2:32 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬೈಲುಕುಪ್ಪೆಯ ಬೌದ್ಧ ವಿಹಾರದ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ: 100 ಎಕರೆ ಕಾಡಲ್ಲಿ 700 ಸ್ಥಳೀಯ ಮರಗಳ ಸಂರಕ್ಷಣೆ

27/04/2026, 20:20

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಬೌದ್ಧಪೂರ್ಣಿಮೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಕೊಡಗು ಜಿಲ್ಲೆ ಬೈಲುಕುಪ್ಪೆಯ ಬೌದ್ಧ ವಿಹಾರವನ್ನು ಸ್ಮರಿಸಿ, ಪ್ರಕೃತಿ ರಕ್ಷಣೆಗೆ ಅದು ನಡೆಸುತ್ತಿರುವ ಯತ್ನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಾಸಿಕ ಮನ್‌ ಕೀ ಬಾತ್‌ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮೇನಲ್ಲಿ ನಾವು ಬುದ್ಧ ಪೂರ್ಣಿಮೆ ಆಚರಿಸುತ್ತೇವೆ. ಎಲ್ಲ ದೇಶವಾಸಿಗಳಿಗೆ ನಾನು ಅನಂತ ಶುಭಾಶಯ ಕೋರುತ್ತೇನೆ. ಭಗವಾನ್ ಗೌತಮ ಬುದ್ಧನ ಜೀವನ ಸಂದೇಶವು ಇಂದಿಗೂ ಪ್ರಸ್ತುತ’ ಎಂದು ಹೇಳಿದರು ಹಾಗೂ ಬೌದ್ಧ ಸಂಪ್ರದಾಯವು ಹೇಗೆ ಪ್ರಕೃತಿಯೊಂದಿಗೆ ಸಂಬಂಧ ಹೊಂದಿದೆ ಎಂಬುದನ್ನು ಬೈಲುಕುಪ್ಪೆಯ ಬೌದ್ಧ ವಿಹಾರದ ಉದಾಹರಣೆಯೊಂದಿಗೆ ವಿವರಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ‘ಮನ್‌ ಕೀ ಬಾತ್’ ಕಾರ್ಯಕ್ರಮದಲ್ಲಿ, ಕರ್ನಾಟಕದ ಬೈಲುಕುಪ್ಪೆ ಬೌದ್ಧವಿಹಾರದ ಪ್ರಕೃತಿ ಸಂರಕ್ಷಣಾ ಕಾರ್ಯವನ್ನು ಶ್ಲಾಘಿಸಿದ್ದಾರೆ. 100 ಎಕರೆ ಕಾಡಿನಲ್ಲಿ 700ಕ್ಕೂ ಹೆಚ್ಚು ಸ್ಥಳೀಯ ಮರಗಳನ್ನು ಸಂರಕ್ಷಿಸಿ, ಪ್ರಕೃತಿಯೊಂದಿಗಿನ ಬೌದ್ಧ ಸಂಪ್ರದಾಯದ ಸಂಬಂಧಕ್ಕೆ ಉತ್ತಮ ಉದಾಹರಣೆಯಾಗಿದೆ.
‘ಬೌದ್ಧ ಸಂಪ್ರದಾಯವು ನಮಗೆ ಪ್ರಕೃತಿಯೊಂದಿಗೆ ಸಂಪರ್ಕ ಹೊಂದುವುದನ್ನು ಕಲಿಸುತ್ತದೆ. ಭಗವಾನ್ ಬುದ್ಧನಿಗೆ ಒಂದು ಮರದ ಕೆಳಗೆ ಜ್ಞಾನೋದಯವಾಯಿತು. ಪ್ರಕೃತಿ ನಮ್ಮ ಜೀವನದ ಅವಿಭಾಜ್ಯ ಅಂಗ. ದೇಶಾದ್ಯಂತ ಇಂತಹ ಯತ್ನ ನಡೆಯುತ್ತಲೇ ಇವೆ. ಕರ್ನಾಟಕದಲ್ಲಿರುವ ಕರ್ಮ ವಿಹಾರವು ಒಂದು ಉತ್ತಮ ಉದಾಹರಣೆ. ಈ ವಿಹಾರವು 100 ಎಕರೆ ವಿಸ್ತಾರವಾದ ರೋಮಾಂಚಕ ಅರಣ್ಯ. ಈ ಕಾಡಿನಲ್ಲಿ 700 ಕ್ಕೂ ಹೆಚ್ಚು ಸ್ಥಳೀಯ ಮರಗಳನ್ನು ಸಂರಕ್ಷಿಸಲಾಗಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು