2:25 PM Wednesday30 - July 2025
ಬ್ರೇಕಿಂಗ್ ನ್ಯೂಸ್
USA | ಡ್ರೈವರ್ ಇಲ್ಲದ ಕಾರಿನಲ್ಲಿ ಪ್ರಯಾಣಿಸಿದ ಸ್ಪೀಕರ್ ಯು.ಟಿ. ಖಾದರ್!: ಇದು… Bangaluru | ಪತ್ರಿಕಾ ಸಂಪಾದಕರ ಕೈಕಟ್ಟಿ ಹಾಕಲಾಗುತ್ತಿದೆ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ… Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ… ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ…

ಇತ್ತೀಚಿನ ಸುದ್ದಿ

ಪೊಲೀಸ್ ಧ್ವಜ ಮೆರವಣಿಗೆ: ಕಡಲನಗರಿಯ ಸರ್ವಿಸ್ ಬಸ್ ನಿಲ್ದಾಣದೊಳಗೆ ಖಾಸಗಿ ವಾಹನಗಳ ಸುನಾಮಿ!; ಟ್ರಾಫಿಕ್ ಜಾಮ್

25/04/2023, 22:07

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಜನರು ನಿರ್ಭೀತಿಯಿಂದ ಮತ ಚಲಾಯಿಸುವಂತೆ ಮಾಡುವ ನಿಟ್ಟಿನಲ್ಲಿ ಜನರಲ್ಲಿ ಧೈರ್ಯ ತುಂಬಲು ನಡೆಸಲಾದ ಪೊಲೀಸ್ ಪಥಸಂಚಲನದಿಂದ ನಗರದ ಆಯಕಟ್ಟಿನ ಪ್ರದೇಶದಲ್ಲಿ ಮಂಗಳವಾರ ಸಂಜೆ ಟ್ರಾಫಿಕ್ ಜಾಮ್ ಉಂಟಾಯಿತು. ಖಾಸಗಿ ಸರ್ವಿಸ್ ಬಸ್ ನಿಲ್ದಾಣ ಅಕ್ಷರಶಃ ಕಿಷ್ಕಿಂಧೆಯಾಗಿ ಪರಿವರ್ತನೆಗೊಂಡಿತು.

ಪೊಲೀಸ್ ಪಥಸಂಚಲನ ಸಾಗುವ ಹಿನ್ನೆಲೆಯಲ್ಲಿ ಹ್ಯಾಮಿಲ್ಟನ್ ಸರ್ಕಲ್ ಆಗಿ ಸ್ಟೇಟ್ ಬ್ಯಾಂಕ್ ಕಡೆಗೆ ಸಾಗಲು ಯಾವುದೇ ವಾಹನಗಳಿಗೆ ಪೊಲೀಸರು ಅವಕಾಶ ನೀಡಲಿಲ್ಲ. ಪೊಲೀಸ್ ಕಮಿಷನರ್ ಕಚೇರಿಯ ಎದುರುಗಡೆ ಇರುವ ರಸ್ತೆಯ ಮೂಲಕ ಖಾಸಗಿ ಸಿಟಿ ಬಸ್, ಸರ್ವಿಸ್ ಬಸ್ ಹಾಗೂ ಸರಕಾರಿ ಬಸ್ ಗಳ ಜತೆಗೆ ಎಲ್ಲ ಖಾಸಗಿ ವಾಹನಗಳಿಗೆ, ಆಟೋರಿಕ್ಷಾಗಳಿಗೆ ಸಾಗಲು ಅವಕಾಶ ನೀಡಲಾಯಿತು. ಇದರಿಂದ ಸಂಜೆ ಸುಮಾರು 6.45ರ ವೇಳೆಗೆ ವಾಹನಗಳ ಸುನಾಮಿಯೇ ಒಮ್ಮಿಂದೊಮ್ಮೆಲೇ ಸರ್ವಿಸ್ ಬಸ್ ನಿಲ್ದಾಣದೊಳಗೆ ನುಗ್ಗಿತು. ಇದರಿಂದ ಬಸ್ ನಿಲ್ದಾಣದಲ್ಲಿದ್ದ ಪ್ರಯಾಣಿಕರು ಸ್ವಲ್ಪ ಹೊತ್ತು ಗಲಿಬಿಲಿಗೊಂಡರು. ಹಾಗೆ ಒಂದು ಕ್ಷಣದಲ್ಲಿ ಬಸ್ ಸ್ಟಾಂಡ್ ಕಿಷ್ಕಿಂಧೆಯಾಗಿ ಪರಿವರ್ತನೆಗೊಂಡಿತು. ಇದರ ಪರಿಣಾಮ ಲೇಡಿಗೋಶನ್ , ಹಂಪನಕಟ್ಟೆ ಸುತ್ತಮುತ್ತಲಿನ ಪ್ರದೇಶ ಮಾತ್ರವಲ್ಲದೆ ನವಭಾರತ ಸರ್ಕಲ್ ವರೆಗೆ ಟ್ರಾಫಿಕ್ ಜಾಮ್ ಉಂಟಾಯಿತು. ಇನ್ನೊಂದು ಕಡೆಯಲ್ಲಿ ಜ್ಯೋತಿ ವರೆಗೆ, ಮತ್ತೊಂದು ಕಡೆಯಲ್ಲಿ ಪಳ್ನೀರ್ ವರೆಗೆ ಸುಗಮ ಸಂಚಾರಕ್ಕೆ ಅಡ್ಡಿಯಾಯಿತು. ಆದರೆ ಒಂದು ತಾಸಿನೊಳಗೆ ಎಲ್ಲವೂ ಕ್ಲಿಯರ್ ಆಗಿ ಸುಗಮ ಸಂಚಾರ ತೆರೆದುಕೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು