5:45 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಕೃಷ್ಣನ ಸನ್ನಿಧಿಯಲ್ಲಿ ಪ್ರಧಾನಿ ಮೋದಿಗೆ ವೇದ ಮಂತ್ರಗಳ ಘೋಷದೊಂದಿಗೆ ಸ್ವಾಗತ: ಕನಕನ ಕಿಂಡಿ ಮೂಲಕ ವಿಠಲನ ದರ್ಶನ

28/11/2025, 12:33

ಉಡುಪಿ(reporterkarnataka.com); ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು.
ಮಂಗಲವಾದ್ಯ ಸಹಿತ ವೇದ ಮಂತ್ರಗಳ ಪಠಣದೊಂದಿಗೆ ಪ್ರಧಾನಿಯವರನ್ನು ಬರಮಾಡಿಕೊಳ್ಳಲಾಯಿತು. ರಥಬೀದಿಯಿಂದ ಶ್ರೀಕೃಷ್ಣ ಮಠದವರೆಗೂ ವೇದ ಮಂತ್ರಗಳ ನಿರಂತರ ಪಠಣ ನಡೆಯಿತು. ಪಂಚ ವಾದ್ಯಗಳ ಗಾನ ಎಲ್ಲೆಡೆ ಮೊಳಗಿತು. ನಿರ್ಧಿಷ್ಟ ಸ್ಥಳದಲ್ಲಿ ಪ್ರತ್ಯೇಕ ಗುಂಪುಗಳಿಂದ ಮಂಗಳ ವಾದ್ಯ, ವೇದ ಮಂತ್ರಗಳ ಘೋಷಣೆ ನಡೆಯಿತು.


ರಥಬೀದಿಯ ಆವರಣದಲ್ಲಿ ವಿಶೇಷ ಅಲಂಕಾರ ಮಾಡಲಾಗಿದೆ. ಕನಕನ ಗುಡಿಯನ್ನು ಹೂವಿನಿಂದ ಅಲಂಕರಿಸಲಾಗಿತ್ತು. ಕನಕನ ಕಿಂಡಿಗೆ ಕನಕ ಕವಚ ಹೊದಿಸಲಾಗಿತ್ತು. ಶ್ರೀಕೃಷ್ಣ ಮಠದ ಮುಖ್ಯದ್ವಾರ, ಗೀತ ಮಂದಿರ ಸೇರಿದಂತೆ ಎಲ್ಲಡೆ ದೀಪಾಲಂಕಾರ ಮಾಡಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಕನಕ ಮೂರ್ತಿಗೆ ಮಾಲಾರ್ಪಣೆ ಮಾಡಿ ಪ್ರಾರ್ಥನೆ ಸಲ್ಲಿಸಿದರು.
ಕನಕ ಕಿಂಡಿಗೆ ಜೋಡಿಸಿರುವ ಕನಕ ಕವಚವನ್ನು ಪ್ರಧಾನಿ ಉದ್ಘಾಟಿಸಿದರು. ನಂತರ ಕನಕನ ಕಿಂಡಿಯ ಮೂಲಕ ಜಗದ್ದೋದರಕನ ದರ್ಶನ ಮಾಡಿದರು. ಮಧ್ವ ಸರೋವರದಲ್ಲಿ ತೀರ್ಥ ಪ್ರೋಕ್ಷಣೆ, ಶ್ರೀಕೃಷ್ಣನ ದರ್ಶನ
ಸ್ವರ್ಣತೀರ್ಥ ಮಂಟಪ ಉದ್ಘಾಟಿಸಿದರು. ನಂತರ ಪರ್ಯಾಯ ಶ್ರೀಪಾದರ ಸಮ್ಮುಖದಲ್ಲಿ ಶ್ರೀಕೃಷ್ಣನ ಎದುರು ಕೋಟಿ ಗೀತಾ ಲೇಖನ ಯಜ್ಞ ದೀಕ್ಷೆ ಸ್ವೀಕಾರ ಮಾಡಿದರು. ನಂತರ ಚಂದ್ರಶಾಲೆಗೆ ತೆರಳಿ ಅಷ್ಟ ಮಠದ ಯತಿಗಳ ಜತೆ ಚರ್ಚೆ ನಡೆಸಿದರು. ಬಳಿಕ ಮುಖ್ಯಪ್ರಾಣರ ದರ್ಶನ ನಡೆಯಿತು. ಗೀತಾ ಮಂದಿರದಲ್ಲಿ ಪರ್ಯಾಯ ಶ್ರೀಗಳ ಜತೆ ಮಾತುಕತೆ ನಡೆಸಿದರು. ಬಳಿಕ ಅನಂತಶಯನ ಮೂರ್ತಿಯ ಉದ್ಘಾಟನೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು