11:13 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಡಿಸಿಎಂ ಖಡಕ್ ವಾರ್ನಿಂಗ್: ಇಲಾಖೆಯನ್ನು ಕೇಸರೀಕರಣ ಮಾಡಲು ಬಿಡೋಲ್ಲ ಎಂದು ಡಿ.ಕೆ. ಶಿವಕುಮಾರ್

23/05/2023, 21:03

ಬೆಂಗಳೂರು(reporterkarnataka.com): ಏನು ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡಲು ಹೊರಟ್ಟಿದ್ದೀರಾ? ಸಿದ್ದರಾಮಯ್ಯ ಹಾಗೂ ನನ್ನ ಜತೆ ನೀವು ಹೇಗೆ ನಡೆದುಕೊಂಡಿದ್ದೀರಿ ಎನ್ನುವುದು ಗೊತ್ತು. ಇಲಾಖೆಯನ್ನು ಕೇಸರೀಕರಣ ಮಾಡಲು ಬಿಡೋದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ವಾರ್ನಿಂಗ್ ನೀಡಿದರು.
ವಿಧಾನಸೌಧದಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಜತೆಗಿನ ಸಭೆಯಲ್ಲಿ ಅವರು ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸ್ಥಿತರಿದ್ದರು.
ಸಭೆಯುದ್ದಕ್ಕೂ ಡಿ.ಕೆ. ಶಿವಕುಮಾರ್ ಅವರು ಪೊಲೀಸ್ ಅಧಿಕಾರಿಗಳ ಮೇಲೆ ಗರಂ ಆಗಿಯೇ ಇದ್ದರು. ಬಿಜೆಪಿ ಆಡಳಿತ ಕಾಲದಲ್ಲಿ ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡಲು ಹೊರಟ್ಟಿದ್ದೀರಿ. ಇದೆಲ್ಲ ನಮ್ಮ ಆಡಳಿತದಲ್ಲಿ ನಡೆಯೋದಿಲ್ಲ ಎಂದು ಎಚ್ಚರಿಕೆ ನೀಡಿದೆ.
ಪಿಎಸ್ ಐ ಹಗರಣದಲ್ಲಿ ಪೊಲೀಸ್ ಇಲಾಖೆ ಶಾಮಿಲಾದ ಬಗ್ಗೆ ಮಾತನಾಡಿದ ಡಿಸಿಎಂ, ಒಬ್ಬರು ಎಡಿಜಿಪಿ ಪೇಪರ್ ತಿದ್ದುವ ಕೆಲಸ ಮಾಡಿದ್ದಾರೆ. ನೀವು ನಮಗೆ ಹಣ ಮಾಡಿ ಕೊಡುವುದು ಬೇಡ. ಜನರಿಗೆ ಸರಿಯಾದ ಸೇವೆ ನೀಡಿ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು