3:33 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಪಿರಿಯಾಪಟ್ಟಣ: ಮ್ಯಾನ್ ಹೋಲ್ ಸ್ವಚ್ಛಗೊಳಿಸಲು ಇಳಿದ ಪೌರ ಕಾರ್ಮಿಕರು: ಓರ್ವ ಮೃತ್ಯು, ಇಬ್ಬರು ಅಸ್ವಸ್ಥ

21/12/2021, 11:03

ಮೈಸೂರು( reporterkarnataka.com): ಪಿರಿಯಾಪಟ್ಟಣ ಪುರಸಭೆ ವ್ಯಾಪ್ತಿಯಲ್ಲಿ 

ಮೂವರು ವ್ಯಕ್ತಿಗಳನ್ನು ಮ್ಯಾನ್ ಹೋಲ್ ನಲ್ಲಿ ಸ್ವಚ್ಛತೆ ಗಿಳಿಸಲಾಗಿದ್ದು, ಇವರಲ್ಲಿ ಓರ್ವ ಮೃತಪಟ್ಟಿದ್ದು, ಇತರ ಇಬ್ಬರು ಅಸ್ವಸ್ಥಗೊಂಡಿದ್ದಾರೆ.

ಮ್ಯಾನ್ ಹೋಲ್ ಸ್ವಚ್ಛಗೊಳಿಸುವ ವೇಳೆ ಮೂವರು ಅಸ್ವಸ್ಥಗೊಂಡಿದ್ದರು.

ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ಮೈಸೂರಿಗೆ ದಾಖಲಿಸಲಾಗಿತ್ತು. ಆದರೆ ಅದರಲ್ಲಿ ಮಧು ಎಂಬ ವ್ಯಕ್ತಿ ಮೃತಪಟ್ಟಿದ್ದು, ಜಿಲ್ಲಾಧಿಕಾರಿಗಳ ಕಛೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿಗಳ ಕಛೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ನಾರಾಯಣ ಮಾತನಾಡಿ, ಪಿರಿಯಾಪಟ್ಟಣದಲ್ಲಿ ಆದಿದ್ರಾವಿಡ ಸಮಾಜದ ಮಧು ಅವರನ್ನು ಬಲವಂತವಾಗಿ ಇಳಿಸಿ ಒಳಚರಂಡಿ ಗುಂಡಿ ಸ್ವಚ್ಛ ಗೊಳಿಸಿದ್ದು ಮಧು ಅವರು ಅಸ್ವಸ್ಥರಾಗಿ ಸಾವನ್ನಪ್ಪಿದ್ದಾರೆ. ಮ್ಯಾನ್ ಹೋಲ್ ಗೆ ಕಾರ್ಮಿಕರನ್ನು ಇಳಿಸಬಾರದೆಂದು ನಿಯಮವಿದ್ದರೂ ಬಲವಂತದಿಂದ ಇಳಿಸಲಾಗಿದೆ. ಅವರು ಅಸ್ವಸ್ಥರಾಗಿ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬದಲ್ಲಿ ಓರ್ವರಿಗೆ ಇದೀಗ ಸರ್ಕಾರಿ ನೌಕರಿ ನೀಡಬೇಕು. ಮ್ಯಾನ್ ಹೋಲ್ ಗೆ ಬಲವಂತವಾಗಿ ಇಳಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಮೃತರ ಕುಟುಂಬಕ್ಕೆ ಪರಿಹಾರವನ್ನು ತಕ್ಷಣ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಾಕಾರರು ಮಾತನಾಡಿ ಮೃತದೇಹವನ್ನಿಟ್ಟು ಪ್ರತಿಭಟನೆ ನಡೆಸುವುದು ನಮ್ಮ ತಪ್ಪು. ನಾಗರೀಕ ಸಮಾಜ ತಲೆತಗ್ಗಿಸುವ ವಿಚಾರ. ನಮಗೂ ಗೊತ್ತು. ನಮಗೆ ಧ್ವನಿ ಇಲ್ಲ, ನಮ್ಮ ದುಃಖ ದುಮ್ಮಾನಗಳನ್ನು ಯಾವ ರೀತಿ ಹೇಳಿಕೊಳ್ಳೋದು, ನಮ್ಮ ಆಕ್ರೋಶ ವ್ಯಕ್ತಪಡಿಸಲು ಇಲ್ಲಿ ತಂದಿದ್ದೇವೆ. ತಾವು ಅನ್ಯಥಾ ಭಾವಿಸದೇ ಇಲ್ಲಿ ಘೋಷಣೆಯನ್ನು ಮಾಡಬೇಕು. ಸ್ಥಳದಲ್ಲಿ ಚೆಕ್ ನೀಡದ ಹೊರತು ನಾವು ಮೃತದೇಹವನ್ನು ತೆಗೆಯಲ್ಲ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ನೀವು ತೆಗೆದುಕೊಳ್ಳುವ ಕ್ರಮದಿಂದ ಈ ರೀತಿ ಘಟನೆಗಳು ಮರುಕಳಿಸದಂತೆ ಈ ರಾಜ್ಯಕ್ಕೆ, ಈ ಜಿಲ್ಲೆಗೆ ಒಂದು ಸಂದೇಶವನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರಲ್ಲಿ ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ಪೌರಕಾರ್ಮಿಕರ ಮಹಾಸಂಘದ ರಾಜ್ಯಾಧ್ಯಕ್ಷ  ಡಿ.ಆರ್.ರಾಜು, ರಾಜ್ಯ ಕಾರ್ಯಾಧ್ಯಕ್ಷ ಮಂಚಯ್ಯ, ರಾಜ್ಯ ಪ್ರಧಾನ ಕಾರ್ಯದರ್ಶಿ ದಿನೇಶ್ ಕುಮಾರ್, ರಮೇರ್ಶ, ಕುಮಾರ್ ಸೇರಿದಂತೆ ಹಲವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು