2:01 AM Sunday11 - May 2025
ಬ್ರೇಕಿಂಗ್ ನ್ಯೂಸ್
Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ…

ಇತ್ತೀಚಿನ ಸುದ್ದಿ

ಪೊಲೀಸ್ ಗೆ ಆವಾಜ್: ಮೂಡಿಗೆರೆ ಶಾಸಕ ಕುಮಾರಸ್ವಾಮಿ ಅವರದ್ದು ಎನ್ನಲಾದ ಆಡಿಯೋ ಲೀಕ್

06/05/2022, 08:39

ಚಿಕ್ಕಮಗಳೂರು(reporterkarnataka.com) : ಮೂಡಿಗೆರೆ  ಶಾಸಕ ಎಂ. ಪಿ. ಕುಮಾರಸ್ವಾಮಿ ಅವರದ್ದು ಎನ್ನಲಾದ ಆಡಿಯೋ ಬಹಿರಂಗವಾಗಿದೆ. ಕುಮಾರಸ್ವಾಮಿ ಹಾಗೂ ಪೊಲೀಸರ ಮಧ್ಯೆ ನಡೆದ ಸಂಭಾಷಣೆಯ ವಿಡಿಯೋ ತುಣುಕು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ .

ಕಾಕತಾಳೀಯ ಎನ್ನುವಂತೆ ಸಚಿವ ಸಂಪುಟ ವಿಸ್ತರಣೆಯ ಮಾತುಗಳು ಕೇಳಿಬರುತ್ತಿರುವ ಬೆನ್ನ ಹಿಂದೆ ಈ ಆಡಿಯೋ ಲೀಕ್ ಆಗಿರುವುದು ವಿಶೇಷ .

ಈ ಹಿಂದೆಯೂ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಶಾಸಕರು ಆಡಿದ ಕೆಲವು ವಿಡಿಯೋಗಳು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡಿತ್ತು. ಕೆಲ ವಿವಾದಗಳು ನಡೆದಿದ್ದವು .

ಆಡಿಯೋದಲ್ಲಿ ಏನಿದೆ ?

ಶಾಸಕ : ಹಲೋ ಯಾರಪ್ಪಾ ಇದು ನಂಬರು ?

ಪೋಲಿಸ್ : ನಾನು ರವೀಶ್ ಮಾತಾಡೋದು ಸಾರ್ 

ಶಾಸಕ :ಈಗ ಎಲ್ಲಿದ್ದೀಯಪ್ಪ ನೀನು 

ಪೊಲೀಸ್ :ಸ್ಟೇಷನ್ ನಲ್ಲಿ ಸಾರ್

ಶಾಸಕ :ಇಲ್ಲಿಗೆ ಬರ್ಬೇಡ ಅಂದಿದ್ನಲ್ಲ ನಾನು 

ಪೊಲೀಸ್ :  ಐಜಿ ಸಾರ್ ತಗೋ ಅಂತ ಹೇಳಿದ್ರು ಸಾರ್ 

ಶಾಸಕ : ವಾಪಸ್ ಹೊಗಲೇ.. ಮರ್ಯಾದೆಯಿಂದ ವಾಪಸ್ ಹೋಗು

ಪೊಲೀಸ್ : ನಾಳೆ ಬಂದ್ ನಿಮ್ಮನ್ನಾ  ಕಾಣ್ತೀನಿ  

 ಶಾಸಕ : ನನಗೆ ವಾಪಸ್ ಕಳಿಸುವುದು ಗೊತ್ತು ಯಾರ್ಯಾರಿಗೆ ಎಷ್ಟೆಷ್ಟು ಕೊಟ್ಟಿದ್ದೀಯಾ ಎಲ್ಲಾ ಗೊತ್ತು ,

ಪೊಲೀಸ್ : ಇಲ್ಲ ಸಾರ್ ಯಾರಿಗೂ ಏನೂ ಕೊಟ್ಟಿಲ್ಲ ಐಜಿ ಹೇಳಿದ್ರು ಅಷ್ಟೆ 

ಶಾಸಕ : ಯಾವನ್ ಐಜಿ ?  ಮೂಡಿಗೆರೆಗೆ ನಾನೇ ದೊಡ್ಡವನು .ಮರ್ಯಾದೆಯಿಂದ ವಾಪಸ್ ಹೋಗು.(ಇಲ್ಲ ಸಾರ್ ನಾಳೆ ಬಂದು ಕಾಣುತ್ತೇನೆ )ಬಂದ ದಾರಿಯಲ್ಲೇ ವಾಪಸ್ ಹೋಗು

ಇತ್ತೀಚಿನ ಸುದ್ದಿ

ಜಾಹೀರಾತು