6:41 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಪಿಂಚಣಿ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ: ಖಜಾನೆ ಡೆಪ್ಯುಟಿ ಅಕೌಂಟೆಂಟ್ ಜನರಲ್ ರಾಜರಾಜೇಶ್ವರಿ

11/07/2023, 20:44

ಮಂಗಳೂರು(reporterkarnataka.com): ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಪಿಂಚಣಿದಾರರ ಕುಂದುಕೊರತೆ ಮತ್ತು ಅಹವಾಲುಗಳ ಸಭೆ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜು.11ರ ಬುಧವಾರ ನಡೆಯಿತು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರ ಅಧ್ಯಕ್ಷತೆಯಲ್ಲಿ ನಡೆದ ಅದಾಲತ್‍ನಲ್ಲಿ 50ಕ್ಕೂ ಹೆಚ್ಚಿನ ಪಿಂಚಣಿದಾರರು ಭಾಗವಹಿಸಿದ್ದರು. ಜಿಲ್ಲೆಯ ಹಲವು ಪಿಂಚಣಿದಾರರು ಲಿಖಿತವಾಗಿ ಸಮಸ್ಯೆಗಳನ್ನು ತಿಳಿಸಿದರು.

ರಾಜ್ಯ ಪಿಂಚಣಿ ಪಾವತಿ ಮತ್ತು ನಿರ್ವಹಣಾ ಖಜಾನೆಯ ಡೆಪ್ಯುಟಿ ಅಕೌಂಟೆಂಟ್ ಜನರಲ್ ಆರ್. ರಾಜರಾಜೇಶ್ವರಿ ಅವರು ಮಾತನಾಡಿ, ಪಿಂಚಣಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿ ಕಾಯುವ ಬದಲು ನೇರವಾಗಿ ತಮಗೆ ದೂರವಾಣಿ ಕರೆ ಮಾಡುವ ಮೂಲಕ ಸಮಸ್ಯೆಗಳನ್ನು ಬಗೆ ಹರಿಸಿಕೊಳ್ಳುವಂತೆ ತಿಳಿಸಿದರು.
ವೀಡಿಯೋ ಕಾನ್ಫರೆನ್ಸ್ ಮೂಲಕವೂ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪಿಂಚಣಿ ಅದಾಲತ್ ನಡೆಸಿ ಪಿಂಚಣಿದಾರರ ಸಮಸ್ಯೆ ಬಗೆಹರಿಸಲು ಯತ್ನಿಸಲಾಗುತ್ತಿದೆ ಎಂದವರು ಹೇಳಿದರು.
ಇದೇ ಸಂದರ್ಭದಲ್ಲಿ ಅವರು ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪಿಂಚಣಿದಾರರ ಸಮಸ್ಯೆಗಳನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ಕೇಳಿಸಿಕೊಂಡರು.
ರಾಜ್ಯ ಪಿಂಚಣಿ ಪಾವತಿ ಮತ್ತು ನಿರ್ವಹಣಾ ಖಜಾನೆಯ ಜಂಟಿ ನಿರ್ದೇಶಕಿ ಆರ್. ಮಾಲವಿಕಾ ಹಾಗೂ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು