4:36 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಹುಡುಗಿ ಪ್ರಿಯಕರನ ಜತೆ ಪರಾರಿಯಾದ ಪ್ರಕರಣ: ಪೊಲೀಸರು ವಿಚಾರಣೆ; ತರುಣ ಆತ್ಮಹತ್ಯೆ

22/06/2026, 18:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪೊಲೀಸರು ವಿಚಾರಣೆ ಮಾಡಿದ್ದಕ್ಕೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಚಂದನ್ (20) ಎಂದು ಗುರುತಿಸಲಾಗಿದೆ.
ಕುಡ್ಲೂರು ಗ್ರಾಮದ ಹುಡುಗಿಯೊಬ್ಬಳು ಪ್ರಿಯಕರನ ಜೊತೆ ಹೋಗಿದ್ದಳು. ಆಕೆ ಮೊಬೈಲ್ ನಲ್ಲಿ ಚಂದನ್ ನ ನಂಬರ್ ಹಾಗೂ ಸಂಪರ್ಕದ ಬಗ್ಗೆ ಮಾಹಿತಿ ಇತ್ತು. ಮಾತುಕತೆ ನಡೆಸಿದ್ದರಿಂದ ರೆಗ್ಯುಲರ್ ವಿಚಾರಣೆಗೆ ಪೊಲೀಸರು ಕರೆದಿದ್ದರು. ವಿಚಾರಣೆ ಬಳಿಕ ನಿನ್ನೆ ಸಂಜೆ ಮನೆಗೆ ಕಳಿಸಿದ್ದ ಬೀರೂರು ಪೊಲೀಸರು
ಸಂಜೆ ಮನೆಗೆ ಹೋಗಿ ಆತ್ಮಹತ್ಯೆಗೆ ಶರಣಾಗಿರೋ ಚಂದನ್.
ಆ ಹುಡುಗಿ ಹೋಗೋದಕ್ಕೆ ಈತನೇ ಕಾರಣ ಎಂದು ಜನ ಮಾತನಾಡಿದ್ದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಆತ್ಮಹತ್ಯೆಗೂ ಮುನ್ನ ತಾಯಿಗೆ ಚಂದನ್ ಮೆಸೇಜ್ ಮಾಡಿದ್ದಾರೆ. ಚಂದನ್ ಆತ್ಮಹತ್ಯೆಗೆ ಪೊಲೀಸ್ ವಿಚಾರಣೆ ಕಾರಣವಾ?, ಬೇರೆ ಕಾರಣವಾ ತಿಳಿದು ಬಂದಿಲ್ಲ.
ಪೊಲೀಸರ ತನಿಖೆಯಿಂದ ಚಂದನ್ ಸಾವಿಗೆ ನಿಖರ ಕಾರಣ ತಿಳಿಯಬೇಕಿದೆ. ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು