7:29 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಪಿಲಿಕುಂಡೇಲ್ ದಾಳಿ: ಎಡಪದವಿನಲ್ಲಿ ಎಸಿ ಮೆಕಾನಿಕ್ ಯುವಕ ದಾರುಣ ಸಾವು; ನಡೆದ ಘಟನೆಯಾದರೂ ಏನು?

23/09/2021, 19:19

ಮಂಗಳೂರು(reporterkarnataka.com): ಕಣಜದ ಹುಳುಗಳ(ಪಿಲಿಕುಂಡೇಲ್) ದಾಳಿಗೆ ಎಸಿ ಮೆಕಾನಿಕ್ ವೊಬ್ಬರು ಮೃತಪಟ್ಟ ದಾರುಣ ಘಟನೆ ಎಡಪದವಿನಲ್ಲಿ ನಡೆದಿದೆ. ಕೇಶವ ಯಾನೆ ಕಿಟ್ಟಿ (24) ಮೃತಪಟ್ಟವರು.

ಕೇಶವ ಅವರು ತಮ್ಮ ಮನೆಯ ತೆಂಗಿನ ಕಾಯಿ ಕೀಳಲು ಹೊಸದಾಗಿ ಖರೀದಿಸಿದ ಮರವೇರುವ ಯಂತ್ರದ ಮೂಲಕ ತೆಂಗಿನ ಮರವನ್ನೇರಿದ್ದರು. ಈ ಸಂದರ್ಭದಲ್ಲಿ ತೆಂಗಿನ ಮರದಲ್ಲಿ ಗೂಡುಕಟ್ಟಿದ್ದ ಕಣಜದ ಹುಳಗಳ ಗೂಡಿಗೆ ಕೇಶವ ಅವರ ತಲೆ ತಾಗಿತ್ತು. ಭಯಗೊಂಡ ಕಣಜದ ಹುಳಗಳು ಗೂಡಿನಿಂದ ಹಠಾತ್ ಹೊರಬಂದು ಕೇಶವ ಅವರ ಮೇಲೆ ದಾಳಿ ಮಾಡಲಾರಂಭಿಸಿತು. ಮೈಮೇಲೆ ಎಲ್ಲೆಂದರಲ್ಲಿ ಕಣಜದ ಹುಳಗಳು ಕಚ್ಚಿ ಗಾಯಗೊಳಿಸಿತು. ತೀವ್ರ ಗಾಯಗೊಂಡ ಕೇಶವ ಅವರನ್ನು ಮೂಡುಬಿದರೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಎಂಸಿಎಫ್ ನಲ್ಲಿ ಎಸಿ ಮೆಕಾನಿಕ್ ಆಗಿ ಕೆಲಸ ನಿರ್ವಹಿಸುತ್ತಿರುವ ಕೇಶವ ಅವರು ಎಡಪದವಿನ ಪಟ್ಲಚ್ಚಿಲ್ ನಿವಾಸಿ ಸದಾಶಿವ ಮತ್ತು ಕಮಲಾಕ್ಷಿ ದಂಪತಿಯ ಪುತ್ರ. ಅವಿವಾಹಿತರಾದ ಅವರು ಮೂವರು ಸಹೋದರರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು