10:33 PM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಬೆಂಗಳೂರು – ಬೆಳಗಾವಿ ಸೇರಿದಂತೆ 3 ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್: ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ

10/08/2025, 13:32

ಬೆಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಬೆಂಗಳೂರು – ಬೆಳಗಾವಿ ಸೇರಿದಂತೆ 3 ವಂದೇ ಭಾರತ್ ರೈಲುಗಳಿಗೆ ಗ್ರೀನ್‌ ಸಿಗ್ನಲ್‌ ಹಾಗೂ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ ನೀಡಿದರು.


ವಂದೇ ಭಾರತ್ ಗೆ ಗ್ರೀನ್ ಸಿಗ್ನಲ್ ನೀಡಿದ ಬಳಿಕ ಪ್ರಧಾನಿ ಮತ್ತು ಗಣ್ಯರು ರಸ್ತೆ ಮಾರ್ಗವಾಗಿ ಜೆ.ಪಿ. ನಗರದ ರಾಗಿಗುಡ್ಡ ಹಳದಿ ಮೆಟ್ರೋ ನಿಲ್ದಾಣದಕ್ಕೆ ತೆರಳಿದರು.ಅಲ್ಲಿ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ ನೀಡುವರು.
ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ರೈಲ್ವೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ, ಸಚಿವ ದಿನೇಶ್ ಗುಂಡೂರಾವ್ ವಂದೇ ಭಾರತ್ ಚಾಲನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದೇ ಸಂದರ್ಭದಲ್ಲಿ ಅಮೃತ್‍ಸರ್ ದಿಂದ ಶ್ರ ಮಾತಾ ವೈಷ್ಣೋದೇವಿ ಕತ್ರಾ ಹಾಗೂ ನಾಗ್‍ಪುರ್ (ಅಜ್ನಿ) ಯಿಂದ ಪುಣೆಯ ವರೆಗೆ ಚಲಿಸಲಿರುವ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲುಗಳಿಗೂ ಸಹ ವರ್ಚುವಲ್ ಮೂಲಕ ಚಾಲನೆ ನೀಡಲಾಯಿತು.
ಬೆಂಗಳೂರಿಂದ-ಬೆಳಗಾವಿಗೆ ಕೇವಲ 8.5 ಗಂಟೆಗಳಲ್ಲಿ 611 ಕಿ.ಮೀ ದೂರವನ್ನು ಕ್ರಮಿಸಲಿದೆ. ಹಾಲಿ ಇರುವ ರೈಲಿನ ಸೇವೆಗಳಿಗಿಂತ ಬೆಂಗಳೂರಿನಿಂದ ಬೆಳಗಾವಿಗೆ 1 ಗಂಟೆ 20 ನಿಮಿಷ ಮತ್ತು ಬೆಳಗಾವಿಯಿಂದ ಬೆಂಗಳೂರಿಗೆ ಸುಮಾರು 1 ಗಂಟೆ 40 ನಿಮಿಷ ಸಮಯ ಉಳಿಸಲಿದೆ ಎಂದು ಇಲಾಖೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು