1:50 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಪೊಲೀಸ್ ಗೆ ಆವಾಜ್: ಮೂಡಿಗೆರೆ ಶಾಸಕ ಕುಮಾರಸ್ವಾಮಿ ಅವರದ್ದು ಎನ್ನಲಾದ ಆಡಿಯೋ ಲೀಕ್

06/05/2022, 08:39

ಚಿಕ್ಕಮಗಳೂರು(reporterkarnataka.com) : ಮೂಡಿಗೆರೆ  ಶಾಸಕ ಎಂ. ಪಿ. ಕುಮಾರಸ್ವಾಮಿ ಅವರದ್ದು ಎನ್ನಲಾದ ಆಡಿಯೋ ಬಹಿರಂಗವಾಗಿದೆ. ಕುಮಾರಸ್ವಾಮಿ ಹಾಗೂ ಪೊಲೀಸರ ಮಧ್ಯೆ ನಡೆದ ಸಂಭಾಷಣೆಯ ವಿಡಿಯೋ ತುಣುಕು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ .

ಕಾಕತಾಳೀಯ ಎನ್ನುವಂತೆ ಸಚಿವ ಸಂಪುಟ ವಿಸ್ತರಣೆಯ ಮಾತುಗಳು ಕೇಳಿಬರುತ್ತಿರುವ ಬೆನ್ನ ಹಿಂದೆ ಈ ಆಡಿಯೋ ಲೀಕ್ ಆಗಿರುವುದು ವಿಶೇಷ .

ಈ ಹಿಂದೆಯೂ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಶಾಸಕರು ಆಡಿದ ಕೆಲವು ವಿಡಿಯೋಗಳು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡಿತ್ತು. ಕೆಲ ವಿವಾದಗಳು ನಡೆದಿದ್ದವು .

ಆಡಿಯೋದಲ್ಲಿ ಏನಿದೆ ?

ಶಾಸಕ : ಹಲೋ ಯಾರಪ್ಪಾ ಇದು ನಂಬರು ?

ಪೋಲಿಸ್ : ನಾನು ರವೀಶ್ ಮಾತಾಡೋದು ಸಾರ್ 

ಶಾಸಕ :ಈಗ ಎಲ್ಲಿದ್ದೀಯಪ್ಪ ನೀನು 

ಪೊಲೀಸ್ :ಸ್ಟೇಷನ್ ನಲ್ಲಿ ಸಾರ್

ಶಾಸಕ :ಇಲ್ಲಿಗೆ ಬರ್ಬೇಡ ಅಂದಿದ್ನಲ್ಲ ನಾನು 

ಪೊಲೀಸ್ :  ಐಜಿ ಸಾರ್ ತಗೋ ಅಂತ ಹೇಳಿದ್ರು ಸಾರ್ 

ಶಾಸಕ : ವಾಪಸ್ ಹೊಗಲೇ.. ಮರ್ಯಾದೆಯಿಂದ ವಾಪಸ್ ಹೋಗು

ಪೊಲೀಸ್ : ನಾಳೆ ಬಂದ್ ನಿಮ್ಮನ್ನಾ  ಕಾಣ್ತೀನಿ  

 ಶಾಸಕ : ನನಗೆ ವಾಪಸ್ ಕಳಿಸುವುದು ಗೊತ್ತು ಯಾರ್ಯಾರಿಗೆ ಎಷ್ಟೆಷ್ಟು ಕೊಟ್ಟಿದ್ದೀಯಾ ಎಲ್ಲಾ ಗೊತ್ತು ,

ಪೊಲೀಸ್ : ಇಲ್ಲ ಸಾರ್ ಯಾರಿಗೂ ಏನೂ ಕೊಟ್ಟಿಲ್ಲ ಐಜಿ ಹೇಳಿದ್ರು ಅಷ್ಟೆ 

ಶಾಸಕ : ಯಾವನ್ ಐಜಿ ?  ಮೂಡಿಗೆರೆಗೆ ನಾನೇ ದೊಡ್ಡವನು .ಮರ್ಯಾದೆಯಿಂದ ವಾಪಸ್ ಹೋಗು.(ಇಲ್ಲ ಸಾರ್ ನಾಳೆ ಬಂದು ಕಾಣುತ್ತೇನೆ )ಬಂದ ದಾರಿಯಲ್ಲೇ ವಾಪಸ್ ಹೋಗು

ಇತ್ತೀಚಿನ ಸುದ್ದಿ

ಜಾಹೀರಾತು