11:41 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಪೊಲೀಸ್ ಜನಸ್ನೇಹಿಯಾಗಿದ್ದಾಗ ಸರ್ಕಾರ ನಿಶ್ಚಿಂತೆಯಿಂದ ಅಭಿವೃದ್ಧಿ ಕೆಲಸಗಳ ಕಡೆ ಗಮನ ಹರಿಸಬಹುದು: ಮುಖ್ಯಮಂತ್ರಿ

09/01/2025, 10:36

ಬೆಂಗಳೂರು(reporterkarnataka.com) ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದರು.
ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್ ಪೊಲೀಸ್ ಠಾಣೆ, ಕಚೇರಿಗಳನ್ನು ಉದ್ಘಾಟಿಸಿದ ಬಳಿಕ ಪುಲಕೇಶಿ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ವಸತಿ ಸಮುಚ್ಛಯಗಳನ್ನು ಉದ್ಘಾಟಿಸಿ ಮಾತನಾಡಿದರು.
ರಾಜ್ಯದ ಜನಸಂಖ್ಯೆ 7 ಕೋಟಿ ದಾಟಿ ಹೋಗುತ್ತಿದೆ. ಇವರೆಲ್ಲರ ರಕ್ಷಣೆ, ಆಸ್ತಿ ಪಾಸ್ತಿ ಮಾನ ಪ್ರಾಣ ರಕ್ಷಿಸಿ ನೆಮ್ಮದಿಯ ಬದುಕಿಗೆ ಸುರಕ್ಷಿತ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲಿದೆ. ಇದಕ್ಕಾಗಿ ಇಲಾಖೆಗೆ ಅಗತ್ಯವಾದ ಸವಲತ್ತು ಮತ್ತು ನೂತನ ಠಾಣೆಗಳನ್ನು ಒದಗಿಸಲು ಸರ್ಕಾರ ಸದಾ ಸಿದ್ದವಿದೆ ಎಂದರು.
ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಇದ್ದಾಗ ಅಭಿವೃದ್ಧಿಯ ವೇಗ ಹೆಚ್ಚುತ್ತದೆ. ಹೀಗಾಗಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಿ ಠಾಣೆಗೆ ಬರುವವರನ್ನು ಆರೋಗ್ಯಕರವಾಗಿ ನಡೆಸಿಕೊಳ್ಳಿ ಎಂದು ಸೂಚಿಸಿದರು.
ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗುತ್ತಿರುವುದು ನೆಮ್ಮದಿಯ ಸಂಗತಿ. ಆದರೆ ಪೊಲೀಸರು ಚಾಪೆ ಕೆಳಗೆ ತೂರಿದರೆ ಅಪರಾಧಿಗಳು ರಂಗೋಲಿ ಕೆಳಗೆ ತೂರಿ ಕಾನೂನಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಾರೆ. ಇದಕ್ಕೆ ಅವಕಾಶ ಆಗಬಾರದು ಎಂದರು.


ಜನರಿಗೆ ಉದ್ಯೋಗ ಇಲ್ಲದಿರುವುದು, ಬದುಕಿಗೆ ಅವಕಾಶ ಇಲ್ಲದಿರುವಾಗ ಅಪರಾಧ ಜಗತ್ತಿನ ಕಡೆಗೆ ಆಕರ್ಷಿತರಾಗುತ್ತಾರೆ. ನಗರದಲ್ಲಿ ರಿಯಲ್ ಎಸ್ಟೇಟ್ ದಂಧೆ ಕಾರಣದಿಂದ ಅಪರಾಧಗಳು ಹೆಚ್ಚಾಗುತ್ತಿವೆ.
ಪೊಲೀಸರು ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಕೈ ಜೋಡಿಸಿದರೆ ಸಹಿಸಲ್ಲ. ಯಾವುದೇ ಕಾರಣಕ್ಕೂ ರಿಯಲ್ ಎಸ್ಟೇಟ್ ಗೆ ಬೆಂಬಲ ನೀಡುಬಾರದು. ಬೆಂಬಲ ಕೊಡುವ ಕೆಲಸ ಮಾಡಿದರೆ ಸರ್ಕಾರ ಸಹಿಸಲ್ಲ. ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಬೇಕು ಎಂದರು.
ಪೇದೆಗಳು, ಎಸ್ ಐ ಗಳು, ಇನ್ಸ್ ಪೆಕ್ಟರ್ ಗಳೇ ಹೆಚ್ಚೆಚ್ಚು ಕೆಲಸ ಮಾಡ್ತಾರೆ. ಇವರ ಯೋಗಕ್ಷೇಮ ಕೂಡ ನಮ್ಮ ಜವಾಬ್ದಾರಿ. ಪೊಲೀಸ್ ಸಿಬ್ಬಂದಿಯ ಗೃಹ ಯೋಜನೆಯನ್ನು ಸರ್ಕಾರ ಮುಂದುವರೆಸುತ್ತದೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು