3:13 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

20ಗಂಟೆಯೊಳಗೆ ಕಳ್ಳರನ್ನು ಬಂಧಿಸಿದ ಪೊಲೀಸರು ; ಮೂರು ಮನೆಯಿಂದ 20ಲಕ್ಷ ಮೌಲ್ಯದ ಕಳವು ಮಾಡಿದ್ದ ಖದೀಮರು ಅಂದರ್ !

21/10/2025, 19:21

ಮಂಗಳೂರು(reporterkarnataka.com): ಮಂಗಳೂರು ಲಾಲ್ ಬಾಗ್ ಹ್ಯಾಟ್ ಹಿಲ್‌ನ ಅಪಾರ್ಟ್‌ಮೆಂಟ್‌ನಲ್ಲಿ ನಡೆದ ₹20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಾಗೂ ವಿದೇಶಿ ಕರೆನ್ಸಿ ಕಳವು ಪ್ರಕರಣವನ್ನು ಉರ್ವಾ ಪೊಲೀಸರು ಕೇವಲ 20 ಗಂಟೆಗಳಲ್ಲಿ ಪತ್ತೆಹಚ್ಚಿ ಇಬ್ಬರು ಅಸ್ಸಾಂ ಮೂಲದ ಕಳ್ಳರಾದ ಅಭಿಜಿತ್ ದಾಸ್ (24) ಮತ್ತು ದೇಬಾ ದಾಸ್ (21)ರನ್ನು ಬಂಧಿಸಿದ್ದಾರೆ.

ಅ.19ರ ರಾತ್ರಿ ಕಳ್ಳರು ಮೂರು ಫ್ಲಾಟ್‌ಗಳಿಗೆ ನುಗ್ಗಿ ಚಿನ್ನಾಭರಣ, ₹5,000 ನಗದು, 3,000 ದಿರ್ಹಾಮ್ ಹಾಗೂ ಮೊಬೈಲ್‌ಫೋನ್ ಕಳವು ಮಾಡಿದ್ದರು. ರಿಯಾಜ್ ರಶೀದ್ ಅವರ ದೂರಿನ ಮೇರೆಗೆ ಪ್ರಕರಣ ದಾಖಲಾದ ಬಳಿಕ ಪೊಲೀಸರು ಶ್ವಾನ ದಳ ಹಾಗೂ ಫಿಂಗರ್‌ಪ್ರಿಂಟ್ ತಜ್ಞರ ಸಹಾಯದಿಂದ ತನಿಖೆ ಆರಂಭಿಸಿದರು.

ಮಂಗಳೂರು ಉರ್ವಾ ಠಾಣಾ ತಂಡವು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಬೆಂಗಳೂರಿನಲ್ಲಿ ಬಂಧನ ಕಾರ್ಯಾಚರಣೆ ನಡೆಸಿ ಕಳವು ಮಾಡಿದ ಎಲ್ಲಾ ವಸ್ತುಗಳನ್ನು ವಶಕ್ಕೆ ಪಡೆದಿದೆ. ಆರೋಪಿಗಳಲ್ಲಿ ಒಬ್ಬನಾದ ಅಭಿಜಿತ್ ದಾಸ್ ವಿರುದ್ಧ ಹಿಂದೆಯೂ ಬೆಂಗಳೂರು ಹಾಗೂ ಅಸ್ಸಾಂ ರಾಜ್ಯಗಳಲ್ಲಿ ಮನೆ ಕಳ್ಳತನ ಪ್ರಕರಣಗಳು ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗೆ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಈ ಕಾರ್ಯಾಚರಣೆಯನ್ನು ಡಿ.ಸಿ.ಪಿ. (ಕ್ರೈಂ) ಅವರ ಮೇಲ್ವಿಚಾರಣೆಯಲ್ಲಿ ಉರ್ವಾ ಠಾಣಾ ಸಿಬ್ಬಂದಿ ಯಶಸ್ವಿಯಾಗಿ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು