8:55 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಪೊಳಲಿ ದ್ವಾರ: ಗುರುಪುರ- ಪೊಳಲಿ ರಾಷ್ಟ್ರೀಯ ಹೆದ್ದಾರಿಗೆ ಕುಸಿತದ ಭೀತಿ; ವಾಹನ ಸಂಚಾರ ಬದಲು 

05/07/2022, 23:51

ಗುರುಪುರ(reporterkarnataka.com):  ಮಂಗಳೂರು -ಕಾರ್ಕಳ ರಾಷ್ಟ್ರೀಯ ಹೆದ್ದಾರಿ169   ಪೊಳಲಿ ದ್ವಾರದ ಅಣೆ ವನಭೋಜನ ಎಂಬಲ್ಲಿ   ಹೆದ್ದಾರಿಯ ಬದಿ ಕುಸಿದು ಅಪಾಯಕ್ಕೆ ಸಿಲುಕಿದೆ.

ಹೆದ್ದಾರಿಯ ಪಕ್ಕದಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿ, ಹೆದ್ದಾರಿ ಕುಸಿಯುವ ಭೀತಿ ಎದುರಾಗಿದೆ. ಸದ್ಯ ಮಂಗಳೂರು-ಮೂಡಬಿದ್ರೆ ಭಾಗದ ಬಸ್ ಸಹಿತ ಘನ ವಾಹನ ಸಂಚಾರವನ್ನು ಪರ್ಯಾಯ ರಸ್ತೆಗೆ ವರ್ಗಾಯಿಸಲಾಗಿದೆ.

ಪರ್ಯಾಯ ಮಾರ್ಗ: ಗುರುಪುರ -ಕೈಕಂಬ ಜಂಕ್ಷನ್‍ನಿಂದ ಬಜ್ಪೆ ಮರವೂರಾಗಿ ನಗರ ಪ್ರವೇಶಿಸುವಂತೆ  ಸಂಚಾರ ವ್ಯವಸ್ಥೆ ಮಾಡಲಾಗಿದೆ. ಕೆಲವು ವಾಹನಗಳಿಗೆ ಪಂಚಾಯತ್ ರಸ್ತೆ ಮೂಲಕ ಬಂಡಸಾಲೆಯಾಗಿ ಮುಂದುವರಿಯಲು ಅವಕಾಶ ಕಲ್ಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು