6:50 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗಿ

28/11/2025, 07:39

ಉಡುಪಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉಡುಪಿಗೆ ಭೇಟಿ ನೀಡಲಿದ್ದು, ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣಮಠದಲ್ಲಿ ನಡೆಯುತ್ತಿರುವ ಬೃಹತ್‌ ಗೀತೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ ರೋಡ್ ಶೋ ಕೂಡ ನಡೆಯಲಿದೆ.
ನ.28ರಂದು ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರೆ.
ಪ್ರಧಾನಿ ಆಗಮನದ ಹಿನ್ನೆಯಲ್ಲಿ ಎಸ್‌ಪಿಜಿ, ಕೇಂದ್ರ ಹಾಗೂ ರಾಜ್ಯ ಗುಪ್ತಚರ ವಿಭಾಗ ಹೊರತುಪಡಿಸಿ ಸುಮಾರು 3 ಸಾವಿರಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಗುರುವಾರ ಬೆಳಗ್ಗೆ ಮೊಕ್ ಡ್ರಿಲ್ ನಡೆಸಲಾಗಿದೆ. ಉಡುಪಿ ನಗರದ ಹೃದಯ ಭಾಗದಲ್ಲಿ ಎಲ್ಲೆಲ್ಲೂ ಪೊಲೀಸರ ಸರ್ಪಗಾವಲು ಹಾಕಲಾಗಿದೆ.
ಮೋದಿ ಅವರ ಸಂಪೂರ್ಣ ಕಾರ್ಯಕ್ರಮ 40 ನಿಮಿಷ ಮುಂಚಿತವಾಗಿ ಆರಂಭವಾಗಲಿದೆ.
ರೋಡ್ ಶೋ ಕೂಡ ನಿಗದಿತ ಸಮಯಕ್ಕೆ ಮುಂಚಿತವಾಗಿ ಬೆಳಗ್ಗೆ 11ರಿಂದ 11.30ರ ವರೆಗೆ ನಡೆಯಲಿದೆ. ಕೃಷ್ಣ ದರ್ಶನದ ಬಳಿಕ ಲಕ್ಷ ಕಂಠ ಗೀತಾ ಪಾರಾಯಣ ಸಮಾರಂಭದಲ್ಲಿ ಭಾಗಿಯಾಗಿ ಮಧ್ಯಾಹ್ನ 1 ಗಂಟೆಗೆ ಪ್ರಧಾನಿ ಮೋದಿ ನಿರ್ಗಮಿಸಲಿದ್ದಾರೆ
ಶ್ರೀ ಕೃಷ್ಣಮಠದಲ್ಲಿ ದೇವರ ದರ್ಶನ ಪಡೆದು ಅನಂತರ ಗೀತಾಮಂದಿರಕ್ಕೆ ಭೇಟಿ ನೀಡಿ, ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದ ರೊಂದಿಗೆ ಮಾತುಕತೆ ನಡೆಸಿ ಪಾರ್ಕಿಂಗ್‌ ಪ್ರದೇಶದ ಸಮೀಪದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಪ್ರಧಾನಿ ಮೋದಿ ಮಂಗಳೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ ಮೂಲಕ ಉಡುಪಿಯ ಆದಿಉಡುಪಿ ಹೆಲಿಪ್ಯಾಡ್‌ಗೆ 11.35ಕ್ಕೆ ಬರುವುದು ನಿಗದಿಯಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು