4:00 AM Friday15 - August 2025
ಬ್ರೇಕಿಂಗ್ ನ್ಯೂಸ್
‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

‘ಪಿಲಿಪಂಜ’ ತುಳು ಸಿನಿಮಾ ಶೀರ್ಷಿಕೆ ಬಿಡುಗಡೆ: ನವೆಂಬರ್‌ 7ರಂದು ಮಂಗಳೂರಿನಲ್ಲಿ ಚಿತ್ರೀಕರಣ ಆರಂಭ

01/11/2024, 23:44

ಮಂಗಳೂರು(reporterkarnataka.com): ಎಸ್ ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ನಿರ್ಮಾಣದ, ಪಿಲಿಪಂಜ ಸಿನಿಮಾದ ಶೀರ್ಷಿಕೆ ಬಿಡುಗಡೆ ಕಾರ್ಯಕ್ರಮ ನಗರದ ಬಂದರಿನ ಶ್ರೀ ನಿತ್ಯಾನಂದ ಸೇವಾಶ್ರಮದಲ್ಲಿ ನಡೆಯಿತು.
ಹಿರಿಯ ತುಳು ರಂಗಭೂಮಿ ಹಾಗೂ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಶೀರ್ಷಿಕೆ ಬಿಡುಗಡೆ ಮಾಡುತ್ತಾ, “ಪಿಲಿಪಂಜ” ಒಂದು ವಿಭಿನ್ನ ಹಾಗೂ ಕುತೂಹಲ ಮೂಡಿಸುವ ಟೈಟಲ್. ಇದೊಂದು ವಿಭಿನ್ನ ಚಿತ್ರವಾಗಿ ಮೂಡಿಬರುವುದರಲ್ಲಿ ಸಂಶಯವಿಲ್ಲ. ಒಂದೊಳ್ಳೆ ಕಥೆಯೊಂದಿಗೆ ಚಿತ್ರ ತಂಡ ನಮ್ಮ ಮುಂದೆ ಬರುತ್ತಿದೆ, ತುಳುನಾಡಿನ ಜನತೆ ಈ ಚಿತ್ರವನ್ನು ಗೆಲ್ಲಿಸಿ ಕೊಡ ಬೇಕು. ಗುರು ನಿತ್ಯಾನಂದರ ಆಶೀರ್ವಾದ ಚಿತ್ರ ತಂಡದ ಮೇಲಿರಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಶಿಯಾನ ಪ್ರೊಡಕ್ಷನ್ ಹೌಸ್ ನ ಪ್ರತೀಕ್ ಪೂಜಾರಿ, ಚಿತ್ರದ ನಿರ್ದೇಶಕ ಭರತ್ ಶೆಟ್ಟಿ, ಎಕ್ಸಿಕ್ಯುಟಿವ್ ಪ್ರೊಡ್ಯುಷರ್ ರಮೇಶ್ ರೈ ಕುಕ್ಕುವಳ್ಳಿ, ಮುಂಬಯಿಯ ರಂಗ ನಿರ್ದೇಶಕ, ಭ್ರಾಮರಿ ಸುದ್ದಿವಾಹಿನಿಯ ರೂವಾರಿ ಬಾಬಾ ಪ್ರಸಾದ್ ಅರಸ, ಪ್ರಕಾಶ್ ಶೆಟ್ಟಿ ಧರ್ಮನಗರ, ರಾಜೇಶ್ ಕಣ್ಣೂರು, ರಕ್ಷಣ್ ಮಾಡೂರು, ಅಕ್ಷತ್ ವಿಟ್ಲ, ಸುರೇಶ್ ಬಲ್ಮಠ,ಅಭಿಷೇಕ್ ಕುಲಾಲ್, ಚಿತ್ರದ ಸಂಕಲನಕಾರ ಶ್ರೀನಾಥ್ ಪವರ್ ಮುಂತಾದವರು ಉಪಸ್ಥಿತರಿದ್ದರು.
ನವೆಂಬರ್‌ 7ಕ್ಕೆ ಮಂಗಳೂರಿನಲ್ಲಿ ಚಿತ್ರೀಕರಣ ಪ್ರಾರಂಭಗೊಳ್ಳಲಿದೆ.
ಚಿತ್ರದಲ್ಲಿ ರಮೇಶ್ ರೈ ಕುಕ್ಕುವಳ್ಳಿ, ಭೋಜರಾಜ್ ವಾಮಂಜೂರು, ರವಿ ರಾಮಕುಂಜ, ಸುಂದರ್ ರೈ ಮಂದಾರ, ಶಿವಪ್ರಕಾಶ್ ಪೂಂಜ, ರೂಪಾಶ್ರೀ ವರ್ಕಾಡಿ, ಪ್ರಕಾಶ್ ಶೆಟ್ಟಿ ಧರ್ಮನಗರ, ರಕ್ಷಣ್ ಮಾಡೂರು, ಪ್ರವೀಣ್ ಕೊಡಕ್ಕಲ್, ರಂಜನ್ ಬೋಳಾರ್ , ದಿಶಾ ರಾಣಿ ಮುಂತಾದವರು ನಟಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು