6:05 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ

ಇತ್ತೀಚಿನ ಸುದ್ದಿ

ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್; ಸಿಕ್ಕಾಪಟ್ಟೆ ಬೈಗುಳ

25/08/2026, 18:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮದ್ಯ ವ್ಯಸನಿ ಯುವ ಚಾಲಕನೊಬ್ಬ ನಡು ರಸ್ತೆಯಲ್ಲಿ ಪೊಲೀಸ್ ಗೆ ಅವಾಜ್ ಹಾಕಿ ಹಿಗ್ಗಾಮುಗ್ಗಾ ಬೈದ ಘಟನೆ ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆಯಲ್ಲಿ ನಡೆದಿದೆ.


ಕುಡಿದು ಕಾರು ಓಡಿಸ್ತಿದ್ದಿದ್ದಕ್ಕೆ ಗಾಡಿ ಅಡ್ಡ ಹಾಕಿದ ಪೊಲೀಸ್ ಕಾನ್ ಸ್ಟೇಬಲ್ ಅವರು ಕಾರಿನ ಕೀ ತೆಗೆದುಕೊಳ್ಳಲು ಹೋದಾಗ ಏನೋ ಕಿತ್ಕೊಂತೀಯಾ ಎಂದು ಅವಾಜ್ ಹಾಕಿ ಬೈದಿದ್ದಾನೆ.
ಪೊಲೀಸರಿಗೆ ನಾನು ಹೇಗೆ ಮಾತನಾಡ್ತೀನಿ ಗೊತ್ತಾ… ನನ್ನದ್ದೇನು ಕಿತ್ತುಕೊಳ್ಳೋಕೆ ಆಗಲ್ಲ. ಹೇ… ಬ್ಯಾಡ… ಚೆನ್ನಾಗಿರೋಲ್ಲಾ… ಸುಮ್ನೆ ಹೋಗಲೇ..ಎಂದು ರೋಪ್ ಹಾಕಿದ್ದಾನೆ.
ಪೊಲೀಸಿಗೆ ನೂಕಾಡಿ-ತಳ್ಳಾಡಿ ಬೆದರಿಕೆ ಹಾಕಿದ್ದಾನೆ. ಕುಡಿದು ವಾಹನ ಚಲಾಯಿಸಿ ಬೇರೆ ಗಾಡಿಗೆ ಟಚ್ ಮಾಡಿಕೊಂಡು ಬಂದಿದ್ದ ಕಾರಣ ಆ ಕಾರಿನ ಮಾಲಕರು ಪ್ರಶ್ನೆ ಮಾಡಲು ಬಂದಾಗ ಗಾಡಿ ಮಾಲಕರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಮದ್ಯವ್ಯಸನಿ ಯುವಕ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಿವಾಸಿ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು