9:19 AM Saturday16 - August 2025
ಬ್ರೇಕಿಂಗ್ ನ್ಯೂಸ್
‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ಪಿಲಿಕುಂಡೇಲ್ ದಾಳಿ: ಎಡಪದವಿನಲ್ಲಿ ಎಸಿ ಮೆಕಾನಿಕ್ ಯುವಕ ದಾರುಣ ಸಾವು; ನಡೆದ ಘಟನೆಯಾದರೂ ಏನು?

23/09/2021, 19:19

ಮಂಗಳೂರು(reporterkarnataka.com): ಕಣಜದ ಹುಳುಗಳ(ಪಿಲಿಕುಂಡೇಲ್) ದಾಳಿಗೆ ಎಸಿ ಮೆಕಾನಿಕ್ ವೊಬ್ಬರು ಮೃತಪಟ್ಟ ದಾರುಣ ಘಟನೆ ಎಡಪದವಿನಲ್ಲಿ ನಡೆದಿದೆ. ಕೇಶವ ಯಾನೆ ಕಿಟ್ಟಿ (24) ಮೃತಪಟ್ಟವರು.

ಕೇಶವ ಅವರು ತಮ್ಮ ಮನೆಯ ತೆಂಗಿನ ಕಾಯಿ ಕೀಳಲು ಹೊಸದಾಗಿ ಖರೀದಿಸಿದ ಮರವೇರುವ ಯಂತ್ರದ ಮೂಲಕ ತೆಂಗಿನ ಮರವನ್ನೇರಿದ್ದರು. ಈ ಸಂದರ್ಭದಲ್ಲಿ ತೆಂಗಿನ ಮರದಲ್ಲಿ ಗೂಡುಕಟ್ಟಿದ್ದ ಕಣಜದ ಹುಳಗಳ ಗೂಡಿಗೆ ಕೇಶವ ಅವರ ತಲೆ ತಾಗಿತ್ತು. ಭಯಗೊಂಡ ಕಣಜದ ಹುಳಗಳು ಗೂಡಿನಿಂದ ಹಠಾತ್ ಹೊರಬಂದು ಕೇಶವ ಅವರ ಮೇಲೆ ದಾಳಿ ಮಾಡಲಾರಂಭಿಸಿತು. ಮೈಮೇಲೆ ಎಲ್ಲೆಂದರಲ್ಲಿ ಕಣಜದ ಹುಳಗಳು ಕಚ್ಚಿ ಗಾಯಗೊಳಿಸಿತು. ತೀವ್ರ ಗಾಯಗೊಂಡ ಕೇಶವ ಅವರನ್ನು ಮೂಡುಬಿದರೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಎಂಸಿಎಫ್ ನಲ್ಲಿ ಎಸಿ ಮೆಕಾನಿಕ್ ಆಗಿ ಕೆಲಸ ನಿರ್ವಹಿಸುತ್ತಿರುವ ಕೇಶವ ಅವರು ಎಡಪದವಿನ ಪಟ್ಲಚ್ಚಿಲ್ ನಿವಾಸಿ ಸದಾಶಿವ ಮತ್ತು ಕಮಲಾಕ್ಷಿ ದಂಪತಿಯ ಪುತ್ರ. ಅವಿವಾಹಿತರಾದ ಅವರು ಮೂವರು ಸಹೋದರರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು