2:18 AM Saturday17 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಮಹಿಳೆ ಮತ್ತು ಮಕ್ಕಳ ಸುರಕ್ಷತೆಗಾಗಿ ಪಿಂಕ್ ಹೊಯ್ಸಳ,112 ಗಸ್ತು ವಾಹನ, ರಾಣಿ ಚೆನ್ನಮ್ಮ ತಂಡ

18/03/2025, 00:13

ಬೆಂಗಳೂರು (reporterkarnataka.com): ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯ ಎಂದು ಗೃಹ ಸಚಿವ ಡಾ‌.ಜಿ.ಪರಮೇಶ್ಚರ್ ಹೇಳಿದರು.
ವಿಧಾನ ಪರಿಷತ್ ಅಧಿವೇಶನದಲ್ಲಿ ಸದನದ ಸದಸ್ಯರಾದ ಶರವಣ, ಸಿ.ಟಿ.ರವಿ, ರವಿಕುಮಾರ್ ಮುಂತಾದವರು ನಿಯಮ 68 ರಡಿ ಮೈಕ್ರೋ ಫೈನಾನ್ಸ್ ಹಾವಳಿ , ಮೈಸೂರಿನ ಉದಯಗಿರಿ ಪ್ರಕರಣ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳನ್ನು ತಡೆಯುವಲ್ಲಿ ಸರ್ಕಾರ ಕೈಗೊಂಡ ಕ್ರಮ ಕುರಿತು ಮಂಡಿಸಿದ ಸೂಚನೆಗೆ ಉತ್ತರಿಸಿದ ಸಚಿವರು, ಸರ್ಕಾರ ‘ ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ ( ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ 2025 ಅನ್ನು ಜಾರಿಗೆ ತಂದಿದೆ. ನೋಂದಣಿಯಾಗದ, ಸುರಕ್ಷತಾ ಕ್ರಮಗಳನ್ನು ಅನುಸರಿಸದ, ಸಾರ್ವಜನಿಕರೊಂದಿಗೆ ನಿಯಮಬಾಹಿರವಾಗು ನಡೆದುಕೊಳ್ಳುವ ಮೈಕ್ರೋಫ್ ಫೈನಾನ್ಸ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದರು. ಸಾಲ ನೀಡುವ ಸಂಸ್ಥೆಗಳು ಆರ್ ಬಿ ಐ ಮಾರ್ಗಸೂಚಿ ಅನ್ವಯ ಕ್ರಮ ಕೈಗೊಳ್ಳಬೇಕು ಮತ್ತು ಪ್ರಕರಣಗಳನ್ನು ನ್ಯಾಯಾಲಯದಲ್ಲಿ ಬಗೆಹರಿಸಿಕೊಳ್ಳಬೇಕೆಂದರು
ಇಂತಹ ಕಂಪೆನಿಗಳಿಂದ ಸಾಲಗಾರರಿಗೆ ತೊಂದರೆಯಾದಲ್ಲಿ ನಿರ್ಭೀತಿಯಿಂದ ಸಂಬಂಧಿಸಿದ ಠಾಣೆಗಳಲ್ಲಿ ದೂರು ದಾಖಲಿಸಬಹುದಾಗಿದೆ ಎಂದರು.
ಮೈಸೂರಿನ‌ ಉದಯಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಲು ತೂರಾಟ ನಡೆಸಿ ಪೊಲೀಸರ ಮೇಲೆ ದಾಳಿ ಮಾಡಿದ್ದ 15 ಜನರನ್ನು ದಸ್ತಗಿರಿ ಮಾಡಲಾಗಿದ್ದು, ಕ್ರಿಮಿನಲ್ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದರು.
ಮಹಿಳೆ ಮತ್ತು ಮಕ್ಕಳ ಸುರಕ್ಷತೆಗಾಗಿ ಸರ್ಕಾರ ಪಿಂಕ್ ಹೊಯ್ಸಳ ಮತ್ತು 112 ಗಸ್ತುವಾಹನ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿವೆ. ಬೆಂಗಳೂರು ನಗರದಲ್ಲಿ ಮಹಿಳೆಯರ ರಕ್ಷಣೆಗಾಗಿ ಮಹಿಳಾ ಸಹಾಯವಾಣಿ‌ 1091 ಮತ್ತು ವನಿತಾ ಸಹಾಯವಾಣಿ 22943225 ಕಾರ್ಯನಿರ್ವಹಿಸುತ್ತಿವೆ. ಜೊತೆಗೆ ಮಹಿಳಾ ದೌರ್ಜನ್ಯ ತಡೆಯಲು ರಾಣಿ ಚೆನ್ನಮ್ಮ ತಂಡ ರಚಿಸಿದ್ದು, ಮಹಿಳೆಯರಿಗೆ ಸ್ವಯಂ ರಕ್ಷಣೆ ಹಾಗೂ ಮಾರ್ಷಿಯಲ್ ಆರ್ಟ್ಸ್ ತರಬೇತಿ ನೀಡಲಾಗುತ್ತಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು