8:10 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಪಾಲಿಷ್ ಮಾಡಿ ಕೊಡುವುದಾಗಿ ನಂಬಿಸಿ 5 ಲಕ್ಷ ರೂ. ಮೌಲ್ಯದ ಚಿನ್ನ ಎಗರಿಸಿ ಪರಾರಿ: ಹಾಡಹಗಲೇ ಇಬ್ಬರು ಯುವಕರಿಂದ ಕೃತ್ಯ

29/07/2021, 16:59

ಶರಣೇ ಗೌಡ ಸಿಂಧನೂರು ರಾಯಚೂರು
info.reporterkarnataka@gmail.com

ಚಿನ್ನದ ವಸ್ತುಗಳನ್ನು ಪಾಲಿಷ್ ಮಾಡಿ ಕೊಡುವುದಾಗಿ ನಂಬಿಸಿದ ಯುವಕರ ತಂಡವೊಂದು ಹಾಡಹಗಲೇ ಚಿನ್ನದ ಆಭರಣಗಳೊಂದಿಗೆ ಪರಾರಿಯಾದ ಘಟನೆ 

ಸಿಂಧನೂರು ಪಟ್ಟಣದಲ್ಲಿ ಗುರುವಾರ ಬೆಳಕಿಗೆ ಬಂದಿದೆ.

ಪಟ್ಟಣದ ಬಳಗಾನೂರು ರಸ್ತೆ ಸಮೀಪದಲ್ಲಿ ಇರುವ ನಿವೃತ್ತ ಶಿಕ್ಷಕ ಯಲ್ಲಪ್ಲ ಜಾಲಿಹಾಳ  ನಿವಾಸಕ್ಕೆ ಬೆಳಗ್ಗೆ  ಬೈಕ್ ಮೇಲೆ ಆಗಮಿಸಿದ ಇಬ್ಬರು ಯುವಕರು ತಾವು ಚಿನ್ನದ ಅಭರಣಗಳನ್ನು ಪಾಲಿಷ್ ಮಾಡಿಕೊಡುತ್ತೇವೆ ಎಂದು ನಂಬಿಸಿದ್ದಾರೆ, ಅಡಿಗೆ ಮಾಡುವ ಕುಕ್ಕರನಲ್ಲಿ ಚಿನ್ನ ಹಾಕಿ ಕೊಡಿ ಎಂದು ವಂಚಕರು ಹೇಳಿದಾಗ ಕುಟುಂಬದ ಸದಸ್ಯರು ಕುಕ್ಕರನಲ್ಲಿ 10 ತೊಲೆಯ ಚಿನ್ನದ ಆಭರಣಗಳನ್ನು ಹಾಕಿ ಕೊಟ್ಟಿದ್ದಾರೆ. ಕುಕ್ಕರ್ ಕಾಯಿಸುವ ವೇಳೆ  ಕುಟುಂಬದ ಸದಸ್ಯರಿಗೆ ಯಾಮಾರಿಸಿದ ವಂಚಕರ ತಂಡ  5 ಲಕ್ಷ ಬೆಲೆ ಬಾಳುವ 10 ತೊಲೆ ಚಿನ್ನದೊಂದಿಗೆ ಪರಾರಿಯಾಗಿದ್ದಾರೆ.  ಇದರಿಂದ ಗಾಬರಿಗೊಂಡ ಯಲ್ಲಪ್ಪ ಅವರು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ಮುಟ್ಟಿಸಿದ್ದಾರೆ. ‌ ಸ್ಥಳಕ್ಕೆ ದೌಡಾಯಿಸಿದ ಸಬ್ ಇನ್ ಸ್ಪೆಕ್ಟರ್ ಭೀಮದಾಸ್ ತನಿಖೆ ಕೈಗೊಂಡಿದ್ದಾರೆ.

ಹಾಡು ಹಗಲೇ ಪಟ್ಟಣದಲ್ಲಿ  ಮನೆಗಳಿಗೆ ಹೋಗಿ, ವಂಚಿಸಿ ಚಿನ್ನದ ಆಭರಣಗಳನ್ನು ಕಳವು ಮಾಡುತ್ತಿದ್ದರಿಂದ ಸಾರ್ವಜನಿಕರಲ್ಲಿ ಅತಂಕ ಸೃಷ್ಟಿಯಾಗಿದೆ. ಪೊಲೀಸ್ ಇಲಾಖೆ ವಂಚಕರ ಜಾಲ ಬಯಲು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು