5:07 PM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

– ಪಿಜಿ- 22 ಪರೀಕ್ಷೆ ಮುಂದೂಡಲು ಸುಪ್ರೀಂಕೋರ್ಟ್​ ನಕಾರ: ನಿಗದಿಪಡಿಸಿದ ವೇಳಾಪಟ್ಟಿ ಅನುಸರಿಸಲು ಸೂಚನೆ

14/05/2022, 12:02

ಹೊಸದಿಲ್ಲಿ(reporterkarnataka.com):ನೀಟ್- ಪಿಜಿ-22 ಪರೀಕ್ಷೆ ಮುಂದೂಡುವಂತೆ ವೈದ್ಯರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಅರ್ಜಿ ವಿಚಾರಣೆಯನ್ನು ಕೈಗೊಂಡ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು – ಪಿಜಿ- 22 ಪರೀಕ್ಷೆ ಮುಂದೂಡಲು ಸುಪ್ರೀಂಕೋರ್ಟ್​ ನಕಾರ: ನಿಗದಿಪಡಿಸಿದ

ವೇಳಾಪಟ್ಟಿ ಅನುಸರಿಸಲು ಸೂಚನೆ ಸೂರ್ಯಕಾಂತ್ ಅವರ ಪೀಠವು, ವೈದ್ಯರ ಅಲಭ್ಯತೆಯಾಗಿ ರೋಗಿಗಳ ಆರೈಕೆಯ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದು, ಅವರ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಿದೆ.

ಇತ್ತ ಒಂದು ವರ್ಗದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡುವುದನ್ನು ಬಯಸಿದರೆ, ಇನ್ನೊಂದು ವರ್ಗದಲ್ಲಿರುವ 2.60 ಲಕ್ಷ ಅಭ್ಯರ್ಥಿಗಳು ಈಗಾಗಲೇ ಪರೀಕ್ಷೆಗೆ ತಯಾರಾಗಿದ್ದಾರೆ. ಅವರ ಮೇಲೆ ಪ್ರಭಾವ ಬೀರುತ್ತದೆ ಎಂದು ಹೇಳಿದೆ.

ಈಗಾಗಲೇ ಸಾಂಕ್ರಾಮಿಕ ರೋಗದಿಂದಾಗಿ ಹಳಿತಪ್ಪಿದ ದೇಶವು ಹಳಿಗಳ ಬರುತ್ತಿದೆ. ಇದರ ನಡುವೆ ಸರಿಯಾದ ಸಮಯಕ್ಕೆ ಪರೀಕ್ಷೆ ನಡೆಯುವಂತೆ ವೇಳಾಪಟ್ಟಿಯನ್ನು ತರಲು ಸರ್ಕಾರ ಪ್ರಯತ್ನಿಸುತ್ತಿದೆ. ಹಾಗಾಗಿ ನ್ಯಾಯಾಲಯ ನಿಗದಿಪಡಿಸಿದ ಸಮಯ ವೇಳಾಪಟ್ಟಿಯನ್ನು ಅನುಸರಿಸಬೇಕು ಎಂದು ತಿಳಿಸಿದೆ.

ಸದ್ಯ ನಡೆಯುತ್ತಿರುವ NEET-PG 2021ರ ಕೌನ್ಸೆಲಿಂಗ್​ನೊಂದಿಗೆ ಕ್ಲ್ಯಾಶ್​ ಆಗುವ ಕಾರಣಕ್ಕೆ ಮೇ 21ರಂದು ನಡೆಯಲಿರುವ (NEET-PG) 2022ರ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ವೈದ್ಯರು ಸಲ್ಲಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು