1:42 PM Monday15 - June 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ…

ಇತ್ತೀಚಿನ ಸುದ್ದಿ

ಪಾಲಿಷ್ ಮಾಡಿ ಕೊಡುವುದಾಗಿ ನಂಬಿಸಿ 5 ಲಕ್ಷ ರೂ. ಮೌಲ್ಯದ ಚಿನ್ನ ಎಗರಿಸಿ ಪರಾರಿ: ಹಾಡಹಗಲೇ ಇಬ್ಬರು ಯುವಕರಿಂದ ಕೃತ್ಯ

29/07/2021, 16:59

ಶರಣೇ ಗೌಡ ಸಿಂಧನೂರು ರಾಯಚೂರು
info.reporterkarnataka@gmail.com

ಚಿನ್ನದ ವಸ್ತುಗಳನ್ನು ಪಾಲಿಷ್ ಮಾಡಿ ಕೊಡುವುದಾಗಿ ನಂಬಿಸಿದ ಯುವಕರ ತಂಡವೊಂದು ಹಾಡಹಗಲೇ ಚಿನ್ನದ ಆಭರಣಗಳೊಂದಿಗೆ ಪರಾರಿಯಾದ ಘಟನೆ 

ಸಿಂಧನೂರು ಪಟ್ಟಣದಲ್ಲಿ ಗುರುವಾರ ಬೆಳಕಿಗೆ ಬಂದಿದೆ.

ಪಟ್ಟಣದ ಬಳಗಾನೂರು ರಸ್ತೆ ಸಮೀಪದಲ್ಲಿ ಇರುವ ನಿವೃತ್ತ ಶಿಕ್ಷಕ ಯಲ್ಲಪ್ಲ ಜಾಲಿಹಾಳ  ನಿವಾಸಕ್ಕೆ ಬೆಳಗ್ಗೆ  ಬೈಕ್ ಮೇಲೆ ಆಗಮಿಸಿದ ಇಬ್ಬರು ಯುವಕರು ತಾವು ಚಿನ್ನದ ಅಭರಣಗಳನ್ನು ಪಾಲಿಷ್ ಮಾಡಿಕೊಡುತ್ತೇವೆ ಎಂದು ನಂಬಿಸಿದ್ದಾರೆ, ಅಡಿಗೆ ಮಾಡುವ ಕುಕ್ಕರನಲ್ಲಿ ಚಿನ್ನ ಹಾಕಿ ಕೊಡಿ ಎಂದು ವಂಚಕರು ಹೇಳಿದಾಗ ಕುಟುಂಬದ ಸದಸ್ಯರು ಕುಕ್ಕರನಲ್ಲಿ 10 ತೊಲೆಯ ಚಿನ್ನದ ಆಭರಣಗಳನ್ನು ಹಾಕಿ ಕೊಟ್ಟಿದ್ದಾರೆ. ಕುಕ್ಕರ್ ಕಾಯಿಸುವ ವೇಳೆ  ಕುಟುಂಬದ ಸದಸ್ಯರಿಗೆ ಯಾಮಾರಿಸಿದ ವಂಚಕರ ತಂಡ  5 ಲಕ್ಷ ಬೆಲೆ ಬಾಳುವ 10 ತೊಲೆ ಚಿನ್ನದೊಂದಿಗೆ ಪರಾರಿಯಾಗಿದ್ದಾರೆ.  ಇದರಿಂದ ಗಾಬರಿಗೊಂಡ ಯಲ್ಲಪ್ಪ ಅವರು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ಮುಟ್ಟಿಸಿದ್ದಾರೆ. ‌ ಸ್ಥಳಕ್ಕೆ ದೌಡಾಯಿಸಿದ ಸಬ್ ಇನ್ ಸ್ಪೆಕ್ಟರ್ ಭೀಮದಾಸ್ ತನಿಖೆ ಕೈಗೊಂಡಿದ್ದಾರೆ.

ಹಾಡು ಹಗಲೇ ಪಟ್ಟಣದಲ್ಲಿ  ಮನೆಗಳಿಗೆ ಹೋಗಿ, ವಂಚಿಸಿ ಚಿನ್ನದ ಆಭರಣಗಳನ್ನು ಕಳವು ಮಾಡುತ್ತಿದ್ದರಿಂದ ಸಾರ್ವಜನಿಕರಲ್ಲಿ ಅತಂಕ ಸೃಷ್ಟಿಯಾಗಿದೆ. ಪೊಲೀಸ್ ಇಲಾಖೆ ವಂಚಕರ ಜಾಲ ಬಯಲು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು