5:18 AM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ದ್ವಿತೀಯ ಪಿಯುಸಿ ಪರೀಕ್ಷೆ; ಜೂನ್ ಕೊನೆ ವಾರದಲ್ಲಿ ಫಲಿತಾಂಶ ಪ್ರಕಟ

25/04/2022, 09:23

ಬೆಂಗಳೂರು(reporterkarnataka.com):

ದ್ವಿತೀಯ ಪಿಯುಸಿ ಫಲಿತಾಂಶ ಈ ಬಾರಿ ತಡವಾಗಲ್ಲ. ಜೂನ್ ಕೊನೆ ವಾರದಲ್ಲಿ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಪಿಯು ಮಂಡಳಿ ನಿರ್ದೆಶಕ ಆರ್. ರಾಮಚಂದ್ರನ್ ಮಾಹಿತಿ ನೀಡಿದ್ದಾರೆ.

ಪ್ರತಿ ವರ್ಷದಂತೆ ಈ ಬಾರಿ ದ್ವಿತೀಯ ಪಿಯುಸಿ ಫಲಿತಾಂಶ ತಡವಾಗಲ್ಲ. ಈವರೆಗೆ ಪರೀಕ್ಷೆ ಮುಗಿದ ನಂತರ ಮೌಲ್ಯಮಾಪನ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಒಂದೊಂದು ಪರೀಕ್ಷೆ ಮುಗಿಯುತ್ತಿದ್ದಂತೆ ಮೌಲ್ಯಮಾಪನ ಮಾಡಲಾಗುತ್ತಿದೆ. ಈ ವರ್ಷ ಏಪ್ರಿಲ್. ಮೇ ತಿಂಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಫಲಿತಾಂಶ ಬೇಗ ನೀಡಲು ರಜಾ ದಿನಗಳಲ್ಲೂ ಮೌಲ್ಯಮಾಪನ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಮೇ 20 ರಿಂದ ಜೂನ್ 15 ರೊಳಗೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳ್ಳಲಿದೆ. ಉನ್ನತ ಶಿಕ್ಷಣ ಹೋಗಲು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು