2:34 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

‘ಪಿಲಿಪಂಜ’ ತುಳು ಸಿನಿಮಾ ಶೀರ್ಷಿಕೆ ಬಿಡುಗಡೆ: ನವೆಂಬರ್‌ 7ರಂದು ಮಂಗಳೂರಿನಲ್ಲಿ ಚಿತ್ರೀಕರಣ ಆರಂಭ

01/11/2024, 23:44

ಮಂಗಳೂರು(reporterkarnataka.com): ಎಸ್ ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ನಿರ್ಮಾಣದ, ಪಿಲಿಪಂಜ ಸಿನಿಮಾದ ಶೀರ್ಷಿಕೆ ಬಿಡುಗಡೆ ಕಾರ್ಯಕ್ರಮ ನಗರದ ಬಂದರಿನ ಶ್ರೀ ನಿತ್ಯಾನಂದ ಸೇವಾಶ್ರಮದಲ್ಲಿ ನಡೆಯಿತು.
ಹಿರಿಯ ತುಳು ರಂಗಭೂಮಿ ಹಾಗೂ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಶೀರ್ಷಿಕೆ ಬಿಡುಗಡೆ ಮಾಡುತ್ತಾ, “ಪಿಲಿಪಂಜ” ಒಂದು ವಿಭಿನ್ನ ಹಾಗೂ ಕುತೂಹಲ ಮೂಡಿಸುವ ಟೈಟಲ್. ಇದೊಂದು ವಿಭಿನ್ನ ಚಿತ್ರವಾಗಿ ಮೂಡಿಬರುವುದರಲ್ಲಿ ಸಂಶಯವಿಲ್ಲ. ಒಂದೊಳ್ಳೆ ಕಥೆಯೊಂದಿಗೆ ಚಿತ್ರ ತಂಡ ನಮ್ಮ ಮುಂದೆ ಬರುತ್ತಿದೆ, ತುಳುನಾಡಿನ ಜನತೆ ಈ ಚಿತ್ರವನ್ನು ಗೆಲ್ಲಿಸಿ ಕೊಡ ಬೇಕು. ಗುರು ನಿತ್ಯಾನಂದರ ಆಶೀರ್ವಾದ ಚಿತ್ರ ತಂಡದ ಮೇಲಿರಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಶಿಯಾನ ಪ್ರೊಡಕ್ಷನ್ ಹೌಸ್ ನ ಪ್ರತೀಕ್ ಪೂಜಾರಿ, ಚಿತ್ರದ ನಿರ್ದೇಶಕ ಭರತ್ ಶೆಟ್ಟಿ, ಎಕ್ಸಿಕ್ಯುಟಿವ್ ಪ್ರೊಡ್ಯುಷರ್ ರಮೇಶ್ ರೈ ಕುಕ್ಕುವಳ್ಳಿ, ಮುಂಬಯಿಯ ರಂಗ ನಿರ್ದೇಶಕ, ಭ್ರಾಮರಿ ಸುದ್ದಿವಾಹಿನಿಯ ರೂವಾರಿ ಬಾಬಾ ಪ್ರಸಾದ್ ಅರಸ, ಪ್ರಕಾಶ್ ಶೆಟ್ಟಿ ಧರ್ಮನಗರ, ರಾಜೇಶ್ ಕಣ್ಣೂರು, ರಕ್ಷಣ್ ಮಾಡೂರು, ಅಕ್ಷತ್ ವಿಟ್ಲ, ಸುರೇಶ್ ಬಲ್ಮಠ,ಅಭಿಷೇಕ್ ಕುಲಾಲ್, ಚಿತ್ರದ ಸಂಕಲನಕಾರ ಶ್ರೀನಾಥ್ ಪವರ್ ಮುಂತಾದವರು ಉಪಸ್ಥಿತರಿದ್ದರು.
ನವೆಂಬರ್‌ 7ಕ್ಕೆ ಮಂಗಳೂರಿನಲ್ಲಿ ಚಿತ್ರೀಕರಣ ಪ್ರಾರಂಭಗೊಳ್ಳಲಿದೆ.
ಚಿತ್ರದಲ್ಲಿ ರಮೇಶ್ ರೈ ಕುಕ್ಕುವಳ್ಳಿ, ಭೋಜರಾಜ್ ವಾಮಂಜೂರು, ರವಿ ರಾಮಕುಂಜ, ಸುಂದರ್ ರೈ ಮಂದಾರ, ಶಿವಪ್ರಕಾಶ್ ಪೂಂಜ, ರೂಪಾಶ್ರೀ ವರ್ಕಾಡಿ, ಪ್ರಕಾಶ್ ಶೆಟ್ಟಿ ಧರ್ಮನಗರ, ರಕ್ಷಣ್ ಮಾಡೂರು, ಪ್ರವೀಣ್ ಕೊಡಕ್ಕಲ್, ರಂಜನ್ ಬೋಳಾರ್ , ದಿಶಾ ರಾಣಿ ಮುಂತಾದವರು ನಟಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು