7:01 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಪೊಲೀಸರ ಭಯ ಹೋಗಬೇಕಾದರೆ ಸಂಚಾರ ನಿಯಮ ಪಾಲಿಸಬೇಕು: ಯೇನಪೊಯ ವಿವಿ ಕುಲಪತಿ ಡಾ. ವಿಜಯ ಕುಮಾರ್

11/01/2024, 20:41

ಮಂಗಳೂರು(reporterkarnataka.com): ನಮ್ಮಲ್ಲಿ ಪೊಲೀಸರ ಭಯ ಹೋಗಬೇಕಾದರೆ ಸಂಚಾರ ನಿಯಮಗಳನ್ನು ಪಾಲಿಸಬೇಕು. ಜೀವನದಲ್ಲಿ ಇಂತಹ ಶಿಸ್ತು ಪಾಲನೆ ಮಾಡಿದರೆ ಉತ್ತಮ ಸ್ಥಾನಕ್ಕೆ ಏರಲು ಸಾಧ್ಯವಿದೆ ಎಂದು ಯೇನಪೊಯ ವಿಶ್ವವಿದ್ಯಾನಿಲಯದ ಕುಲಪತಿ ಡಾ. ವಿಜಯಕುಮಾರ್ ಹೇಳಿದರು.

ಅವರು ಗುರುವಾರ ಮಂಗಳೂರು ನಗರ ಸಂಚಾರ ಪೊಲೀಸ್ ವಿಭಾಗದ ವತಿಯಿಂದ ಸಾರಿಗೆ ಇಲಾಖೆ – ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಸಹಯೋಗದಲ್ಲಿ ಡಾ. ಟಿಎಂಎ ಪೈ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ -2024 ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ize-medium wp-image-58505″ />
ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತೀ ವರ್ಷ ಸಂಚಾರ ಸುರಕ್ಷತಾ ಸಪ್ತಾಹ ಆಯೋಜಿಸಲಾಗುತ್ತಿದೆ. ಅಪಘಾತಗಳ ಸಂಖ್ಯೆ ಕಡಿಮೆ ಆಗಿದೆಯೇ ಎಂದು ನೋಡಿದರೆ ಇಲ್ಲ ಎನ್ನುವ ಉತ್ತರ ದೊರೆಯುತ್ತದೆ. ಕುಟುಂಬಕ್ಕೆ ನೆರವಾಗಬೇಕಾದ ವಯಸ್ಸಿನಲ್ಲಿ ಅಪಘಾತಕ್ಕೆ ಬಲಿಯಾಗುವುದು ನಿಜಕ್ಕೂ ದುರಂತ. ಸಂಚಾರ ನಿಯಮಗಳನ್ನು ಪಾಲಿಸುವ ಮೂಲಕ ದುರಂತಗಳನ್ನು ತಡೆಯುವುದು ಪ್ರತಿಯೊಬ್ಬರ ಕರ್ತವ್ಯವೂ ಆಗಿದೆ ಎಂದರು.

ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತ ಬಿ.ಪಿ. ದಿನೇಶ್ ಕುಮಾರ್ ಅವರು ಪ್ರಸ್ತಾವಿಕವಾಗಿ ಮಾತನಾಡಿ, ನಗರದಲ್ಲಿ ಪ್ರತಿ ವರ್ಷ ೬೦೦-೮೦೦ ಅಪಘಾತಗಳು ಸಂಭವಿಸುತ್ತಿದ್ದು, ೮೦೦-೯೦೦ ಮಂದಿ ಗಾಯಾಳುಗಳಾದರೆ, ೧೦೦-೧೨೦ ಮಂದಿ ಸಾವನ್ನಪ್ಪುತ್ತಿದ್ದಾರೆ. ಆದ್ದರಿಂದ ಪ್ರತಿಯೊಬ್ಬರೂ ವಾಹನ ಚಾಲನಾ ಮತ್ತು ರಸ್ತೆ ಬಳಕೆ ನಿಯಮಾವಳಿಗಳನ್ನು ತಿಳಿದುಕೊಳ್ಳಬೇಕಾದ ಅಗತ್ಯವಿದೆ ಎಂದರು.


ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಆರ್‌ಎಂಒ ಡಾ. ಸುಧಾಕರ್, ಸಿಎಆರ್ ಮಂಗಳೂರು ಪೊಲೀಸ್ ಉಪ ಆಯುಕ್ತ ಪಿ. ಉಮೇಶ್, ಸಾರಿಗೆ ಉಪ ಆಯುಕ್ತ ಹಾಗೂ ಹಿರಿಯ ಸಾರಿಗೆ ಅಽಕಾರಿ ಶ್ರೀಧರ್ ಕೆ.ಮಲ್ಲಾಡ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಎಂ.ಜಿ. ಕಜೆ, ಮಂಗಳೂರು ವಿಶ್ವ ವಿದ್ಯಾನಿಲಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ,ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕ, ಸೇವಕಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಸಂಚಾರ ವಿಭಾಗದ ಎಸಿಪಿ ಗೀತಾ ಕುಲಕರ್ಣಿ ಅವರು ರಸ್ತೆ ಸಂಚಾರದ ವೇಳೆ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಕುರಿತು ಮಕ್ಕಳಿಗೆ ವಿವರಿಸಿದರು. ನಗರದಲ್ಲಿ ಸಂಚಾರ ನಿಯಂತ್ರಣಕ್ಕೆ ಸ್ವಯಂ ಪ್ರೇರಣೆಯಿಂದ ಶ್ರಮಿಸುತ್ತಿರುವ ಟ್ರಾಫಿಕ್ ವಾರ್ಡನ್‌ಗಳಾದ ಫ್ರಾನ್ಸಿಸ್ ಮೊರಾಸ್, ರೋಶನ್ ಸಿಕ್ವೇರಾ, ರಮೇಶ್ ಕಾವೂರು ಅವನ್ನು ಸಮ್ಮಾನಿಸಲಾಯಿತು. ಅತ್ಯುತ್ತಮ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬಂದಿಯವರಿಗೆ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.



ಮಂಗಳೂರು ದಕ್ಷಿಣ ಸಂಚಾರ ಠಾಣೆ ಇನ್ಸ್ ಪೆಕ್ಟರ್ ರಮೇಶ್ ಹಾನಾಪುರ ಸ್ವಾಗತಿಸಿದರು.


ಆರ್‌ಜೆ ಪ್ರಸನ್ನ ಮತ್ತು ಅಕ್ಷತಾ ಶೆಣೈ ‘ ಕಾರ್ಯಕ್ರಮ ನಿರೂಪಿಸಿದರು. ಇನ್ಸ್‌ಪೆಕ್ಟರ್ ಮೊಹಮ್ಮದ್ ಶರೀಫ್ ಅವರು ವಂದಿಸಿದರು. ಕಮಿಷನರೇಟ್ ವ್ಯಾಪ್ತಿಯ ವಿವಿಧ ಶಾಲೆ – ಕಾಲೇಜುಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು