2:34 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಪೊಲೀಸ್ ಧ್ವಜ ಮೆರವಣಿಗೆ: ಕಡಲನಗರಿಯ ಸರ್ವಿಸ್ ಬಸ್ ನಿಲ್ದಾಣದೊಳಗೆ ಖಾಸಗಿ ವಾಹನಗಳ ಸುನಾಮಿ!; ಟ್ರಾಫಿಕ್ ಜಾಮ್

25/04/2023, 22:07

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಜನರು ನಿರ್ಭೀತಿಯಿಂದ ಮತ ಚಲಾಯಿಸುವಂತೆ ಮಾಡುವ ನಿಟ್ಟಿನಲ್ಲಿ ಜನರಲ್ಲಿ ಧೈರ್ಯ ತುಂಬಲು ನಡೆಸಲಾದ ಪೊಲೀಸ್ ಪಥಸಂಚಲನದಿಂದ ನಗರದ ಆಯಕಟ್ಟಿನ ಪ್ರದೇಶದಲ್ಲಿ ಮಂಗಳವಾರ ಸಂಜೆ ಟ್ರಾಫಿಕ್ ಜಾಮ್ ಉಂಟಾಯಿತು. ಖಾಸಗಿ ಸರ್ವಿಸ್ ಬಸ್ ನಿಲ್ದಾಣ ಅಕ್ಷರಶಃ ಕಿಷ್ಕಿಂಧೆಯಾಗಿ ಪರಿವರ್ತನೆಗೊಂಡಿತು.

ಪೊಲೀಸ್ ಪಥಸಂಚಲನ ಸಾಗುವ ಹಿನ್ನೆಲೆಯಲ್ಲಿ ಹ್ಯಾಮಿಲ್ಟನ್ ಸರ್ಕಲ್ ಆಗಿ ಸ್ಟೇಟ್ ಬ್ಯಾಂಕ್ ಕಡೆಗೆ ಸಾಗಲು ಯಾವುದೇ ವಾಹನಗಳಿಗೆ ಪೊಲೀಸರು ಅವಕಾಶ ನೀಡಲಿಲ್ಲ. ಪೊಲೀಸ್ ಕಮಿಷನರ್ ಕಚೇರಿಯ ಎದುರುಗಡೆ ಇರುವ ರಸ್ತೆಯ ಮೂಲಕ ಖಾಸಗಿ ಸಿಟಿ ಬಸ್, ಸರ್ವಿಸ್ ಬಸ್ ಹಾಗೂ ಸರಕಾರಿ ಬಸ್ ಗಳ ಜತೆಗೆ ಎಲ್ಲ ಖಾಸಗಿ ವಾಹನಗಳಿಗೆ, ಆಟೋರಿಕ್ಷಾಗಳಿಗೆ ಸಾಗಲು ಅವಕಾಶ ನೀಡಲಾಯಿತು. ಇದರಿಂದ ಸಂಜೆ ಸುಮಾರು 6.45ರ ವೇಳೆಗೆ ವಾಹನಗಳ ಸುನಾಮಿಯೇ ಒಮ್ಮಿಂದೊಮ್ಮೆಲೇ ಸರ್ವಿಸ್ ಬಸ್ ನಿಲ್ದಾಣದೊಳಗೆ ನುಗ್ಗಿತು. ಇದರಿಂದ ಬಸ್ ನಿಲ್ದಾಣದಲ್ಲಿದ್ದ ಪ್ರಯಾಣಿಕರು ಸ್ವಲ್ಪ ಹೊತ್ತು ಗಲಿಬಿಲಿಗೊಂಡರು. ಹಾಗೆ ಒಂದು ಕ್ಷಣದಲ್ಲಿ ಬಸ್ ಸ್ಟಾಂಡ್ ಕಿಷ್ಕಿಂಧೆಯಾಗಿ ಪರಿವರ್ತನೆಗೊಂಡಿತು. ಇದರ ಪರಿಣಾಮ ಲೇಡಿಗೋಶನ್ , ಹಂಪನಕಟ್ಟೆ ಸುತ್ತಮುತ್ತಲಿನ ಪ್ರದೇಶ ಮಾತ್ರವಲ್ಲದೆ ನವಭಾರತ ಸರ್ಕಲ್ ವರೆಗೆ ಟ್ರಾಫಿಕ್ ಜಾಮ್ ಉಂಟಾಯಿತು. ಇನ್ನೊಂದು ಕಡೆಯಲ್ಲಿ ಜ್ಯೋತಿ ವರೆಗೆ, ಮತ್ತೊಂದು ಕಡೆಯಲ್ಲಿ ಪಳ್ನೀರ್ ವರೆಗೆ ಸುಗಮ ಸಂಚಾರಕ್ಕೆ ಅಡ್ಡಿಯಾಯಿತು. ಆದರೆ ಒಂದು ತಾಸಿನೊಳಗೆ ಎಲ್ಲವೂ ಕ್ಲಿಯರ್ ಆಗಿ ಸುಗಮ ಸಂಚಾರ ತೆರೆದುಕೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು