12:07 PM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಜೀವ ವೈವಿಧ್ಯ ರಕ್ಷಣೆಗೆ ಅಪಾರ ಕೊಡುಗೆ ನೀಡಿದ್ದ ಸಸ್ಯ ವಿಜ್ಞಾನಿ ಡಾ.ಸೂರ್ಯಪ್ರಕಾಶ್‌ ಶೆಣೈ ಇನ್ನಿಲ್ಲ

11/05/2025, 20:57

ಮಂಗಳೂರು(reporterkarnataka.com): ಡಾ. ಶಿವರಾಮ ಕಾರಂತ ನಿಸರ್ಗಧಾಮದ ಸಸ್ಯಶಾಸ್ತ್ರ ವಿಭಾಗದಲ್ಲಿ ಪ್ರಧಾನ ವಿಜ್ಞಾನಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಸೂರ್ಯಪ್ರಕಾಶ್ ಶೆಣೈ ಅವರು ಇಂದು ಬೆಳಿಗ್ಗೆ ಕಡಬದ ಹೊಸ್ಮಠದಲ್ಲಿ ತಮ್ಮ ಸ್ವಗೃಹದಲ್ಲಿ ಅನಾರೋಗ್ಯದಿಂದ ನಿಧನರಾದರು.
ಪಶ್ಚಿಮ ಘಟ್ಟದ ಸಸ್ಯಸಂಪತ್ತಿಗೆ ಜೀವ ನೀಡುವಂತೆ, ಪಿಲಿಕುಳದ 85 ಎಕರೆ ಪ್ರದೇಶದಲ್ಲಿ ಸ್ಥಾಪಿತವಾಗಿರುವ ‘ಸಸ್ಯಕಾಶಿ’ ಎಂಬ ಸಸ್ಯೋದ್ಯಾನ ನಿರ್ಮಾಣದಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದರು. ಪಶ್ಚಿಮ ಘಟ್ಟದ ಅರಣ್ಯ ಪ್ರದೇಶಗಳಿಗೆ ಭೇಟಿ ನೀಡಿ, ಬೀಜ ಸಂಗ್ರಹಿಸಿ ಗಿಡಗಳನ್ನು ಬೆಳೆಸುವ ಮೂಲಕ ಪರಿಸರ ಮತ್ತು ಜೀವವೈವಿಧ್ಯ ರಕ್ಷಣೆಗೆ ಅಪಾರ ಕೊಡುಗೆ ನೀಡಿದ್ದರು.
ಅವರು ಮಂಗಳೂರು ವಿಶ್ವವಿದ್ಯಾನಿಲಯದ ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಮೊದಲ ಎಂ.ಎಸ್ಸಿ. (1988–90) ಬ್ಯಾಚ್‌ನ ವಿದ್ಯಾರ್ಥಿಯಾಗಿದ್ದು, ನಂತರ ಅದೇ ವಿಭಾಗದಿಂದ ಎಂ.ಫಿಲ್ ಹಾಗೂ ಪಿ.ಎಚ್.ಡಿ ಪದವಿಗಳನ್ನು ಗಳಿಸಿದರು. ತಮ್ಮ ಶೋಧನೆಗಳ ಮೂಲಕ ಅನೇಕ ನಶಿಸಿಹೋಗುತ್ತಿರುವ ಹಾಗೂ ಅಪರೂಪದ ಸ್ಥಳೀಯ ಪ್ರಬೇಧದ ಸಸ್ಯಗಳನ್ನು ಪುನಶ್ಚೇತನಗೊಳಿಸಿ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ನಿಯತಕಾಲಿಕೆಗಳಲ್ಲಿ ಅನೇಕ ವೈಜ್ಞಾನಿಕ ಲೇಖನಗಳನ್ನು ಪ್ರಕಟಿಸಿದರು.
ಇಸವಿ 2000ರಲ್ಲಿ INEP ಪ್ರಾಯೋಜಿತ ಸಸ್ಯಕಾಶಿಯ ಸ್ಥಾಪನೆಯಿಂದ ಆರಂಭವಾಗಿ, 2011ರಲ್ಲಿ ಕರ್ನಾಟಕ ಜೀವವೈವಿಧ್ಯ ಮಂಡಳಿ ಸಹಾಯದಿಂದ ಪಿಲಿಕುಳದ ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ ಸ್ಥಾಪನೆಗೊಳ್ಳುವವರೆಗೆ ಅವರ ವೃತ್ತಿಪರ ಕಾರ್ಯಕ್ಷೇತ್ರ ಶ್ರೀಮಂತವಾಗಿತ್ತು. ಅವರು ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಕೇವಲ ಸಂಶೋಧಕನಾಗಿ ಮಾತ್ರವಲ್ಲ, ಮಾರ್ಗದರ್ಶಕನಾಗಿ ಅನೇಕ ವಿದ್ಯಾರ್ಥಿಗಳಿಗೆ ಸ್ಪೂರ್ತಿಯ ದೀಪವಾಗಿದ್ದರು.
ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಆಯುರ್ವೇದ ವಿದ್ಯಾರ್ಥಿಗಳಿಗಾಗಿ ಪರಿಸರ ಮತ್ತು ಸಸ್ಯಸಂರಕ್ಷಣೆಯ ಕುರಿತು ಹಲವು ತರಬೇತಿ ಶಿಬಿರಗಳನ್ನು, ಕಾರ್ಯಾಗಾರಗಳನ್ನು ಅವರು ನಡೆಸಿಕೊಟ್ಟಿದ್ದಾರೆ.
ಈ ರೀತಿಯ ವೈಜ್ಞಾನಿಕತೆಯೊಂದಿಗೆ ಮಾನವೀಯತೆಯನ್ನೂ ಹೊಂದಿದ್ದ ಡಾ. ಸೂರ್ಯಪ್ರಕಾಶ್ ಶೆಣೈ ಅವರ ಅಗಲಿಕೆ ತೀವ್ರ ಶೂನ್ಯವನ್ನು ಸೃಷ್ಟಿಸಿದೆ. ಅವರು ನೀಡಿದ ಕೊಡುಗೆಗಳು ಸದಾ ನಮ್ಮ ನೆನಪಿನಲ್ಲಿ ಜೀವಂತವಾಗಿರುತ್ತವೆ.

ಇತ್ತೀಚಿನ ಸುದ್ದಿ

ಜಾಹೀರಾತು