿ. ಸುಳ್ಳು ಹೇಳೋದು, ಆಮೇಲೆ ಸುಳ್ಳಿನ ಮೇಲೆ ರಾಜಕಾರಣ ಮಾಡೋದು. ಇದು ವಿಘ್ನ ಸಂತೋಷಿಗಳ ಲಕ್ಷಣ. ಸುಳ್ಳು ಹೇಳೋದ್ರಲ್ಲಿ ನಳಿನ್ ಹಿಂದಿಕ್ಕಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಹೇಳಿದರು.

ನಳಿನ್ ನ ಮುಂದೆ ಕಣ್ಣೀರು ಹಾಕುವ ಅವಶ್ಯಕತೆ ನನಗಿಲ್ಲ. ಅಂಥಹ ಅವಶ್ಯಕತೆ ಇನ್ನು ಮುಂದಕ್ಕೂ ಕೂಡಾ ಬರುವುದೂ ಇಲ್ಲ. ತಾನು ಮಾಡಿದ ಕೆಲಸವನ್ನು ನಾನೇ ಮಾಡಿದ್ದು ಎಂದು ಹೇಳುವಷ್ಟು ಸಾಮರ್ಥ್ಯ, ಧೈರ್ಯವಿಲ್ಲದವರು ಈ ರೀತಿಯ ಅಪಾದನೆ ಮಾಡುವುದು ಸಹಜ. ನಿಮಗೆ ನಿಜವಾದ ದೇಶಭಕ್ತಿಯಿದ್ದಲ್ಲಿ, ಧರ್ಮದ ಆಧಾರದಲ್ಲಿ ವಿಷ ಬೀಜ ಬಿತ್ತಿ ಸಮಾಜ ಸ್ವಾಸ್ಥ್ಯ ಕೆಡಿಸುವ, ಭಾರತದ ಶ್ರೇಷ್ಠ ಸಂವಿಧಾನವನ್ನು ವಿರೋಧಿಸಿ ಕಾನೂನು ಕೈಗೆತ್ತಿಕೊಳ್ಳುವ ಎಲ್ಲಾ ಸಂಘಟನೆಗಳನ್ನೂ ನಿಷೇಧ ಮಾಡಿಯೆಂದು ಕಟೀಲು ಅವರಿಗೆ ಖಾದರ್ ಸಲಹೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು