8:16 AM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಕೃಷ್ಣನ ಸನ್ನಿಧಿಯಲ್ಲಿ ಪ್ರಧಾನಿ ಮೋದಿಗೆ ವೇದ ಮಂತ್ರಗಳ ಘೋಷದೊಂದಿಗೆ ಸ್ವಾಗತ: ಕನಕನ ಕಿಂಡಿ ಮೂಲಕ ವಿಠಲನ ದರ್ಶನ

28/11/2025, 12:33

ಉಡುಪಿ(reporterkarnataka.com); ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು.
ಮಂಗಲವಾದ್ಯ ಸಹಿತ ವೇದ ಮಂತ್ರಗಳ ಪಠಣದೊಂದಿಗೆ ಪ್ರಧಾನಿಯವರನ್ನು ಬರಮಾಡಿಕೊಳ್ಳಲಾಯಿತು. ರಥಬೀದಿಯಿಂದ ಶ್ರೀಕೃಷ್ಣ ಮಠದವರೆಗೂ ವೇದ ಮಂತ್ರಗಳ ನಿರಂತರ ಪಠಣ ನಡೆಯಿತು. ಪಂಚ ವಾದ್ಯಗಳ ಗಾನ ಎಲ್ಲೆಡೆ ಮೊಳಗಿತು. ನಿರ್ಧಿಷ್ಟ ಸ್ಥಳದಲ್ಲಿ ಪ್ರತ್ಯೇಕ ಗುಂಪುಗಳಿಂದ ಮಂಗಳ ವಾದ್ಯ, ವೇದ ಮಂತ್ರಗಳ ಘೋಷಣೆ ನಡೆಯಿತು.


ರಥಬೀದಿಯ ಆವರಣದಲ್ಲಿ ವಿಶೇಷ ಅಲಂಕಾರ ಮಾಡಲಾಗಿದೆ. ಕನಕನ ಗುಡಿಯನ್ನು ಹೂವಿನಿಂದ ಅಲಂಕರಿಸಲಾಗಿತ್ತು. ಕನಕನ ಕಿಂಡಿಗೆ ಕನಕ ಕವಚ ಹೊದಿಸಲಾಗಿತ್ತು. ಶ್ರೀಕೃಷ್ಣ ಮಠದ ಮುಖ್ಯದ್ವಾರ, ಗೀತ ಮಂದಿರ ಸೇರಿದಂತೆ ಎಲ್ಲಡೆ ದೀಪಾಲಂಕಾರ ಮಾಡಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಕನಕ ಮೂರ್ತಿಗೆ ಮಾಲಾರ್ಪಣೆ ಮಾಡಿ ಪ್ರಾರ್ಥನೆ ಸಲ್ಲಿಸಿದರು.
ಕನಕ ಕಿಂಡಿಗೆ ಜೋಡಿಸಿರುವ ಕನಕ ಕವಚವನ್ನು ಪ್ರಧಾನಿ ಉದ್ಘಾಟಿಸಿದರು. ನಂತರ ಕನಕನ ಕಿಂಡಿಯ ಮೂಲಕ ಜಗದ್ದೋದರಕನ ದರ್ಶನ ಮಾಡಿದರು. ಮಧ್ವ ಸರೋವರದಲ್ಲಿ ತೀರ್ಥ ಪ್ರೋಕ್ಷಣೆ, ಶ್ರೀಕೃಷ್ಣನ ದರ್ಶನ
ಸ್ವರ್ಣತೀರ್ಥ ಮಂಟಪ ಉದ್ಘಾಟಿಸಿದರು. ನಂತರ ಪರ್ಯಾಯ ಶ್ರೀಪಾದರ ಸಮ್ಮುಖದಲ್ಲಿ ಶ್ರೀಕೃಷ್ಣನ ಎದುರು ಕೋಟಿ ಗೀತಾ ಲೇಖನ ಯಜ್ಞ ದೀಕ್ಷೆ ಸ್ವೀಕಾರ ಮಾಡಿದರು. ನಂತರ ಚಂದ್ರಶಾಲೆಗೆ ತೆರಳಿ ಅಷ್ಟ ಮಠದ ಯತಿಗಳ ಜತೆ ಚರ್ಚೆ ನಡೆಸಿದರು. ಬಳಿಕ ಮುಖ್ಯಪ್ರಾಣರ ದರ್ಶನ ನಡೆಯಿತು. ಗೀತಾ ಮಂದಿರದಲ್ಲಿ ಪರ್ಯಾಯ ಶ್ರೀಗಳ ಜತೆ ಮಾತುಕತೆ ನಡೆಸಿದರು. ಬಳಿಕ ಅನಂತಶಯನ ಮೂರ್ತಿಯ ಉದ್ಘಾಟನೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು