3:07 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಪೋಲೆಂಡ್ ತಲುಪಿದ ಗೋಣಿಕೊಪ್ಪದ ಶೀತಲ್ ಸಂಪತ್: ಯುದ್ಧಪೀಡಿತ ಉಕ್ರೇನ್’ನಿಂದ ಪಯಣ

05/03/2022, 10:52

ಮಡಿಕೇರಿ(reporterkarnataka.com):

ಯುದ್ಧಗ್ರಸ್ತ ಯುಕ್ರೇನ್ ದೇಶದ ಕಾರ್ವೀಕ್ ಪಟ್ಟಣದಲ್ಲಿ ವಿದ್ಯಾಭ್ಯಾಸಕ್ಕಾಗಿ ತೆರಳಿದ್ದ ಜಿಲ್ಲೆಯ ಯುವತಿ ಸುರಕ್ಷಿತವಾಗಿ ಪಕ್ಕದ ದೇಶದ ಪೋಲೆಂಡ್’ನ್ನು ತಲುಪಿದ್ದಾರೆ.

ಗೋಣಿಕೊಪ್ಪ ನಿವಾಸಿ ಪ್ರಸ್ತುತ ಕತಾರ್’ನಲ್ಲಿರುವ ಬಲ್ಲಡಿಚಂಡ ಸಂಪತ್ ಅವರ ಪುತ್ರಿ ಶೀತಲ್ ಸಂಪತ್ ಕಾರ್ವಿಕ್ ಪಟ್ಟಣದಲ್ಲಿ ವೈದ್ಯಕೀಯ ಶಿಕ್ಷಣದಲ್ಲಿ ಪದವಿ ಪಡೆಯಲು ತೆರಳಿದ್ದರು.

ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ಆರಂಭಗೊಂಡ ನಂತರ ಮರಳಿ ತವರು ನೆಲಕ್ಕೆ ಬರಲು ಯತ್ನಿಸಿದ್ದರು. ಆದರೆ ಇವರು ಸೇರಬೇಕಾಗಿದ್ದ ನೆಲೆ ಹಲವು ಸಾವಿರ ಕಿ.ಮೀ. ಇದ್ದುದರಿಂದ ಯಶಸ್ವಿಯಾಗಿರಲಿಲ್ಲ.

ಆದರೆ ಈ ಬಾರಿ ಶೀತಲ್ ಸಂಪತ್ ಕಾರ್ವಿಕ್ ಪಟ್ಟಣದಿಂದ ಅಂದಾಜು 1,300 ಕಿ ಮೀ ದೂರದ ಪೋಲೆಂಡ್ ದೇಶವನ್ನು ಬುಧವಾರ ತಲುಪಿದ್ದು, ಸದ್ಯ ಭಾರತೀಯ ದೂತಾವಾಸ ಕಚೇರಿಯೊಂದಿಗೆ ಸಂಪರ್ಕದಲ್ಲಿದ್ದಾರೆ.

ಪೋಲೆಂಡ್ ದೇಶದಲ್ಲಿರುವ ಭಾರತ ರಾಯಭಾರಿ ಕಚೇರಿಯು ಉಕ್ರೇನ್ ದೇಶದಿಂದ ಆಗಮಿಸುತ್ತಿರುವ ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸುತ್ತಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ಏರ್ ಲಿಫ್ಟ್ ಆಗುವ ಆಶಾಭಾವನೆಯನ್ನು ಶೀತಲ್ ಸಂಪತ್ ವ್ಯಕ್ತಪಡಿಸಿದ್ದಾರೆ.

ಭಾರತೀಯ ವಿದ್ಯಾರ್ಥಿಗಳ ಯೋಗಕ್ಷೇಮಕ್ಕಾಗಿ ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾಧ್ಯ ಸಿಂಧ್ಯಾ ಪೋಲೆಂಡ್’ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಶೀತಲ್ ಅವರು ಭಾರತಕ್ಕೆ ಆಗಮಿಸಿದ‌ ಬಳಿಕ ಕತಾರ್’ಗೆ ತೆರಳಿ ತಂದೆಯನ್ನು ಸೇರಿಕೊಳ್ಳಲಿರುವುದಾಗಿ ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು