9:56 AM Wednesday2 - July 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:…

ಇತ್ತೀಚಿನ ಸುದ್ದಿ

‘ಪಿಲಿಪಂಜ’ ತುಳು ಸಿನಿಮಾ ಶೀರ್ಷಿಕೆ ಬಿಡುಗಡೆ: ನವೆಂಬರ್‌ 7ರಂದು ಮಂಗಳೂರಿನಲ್ಲಿ ಚಿತ್ರೀಕರಣ ಆರಂಭ

01/11/2024, 23:44

ಮಂಗಳೂರು(reporterkarnataka.com): ಎಸ್ ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ನಿರ್ಮಾಣದ, ಪಿಲಿಪಂಜ ಸಿನಿಮಾದ ಶೀರ್ಷಿಕೆ ಬಿಡುಗಡೆ ಕಾರ್ಯಕ್ರಮ ನಗರದ ಬಂದರಿನ ಶ್ರೀ ನಿತ್ಯಾನಂದ ಸೇವಾಶ್ರಮದಲ್ಲಿ ನಡೆಯಿತು.
ಹಿರಿಯ ತುಳು ರಂಗಭೂಮಿ ಹಾಗೂ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಶೀರ್ಷಿಕೆ ಬಿಡುಗಡೆ ಮಾಡುತ್ತಾ, “ಪಿಲಿಪಂಜ” ಒಂದು ವಿಭಿನ್ನ ಹಾಗೂ ಕುತೂಹಲ ಮೂಡಿಸುವ ಟೈಟಲ್. ಇದೊಂದು ವಿಭಿನ್ನ ಚಿತ್ರವಾಗಿ ಮೂಡಿಬರುವುದರಲ್ಲಿ ಸಂಶಯವಿಲ್ಲ. ಒಂದೊಳ್ಳೆ ಕಥೆಯೊಂದಿಗೆ ಚಿತ್ರ ತಂಡ ನಮ್ಮ ಮುಂದೆ ಬರುತ್ತಿದೆ, ತುಳುನಾಡಿನ ಜನತೆ ಈ ಚಿತ್ರವನ್ನು ಗೆಲ್ಲಿಸಿ ಕೊಡ ಬೇಕು. ಗುರು ನಿತ್ಯಾನಂದರ ಆಶೀರ್ವಾದ ಚಿತ್ರ ತಂಡದ ಮೇಲಿರಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಶಿಯಾನ ಪ್ರೊಡಕ್ಷನ್ ಹೌಸ್ ನ ಪ್ರತೀಕ್ ಪೂಜಾರಿ, ಚಿತ್ರದ ನಿರ್ದೇಶಕ ಭರತ್ ಶೆಟ್ಟಿ, ಎಕ್ಸಿಕ್ಯುಟಿವ್ ಪ್ರೊಡ್ಯುಷರ್ ರಮೇಶ್ ರೈ ಕುಕ್ಕುವಳ್ಳಿ, ಮುಂಬಯಿಯ ರಂಗ ನಿರ್ದೇಶಕ, ಭ್ರಾಮರಿ ಸುದ್ದಿವಾಹಿನಿಯ ರೂವಾರಿ ಬಾಬಾ ಪ್ರಸಾದ್ ಅರಸ, ಪ್ರಕಾಶ್ ಶೆಟ್ಟಿ ಧರ್ಮನಗರ, ರಾಜೇಶ್ ಕಣ್ಣೂರು, ರಕ್ಷಣ್ ಮಾಡೂರು, ಅಕ್ಷತ್ ವಿಟ್ಲ, ಸುರೇಶ್ ಬಲ್ಮಠ,ಅಭಿಷೇಕ್ ಕುಲಾಲ್, ಚಿತ್ರದ ಸಂಕಲನಕಾರ ಶ್ರೀನಾಥ್ ಪವರ್ ಮುಂತಾದವರು ಉಪಸ್ಥಿತರಿದ್ದರು.
ನವೆಂಬರ್‌ 7ಕ್ಕೆ ಮಂಗಳೂರಿನಲ್ಲಿ ಚಿತ್ರೀಕರಣ ಪ್ರಾರಂಭಗೊಳ್ಳಲಿದೆ.
ಚಿತ್ರದಲ್ಲಿ ರಮೇಶ್ ರೈ ಕುಕ್ಕುವಳ್ಳಿ, ಭೋಜರಾಜ್ ವಾಮಂಜೂರು, ರವಿ ರಾಮಕುಂಜ, ಸುಂದರ್ ರೈ ಮಂದಾರ, ಶಿವಪ್ರಕಾಶ್ ಪೂಂಜ, ರೂಪಾಶ್ರೀ ವರ್ಕಾಡಿ, ಪ್ರಕಾಶ್ ಶೆಟ್ಟಿ ಧರ್ಮನಗರ, ರಕ್ಷಣ್ ಮಾಡೂರು, ಪ್ರವೀಣ್ ಕೊಡಕ್ಕಲ್, ರಂಜನ್ ಬೋಳಾರ್ , ದಿಶಾ ರಾಣಿ ಮುಂತಾದವರು ನಟಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು