5:24 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಬೆಂಗಳೂರು – ಬೆಳಗಾವಿ ಸೇರಿದಂತೆ 3 ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್: ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ

10/08/2025, 13:32

ಬೆಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಬೆಂಗಳೂರು – ಬೆಳಗಾವಿ ಸೇರಿದಂತೆ 3 ವಂದೇ ಭಾರತ್ ರೈಲುಗಳಿಗೆ ಗ್ರೀನ್‌ ಸಿಗ್ನಲ್‌ ಹಾಗೂ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ ನೀಡಿದರು.


ವಂದೇ ಭಾರತ್ ಗೆ ಗ್ರೀನ್ ಸಿಗ್ನಲ್ ನೀಡಿದ ಬಳಿಕ ಪ್ರಧಾನಿ ಮತ್ತು ಗಣ್ಯರು ರಸ್ತೆ ಮಾರ್ಗವಾಗಿ ಜೆ.ಪಿ. ನಗರದ ರಾಗಿಗುಡ್ಡ ಹಳದಿ ಮೆಟ್ರೋ ನಿಲ್ದಾಣದಕ್ಕೆ ತೆರಳಿದರು.ಅಲ್ಲಿ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ ನೀಡುವರು.
ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ರೈಲ್ವೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ, ಸಚಿವ ದಿನೇಶ್ ಗುಂಡೂರಾವ್ ವಂದೇ ಭಾರತ್ ಚಾಲನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದೇ ಸಂದರ್ಭದಲ್ಲಿ ಅಮೃತ್‍ಸರ್ ದಿಂದ ಶ್ರ ಮಾತಾ ವೈಷ್ಣೋದೇವಿ ಕತ್ರಾ ಹಾಗೂ ನಾಗ್‍ಪುರ್ (ಅಜ್ನಿ) ಯಿಂದ ಪುಣೆಯ ವರೆಗೆ ಚಲಿಸಲಿರುವ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲುಗಳಿಗೂ ಸಹ ವರ್ಚುವಲ್ ಮೂಲಕ ಚಾಲನೆ ನೀಡಲಾಯಿತು.
ಬೆಂಗಳೂರಿಂದ-ಬೆಳಗಾವಿಗೆ ಕೇವಲ 8.5 ಗಂಟೆಗಳಲ್ಲಿ 611 ಕಿ.ಮೀ ದೂರವನ್ನು ಕ್ರಮಿಸಲಿದೆ. ಹಾಲಿ ಇರುವ ರೈಲಿನ ಸೇವೆಗಳಿಗಿಂತ ಬೆಂಗಳೂರಿನಿಂದ ಬೆಳಗಾವಿಗೆ 1 ಗಂಟೆ 20 ನಿಮಿಷ ಮತ್ತು ಬೆಳಗಾವಿಯಿಂದ ಬೆಂಗಳೂರಿಗೆ ಸುಮಾರು 1 ಗಂಟೆ 40 ನಿಮಿಷ ಸಮಯ ಉಳಿಸಲಿದೆ ಎಂದು ಇಲಾಖೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು