4:30 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಪೊಲೀಸರಿಂದ ನೆಮ್ಮದಿಯೇ ಇಲ್ಲದಾಗ ನಿದ್ದೆ ಎಲ್ಲಿಂದ ಸಭಾಪತಿಗಳೇ?: ಸುನೀಲ್ ಕುಮಾರ್ ಬಜಾಲ್ ಪ್ರಶ್ನೆ

05/12/2024, 22:16

ಮಂಗಳೂರು(reporterkarnataka.com):ಮಂಗಳೂರಿನ ಪೊಲೀಸ್ ಕಮೀಷನರ್ ಕಾನೂನುಬಾಹಿರವಾಗಿ ನಡೆಯುತ್ತಿದ್ದರೂ ಅವರನ್ನು ಕಣ್ಣು ಮುಚ್ಚಿ ಸಮರ್ಥಿಸುತ್ತಿರುವ ಮಾನ್ಯ ಸಭಾಪತಿಗಳು ಉತ್ತರಿಸಬೇಕು. ಜಿಲ್ಲೆಯೆಲ್ಲೆಡೆ ಪೊಲೀಸರಿಂದ ನೆಮ್ಮದಿಯೇ ಇಲ್ಲದೇ ಇರುವಾಗ ಇನ್ನು ನಿದ್ದೆ ಎಲ್ಲಿಂದ ಸ್ವಾಮಿ ಎಂದು ಸಿಪಿಎಂ ಉಳ್ಳಾಲ ತಾಲೂಕು ಸಮಿತಿ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಅವರು ಸ್ಪೀಕರ್ ನಡೆಯನ್ನು ಪ್ರಶ್ನಿಸಿದ್ದಾರೆ.
ಅವರು ಇಂದು ತೊಕ್ಕೊಟ್ಟು ಜಂಕ್ಷನ್ ನಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ ಅಗ್ರವಾಲ್ ವರ್ಗಾವಣೆಗೆ ಒತ್ತಾಯಿಸಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಮಟ್ಕಾ,, ಜುಗಾರಿ, ಸ್ಕಿಲ್ ಗೇಮ್, ಮಸಾಜ್ ಪಾರ್ಲರ್ ನಂತಹ ಅಕ್ರಮ ಚಟುವಟಿಕೆಗಳು ಮಂಗಳೂರು ನಗರಾದ್ಯಂತ ವ್ಯಾಪಕವಾಗಿ ನಡೆಯುತ್ತಿದ್ದರೂ ಅದರ ವಿರುದ್ದ ಚಕಾರ ಶಬ್ದವೆತ್ತದ ಕಮಿಷನರ್ ಜನಪರ ಹೋರಾಟಗಳನ್ನೇ ಹತ್ತಿಕ್ಕಲು ಮುಂದಾಗಿರುವುದು ಪೋಲಿಸ್ ರಾಜ್ಯವನ್ನು ನಿರ್ಮಿಸಲು ಹೊರಟಂತಿದೆ ಎಂದು
ಆಕ್ರೋಶ ವ್ಯಕ್ತಪಡಿಸಿದರು.
ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ,
ಯುವಜನರು ಗಾಂಜಾ ಅಫೀಮಿಗೆ ಬಲಿಯಾಗಿ ಅಕ್ರಮಕೂಟಗಳ ಕಾಲಾಳುಗಳಾಗಿ ದುಡಿದು ಮನೆ ಸೇರದ ಕೊರಗಿಗೆ ಅವರ ಹೆತ್ತ ಕರುಳು ನೆಮ್ಮದಿಯಿಂದ ಮಲಗುವ ದಿನಗಳನ್ನು ಮರೆತಿದ್ದಾರೆ. ಸಭಾಪತಿಗಳು ತಮ್ಮ ಜವಾಬ್ದಾರಿ ಮರೆತ ಕಾರಣ ಉಳ್ಳಾಲದ ಜನ ಮೂಲಭೂತ ಸೌಕರ್ಯಗಳಿಲ್ಲದೆ ಮಲಗಲಾಗದ ಸ್ಥಿತಿ ಎದುರಿಸುತ್ತಿದ್ದಾರೆ. ಕೂಡಲೇ ಕಮೀಷನರ್ ಅಗ್ರವಾಲ್ ಅವರನ್ನು ವರ್ಗಾಹಿಸಲು ಕ್ರಮಕೈಗೊಳ್ಳಿ ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುಕುಮಾರ್ ತೊಕ್ಕೊಟ್ಟು, ಹಿರಿಯ ಮುಖಂಡರಾದ ಕೃಷ್ಣಪ್ಪ ಸಾಲ್ಯಾನ್, ಪದ್ಮಾವತಿ ಶೆಟ್ಟಿ, ವಿಲಾಸಿನಿ ತೊಕ್ಕೊಟ್ಟು, ಪ್ರಮೋದಿನಿ, ರಮೇಶ್ ಉಳ್ಳಾಲ, ಶೇಕರ್ ಕುಂದರ್, ರಫೀಕ್ ಹರೇಕಳ,ಜನಾರ್ಧನ ಕುತ್ತಾರ್,ಚಂದ್ರಹಾಸ ಪಿಲಾರ್,ರೋಹಿದಾಸ್, ಪದ್ಮನಾಭ ಕುಂಪಲ, ಡಿವೈಎಫ್ಐ ಮುಖಂಡರುಗಳಾದ ಅಸ್ಫಕ್ ಅಲೇಕಳ, ರಝಾಕ್ ಮುಡಿಪು, ರಝಾಕ್ ಮೊಂಟೆಪದವು, ಅಶ್ರಫ್ ಹರೇಕಳ, ಅಮೀರ್ ಉಳ್ಳಾಲಬೈಲ್, ನವೀಝ್, ದಿವ್ಯರಾಜ್ ಕುತ್ತಾರ್ , ಸುನೀಲ್ ತೇವುಲ, ಇಕ್ಭಾಲ್ ಹರೇಕಳ, ಸರ್ಫರಾಝ್ ಗಂಡಿ ಮುಂತಾದವರು ಉಪಸ್ಥಿತರಿದ್ದರು.
ಪ್ರತಿಭಟನೆಯಲ್ಲಿ ಡಿವೈಎಫ್ಐ ಉಳ್ಳಾಲ ತಾಲೂಕು ಅಧ್ಯಕ್ಷರಾದ ನಿತಿನ್ ಕುತ್ತಾರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು, ಕಾರ್ಯದರ್ಶಿ ರಿಝ್ವಾನ್ ಹರೇಕಳ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು