5:42 AM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

– ಪಿಜಿ- 22 ಪರೀಕ್ಷೆ ಮುಂದೂಡಲು ಸುಪ್ರೀಂಕೋರ್ಟ್​ ನಕಾರ: ನಿಗದಿಪಡಿಸಿದ ವೇಳಾಪಟ್ಟಿ ಅನುಸರಿಸಲು ಸೂಚನೆ

14/05/2022, 12:02

ಹೊಸದಿಲ್ಲಿ(reporterkarnataka.com):ನೀಟ್- ಪಿಜಿ-22 ಪರೀಕ್ಷೆ ಮುಂದೂಡುವಂತೆ ವೈದ್ಯರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಅರ್ಜಿ ವಿಚಾರಣೆಯನ್ನು ಕೈಗೊಂಡ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು – ಪಿಜಿ- 22 ಪರೀಕ್ಷೆ ಮುಂದೂಡಲು ಸುಪ್ರೀಂಕೋರ್ಟ್​ ನಕಾರ: ನಿಗದಿಪಡಿಸಿದ

ವೇಳಾಪಟ್ಟಿ ಅನುಸರಿಸಲು ಸೂಚನೆ ಸೂರ್ಯಕಾಂತ್ ಅವರ ಪೀಠವು, ವೈದ್ಯರ ಅಲಭ್ಯತೆಯಾಗಿ ರೋಗಿಗಳ ಆರೈಕೆಯ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದು, ಅವರ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಿದೆ.

ಇತ್ತ ಒಂದು ವರ್ಗದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡುವುದನ್ನು ಬಯಸಿದರೆ, ಇನ್ನೊಂದು ವರ್ಗದಲ್ಲಿರುವ 2.60 ಲಕ್ಷ ಅಭ್ಯರ್ಥಿಗಳು ಈಗಾಗಲೇ ಪರೀಕ್ಷೆಗೆ ತಯಾರಾಗಿದ್ದಾರೆ. ಅವರ ಮೇಲೆ ಪ್ರಭಾವ ಬೀರುತ್ತದೆ ಎಂದು ಹೇಳಿದೆ.

ಈಗಾಗಲೇ ಸಾಂಕ್ರಾಮಿಕ ರೋಗದಿಂದಾಗಿ ಹಳಿತಪ್ಪಿದ ದೇಶವು ಹಳಿಗಳ ಬರುತ್ತಿದೆ. ಇದರ ನಡುವೆ ಸರಿಯಾದ ಸಮಯಕ್ಕೆ ಪರೀಕ್ಷೆ ನಡೆಯುವಂತೆ ವೇಳಾಪಟ್ಟಿಯನ್ನು ತರಲು ಸರ್ಕಾರ ಪ್ರಯತ್ನಿಸುತ್ತಿದೆ. ಹಾಗಾಗಿ ನ್ಯಾಯಾಲಯ ನಿಗದಿಪಡಿಸಿದ ಸಮಯ ವೇಳಾಪಟ್ಟಿಯನ್ನು ಅನುಸರಿಸಬೇಕು ಎಂದು ತಿಳಿಸಿದೆ.

ಸದ್ಯ ನಡೆಯುತ್ತಿರುವ NEET-PG 2021ರ ಕೌನ್ಸೆಲಿಂಗ್​ನೊಂದಿಗೆ ಕ್ಲ್ಯಾಶ್​ ಆಗುವ ಕಾರಣಕ್ಕೆ ಮೇ 21ರಂದು ನಡೆಯಲಿರುವ (NEET-PG) 2022ರ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ವೈದ್ಯರು ಸಲ್ಲಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು