10:52 AM Sunday21 - September 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ಪೊಲೀಸ್ ಗೆ ಆವಾಜ್: ಮೂಡಿಗೆರೆ ಶಾಸಕ ಕುಮಾರಸ್ವಾಮಿ ಅವರದ್ದು ಎನ್ನಲಾದ ಆಡಿಯೋ ಲೀಕ್

06/05/2022, 08:39

ಚಿಕ್ಕಮಗಳೂರು(reporterkarnataka.com) : ಮೂಡಿಗೆರೆ  ಶಾಸಕ ಎಂ. ಪಿ. ಕುಮಾರಸ್ವಾಮಿ ಅವರದ್ದು ಎನ್ನಲಾದ ಆಡಿಯೋ ಬಹಿರಂಗವಾಗಿದೆ. ಕುಮಾರಸ್ವಾಮಿ ಹಾಗೂ ಪೊಲೀಸರ ಮಧ್ಯೆ ನಡೆದ ಸಂಭಾಷಣೆಯ ವಿಡಿಯೋ ತುಣುಕು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ .

ಕಾಕತಾಳೀಯ ಎನ್ನುವಂತೆ ಸಚಿವ ಸಂಪುಟ ವಿಸ್ತರಣೆಯ ಮಾತುಗಳು ಕೇಳಿಬರುತ್ತಿರುವ ಬೆನ್ನ ಹಿಂದೆ ಈ ಆಡಿಯೋ ಲೀಕ್ ಆಗಿರುವುದು ವಿಶೇಷ .

ಈ ಹಿಂದೆಯೂ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಶಾಸಕರು ಆಡಿದ ಕೆಲವು ವಿಡಿಯೋಗಳು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡಿತ್ತು. ಕೆಲ ವಿವಾದಗಳು ನಡೆದಿದ್ದವು .

ಆಡಿಯೋದಲ್ಲಿ ಏನಿದೆ ?

ಶಾಸಕ : ಹಲೋ ಯಾರಪ್ಪಾ ಇದು ನಂಬರು ?

ಪೋಲಿಸ್ : ನಾನು ರವೀಶ್ ಮಾತಾಡೋದು ಸಾರ್ 

ಶಾಸಕ :ಈಗ ಎಲ್ಲಿದ್ದೀಯಪ್ಪ ನೀನು 

ಪೊಲೀಸ್ :ಸ್ಟೇಷನ್ ನಲ್ಲಿ ಸಾರ್

ಶಾಸಕ :ಇಲ್ಲಿಗೆ ಬರ್ಬೇಡ ಅಂದಿದ್ನಲ್ಲ ನಾನು 

ಪೊಲೀಸ್ :  ಐಜಿ ಸಾರ್ ತಗೋ ಅಂತ ಹೇಳಿದ್ರು ಸಾರ್ 

ಶಾಸಕ : ವಾಪಸ್ ಹೊಗಲೇ.. ಮರ್ಯಾದೆಯಿಂದ ವಾಪಸ್ ಹೋಗು

ಪೊಲೀಸ್ : ನಾಳೆ ಬಂದ್ ನಿಮ್ಮನ್ನಾ  ಕಾಣ್ತೀನಿ  

 ಶಾಸಕ : ನನಗೆ ವಾಪಸ್ ಕಳಿಸುವುದು ಗೊತ್ತು ಯಾರ್ಯಾರಿಗೆ ಎಷ್ಟೆಷ್ಟು ಕೊಟ್ಟಿದ್ದೀಯಾ ಎಲ್ಲಾ ಗೊತ್ತು ,

ಪೊಲೀಸ್ : ಇಲ್ಲ ಸಾರ್ ಯಾರಿಗೂ ಏನೂ ಕೊಟ್ಟಿಲ್ಲ ಐಜಿ ಹೇಳಿದ್ರು ಅಷ್ಟೆ 

ಶಾಸಕ : ಯಾವನ್ ಐಜಿ ?  ಮೂಡಿಗೆರೆಗೆ ನಾನೇ ದೊಡ್ಡವನು .ಮರ್ಯಾದೆಯಿಂದ ವಾಪಸ್ ಹೋಗು.(ಇಲ್ಲ ಸಾರ್ ನಾಳೆ ಬಂದು ಕಾಣುತ್ತೇನೆ )ಬಂದ ದಾರಿಯಲ್ಲೇ ವಾಪಸ್ ಹೋಗು

ಇತ್ತೀಚಿನ ಸುದ್ದಿ

ಜಾಹೀರಾತು