2:49 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ಪ್ರಧಾನಿ‌ ಪಂಚರಾಷ್ಟ್ರಗಳ ಪ್ರವಾಸ ಆರಂಭ: ಮೋದಿಯಿದ್ದ ವಿಮಾನಕ್ಕೆ ಯುಎಇ ಎಫ್ 16 ಜೆಟ್‌ಗಳ ಬೆಂಗಾವಲು

15/05/2026, 18:45

ನವದೆಹಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಪಂಚರಾಷ್ಟ್ರಗಳ ಪ್ರವಾಸ ಆರಂಭಿಸಿದ್ದು ಮೊದಲ ರಾಷ್ಟ್ರವಾಗಿ ಯುಎಇ ಗೆ ತಲುಪಿದ್ದಾರೆ. ಮಧ್ಯಪ್ರಾಚ್ಯ ಸಂಘರ್ಷದ ವಲಯವಾದ ಕಾರಣ ಪ್ರಧಾನಿ ಮೋದಿ ಅವರು ಪ್ರಯಾಣಿಸುತ್ತಿದ್ದ ವಿಮಾನ ಯುಎಇ ವಾಯುಪ್ರದೇಶವನ್ನು ಪ್ರವೇಶಿಸುತ್ತಿದ್ದಂತೆ ಯುಎಇ ಎಫ್ 16 ಜೆಟ್‌ಗಳು ಬೆಂಗಾವಲು ನೀಡಿದವು. ಅಬುಧಾಬಿಗೆ ಬಂದಿಳಿದ ಮೋದಿಗೆ ಗೌರವ ರಕ್ಷೆ ನೀಡಲಾಯಿತು. ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗಿನ ನಿಯೋಗ ಮಟ್ಟದ ಮಾತುಕತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾದರು.
ಪ್ರಧಾನಿ ಮೋದಿ ಮಾತನಾಡಿ “ನಿಮ್ಮ ಆತ್ಮೀಯ ಸ್ವಾಗತಕ್ಕಾಗಿ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇನೆ. ನೀವು ಹೇಳಿದಂತೆ – ನಾನು ನನ್ನ ಎರಡನೇ ಮನೆಗೆ ಬಂದಿದ್ದೇನೆ. ಈ ಭಾವನೆ ನನ್ನ ಜೀವನದ ದೊಡ್ಡ ಬಂಡವಾಳ. ನಿಮ್ಮ ವಾಯುಪಡೆಯ ಜೆಟ್‌ಗಳು ಇಂದು ನನ್ನನ್ನು ಬೆಂಗಾವಲು ಮಾಡಿದವು. ಇದು ಭಾರತದ ಜನರಿಗೆ ನೀಡಿದ ಗೌರವ” ಎಂದು ಹೇಳಿದರು.
“ಕಳೆದ ಕೆಲವು ದಿನಗಳಲ್ಲಿ ಭಾರತದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಕುಟುಂಬಗಳಿಗೆ ನೀವು ಸಂತಾಪ ಸೂಚಿಸಿದ್ದೀರಿ. ಇದಕ್ಕಾಗಿ ನಾನು ನಿಮಗೆ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ”ಎಂದು ಮೋದಿ ಹೇಳಿದರು.
“ನಾನು ನಿಮ್ಮೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದೆ, ಆದರೆ ನಿಮ್ಮನ್ನು ವೈಯಕ್ತಿಕವಾಗಿ ಭೇಟಿಯಾಗಲು ನಾನು ತುಂಬಾ ಉತ್ಸುಕನಾಗಿದ್ದೆ”ಎಂದು ಶೇಖ್ ಮೊಹಮ್ಮದ್ ಬಿನ್ ಅವರಿಗೆ ಮೋದಿ ಹೇಳಿದರು.


ಪ್ರಧಾನಿ ನರೇಂದ್ರ ಮೋದಿ ಮತ್ತು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ಸಮ್ಮುಖದಲ್ಲಿ ಭಾರತ ಮತ್ತು ಯುಎಇ ಹಲವು ಪ್ರಮುಖ ಒಪ್ಪಂದಗಳನ್ನು ವಿನಿಮಯ ಮಾಡಿಕೊಂಡವು.
ಘೋಷಿಸಲಾದ ಪ್ರಮುಖ ಒಪ್ಪಂದಗಳು ಮತ್ತು ಹೂಡಿಕೆ ನಿರ್ಧಾರಗಳು ಭಾರತ ಮತ್ತು ಯುಎಇ ನಡುವಿನ ಕಾರ್ಯತಂತ್ರದ ರಕ್ಷಣಾ ಪಾಲುದಾರಿಕೆಗಾಗಿ ಚೌಕಟ್ಟಿನ ಒಪ್ಪಂದ
ಕಾರ್ಯತಂತ್ರದ ಪೆಟ್ರೋಲಿಯಂ ನಿಕ್ಷೇಪಗಳ ಕುರಿತು ಎಂಒಯು
ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಪೂರೈಕೆಯ ಕುರಿತು ಒಪ್ಪಂದ ವಾಡಿನಾರ್‌ನಲ್ಲಿ ಹಡಗು ದುರಸ್ತಿ ಕ್ಲಸ್ಟರ್ ಸ್ಥಾಪಿಸುವ ಕುರಿತು ಎಂಒಯು ಭಾರತೀಯ ಮೂಲಸೌಕರ್ಯ ಮತ್ತು ಆರ್‌ಬಿಎಲ್ ಬ್ಯಾಂಕ್ ಮತ್ತು ಸಮ್ಮಾನ್ ಕ್ಯಾಪಿಟಲ್‌ನಲ್ಲಿ 5 ಬಿಲಿಯನ್ ಯುಎಸ್ ಡಾಲರ್‌ಗಳ ಹೂಡಿಕೆ ಘೋಷಣೆ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು