10:49 AM Friday3 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಪೊಲೀಸ್ ಗೆ ಆವಾಜ್: ಮೂಡಿಗೆರೆ ಶಾಸಕ ಕುಮಾರಸ್ವಾಮಿ ಅವರದ್ದು ಎನ್ನಲಾದ ಆಡಿಯೋ ಲೀಕ್

06/05/2022, 08:39

ಚಿಕ್ಕಮಗಳೂರು(reporterkarnataka.com) : ಮೂಡಿಗೆರೆ  ಶಾಸಕ ಎಂ. ಪಿ. ಕುಮಾರಸ್ವಾಮಿ ಅವರದ್ದು ಎನ್ನಲಾದ ಆಡಿಯೋ ಬಹಿರಂಗವಾಗಿದೆ. ಕುಮಾರಸ್ವಾಮಿ ಹಾಗೂ ಪೊಲೀಸರ ಮಧ್ಯೆ ನಡೆದ ಸಂಭಾಷಣೆಯ ವಿಡಿಯೋ ತುಣುಕು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ .

ಕಾಕತಾಳೀಯ ಎನ್ನುವಂತೆ ಸಚಿವ ಸಂಪುಟ ವಿಸ್ತರಣೆಯ ಮಾತುಗಳು ಕೇಳಿಬರುತ್ತಿರುವ ಬೆನ್ನ ಹಿಂದೆ ಈ ಆಡಿಯೋ ಲೀಕ್ ಆಗಿರುವುದು ವಿಶೇಷ .

ಈ ಹಿಂದೆಯೂ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಶಾಸಕರು ಆಡಿದ ಕೆಲವು ವಿಡಿಯೋಗಳು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡಿತ್ತು. ಕೆಲ ವಿವಾದಗಳು ನಡೆದಿದ್ದವು .

ಆಡಿಯೋದಲ್ಲಿ ಏನಿದೆ ?

ಶಾಸಕ : ಹಲೋ ಯಾರಪ್ಪಾ ಇದು ನಂಬರು ?

ಪೋಲಿಸ್ : ನಾನು ರವೀಶ್ ಮಾತಾಡೋದು ಸಾರ್ 

ಶಾಸಕ :ಈಗ ಎಲ್ಲಿದ್ದೀಯಪ್ಪ ನೀನು 

ಪೊಲೀಸ್ :ಸ್ಟೇಷನ್ ನಲ್ಲಿ ಸಾರ್

ಶಾಸಕ :ಇಲ್ಲಿಗೆ ಬರ್ಬೇಡ ಅಂದಿದ್ನಲ್ಲ ನಾನು 

ಪೊಲೀಸ್ :  ಐಜಿ ಸಾರ್ ತಗೋ ಅಂತ ಹೇಳಿದ್ರು ಸಾರ್ 

ಶಾಸಕ : ವಾಪಸ್ ಹೊಗಲೇ.. ಮರ್ಯಾದೆಯಿಂದ ವಾಪಸ್ ಹೋಗು

ಪೊಲೀಸ್ : ನಾಳೆ ಬಂದ್ ನಿಮ್ಮನ್ನಾ  ಕಾಣ್ತೀನಿ  

 ಶಾಸಕ : ನನಗೆ ವಾಪಸ್ ಕಳಿಸುವುದು ಗೊತ್ತು ಯಾರ್ಯಾರಿಗೆ ಎಷ್ಟೆಷ್ಟು ಕೊಟ್ಟಿದ್ದೀಯಾ ಎಲ್ಲಾ ಗೊತ್ತು ,

ಪೊಲೀಸ್ : ಇಲ್ಲ ಸಾರ್ ಯಾರಿಗೂ ಏನೂ ಕೊಟ್ಟಿಲ್ಲ ಐಜಿ ಹೇಳಿದ್ರು ಅಷ್ಟೆ 

ಶಾಸಕ : ಯಾವನ್ ಐಜಿ ?  ಮೂಡಿಗೆರೆಗೆ ನಾನೇ ದೊಡ್ಡವನು .ಮರ್ಯಾದೆಯಿಂದ ವಾಪಸ್ ಹೋಗು.(ಇಲ್ಲ ಸಾರ್ ನಾಳೆ ಬಂದು ಕಾಣುತ್ತೇನೆ )ಬಂದ ದಾರಿಯಲ್ಲೇ ವಾಪಸ್ ಹೋಗು

ಇತ್ತೀಚಿನ ಸುದ್ದಿ

ಜಾಹೀರಾತು