11:52 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

Political Dispute | ಗದಗ-ಬೆಟಗೇರಿ ನಗರಸಭೆಯಲ್ಲಿ ಕಾಂಗ್ರೆಸ್ ನಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

28/02/2025, 20:02

ಗದಗ(reporterkarnataka.com): ಗದಗ – ಬೆಟಗೇರಿ ನಗರಸಭೆಯಲ್ಲಿ ಕಾಂಗ್ರೆಸ್ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿ, ಹೈಕೋರ್ಟ್ ಆದೇಶ ಉಲ್ಲಂಘನೆ ಮಾಡಿ ನ್ಯಾಯಾಂಗ ನಿಂದನೆ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗದಗ ಬೆಟಗೇರಿ ನಗರಸಭೆಯಲ್ಲಿ ಬಿಜೆಪಿಯ ಮೂರು ಜನ ಸದಸ್ಯರನ್ನು ರಾತ್ರಿ 12 ಗಂಟೆಗೆ ಅಮಾನತು ಮಾಡಿ ಅವರನ್ನು ಮತ ಹಾಕದಂತೆ ನೋಡಿಕೊಂಡಿದ್ದಾರೆ. ಅಮಾನತುಗೊಂಡ ಸದಸ್ಯರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಕೊಟ್ಟು ಆದೇಶ ನೀಡಿದೆ. ಚುನಾವಣಾಧಿಕಾರಿ ಅದನ್ನು ಧಿಕ್ಕರಿಸಿ, ಎಲ್ಲ ಸಂಪರ್ಕ ಬಂದ್ ಮಾಡಿ, ಜಿಲ್ಲಾ ಉಸ್ತುವಾರಿ ಸಚಿವ ಎಚ್. ಕೆ. ಪಾಟೀಲ್ ಅವರ. ನಿರ್ದೇಶನದಂತೆ ಕೆಲಸ ಮಾಡಿದ್ದಾರೆ ಎಂದರು.
*ಜಯ ತಾತ್ಕಾಲಿಕ*
ಹೈಕೋರ್ಟ್ ಆದೇಶವನ್ನು ದಿಕ್ಕರಿಸಿ ಚುನಾವಣೆ ನಡೆಸಿರುವುದು ನ್ಯಾಯಾಂಗ ನಿಂದನೆಯಾಗುತ್ತದೆ. ಹೈಕೋರ್ಟ್ ಆದೇಶವನ್ನು ದಿಕ್ಕರಿಸುವ ಉದ್ದಟತನವನ್ನು ಅಸಿಸ್ಟೆಂಟ್ ಕಮಿಷನರ್ ಮಾಡಿದ್ದಾನೆ. ಅಧಿಕಾರಿ ಆಗಲು ಯೋಗ್ಯತೆ ಇಲ್ಲ ಇವರಿಗೆ, ಕಾನೂನು ಪರಿಪಾಲನೆ ಮಾಡುವ ಯೋಗ್ಯತೆ ಇಲ್ಲ. ಇವರು ನ್ಯಾಯಾಂಗ ನಿಂದನೆ ಮಾಡಿದ್ದು, ಅದರ ವಿರುದ್ದ ಕೋರ್ಟ್ ಗೆ ಹೋಗುತ್ತೇವೆ. ಮೂರು ಜನ ಅಮಾಯಕ ಸದಸ್ಯರ ಸದಸ್ಯತ್ವ ಅಮಾನತಿಗೆ ಹುನ್ನಾರ ಮಾಡಿರುವುದರ ವಿರುದ್ದವೂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಇವತ್ತಿನ ಜಯ ತಾತ್ಕಾಲಿಕವಾಗಿದ್ದು, ಅಸಂವಿಧಾನಿಕವಾಗಿದೆ. ಕಾನೂನುಬಾಹಿರವಾಗಿದೆ. ಇದನ್ನು ಜನರೂ ಒಪ್ಪುವುದಿಲ್ಲ ನಾವೂ ಒಪ್ಪುವುದಿಲ್ಲ, ಯಾರೂ ಒಪ್ಪುವುದಿಲ್ಲ. ಈ ಚುನಾವಣೆಗೆ ಧಿಕ್ಕಾರ ಹಾಕಿ ನಾವು ಬಹಿಷ್ಕಾರ ಹಾಕಿದ್ದೇವೆ. ಮತ್ತೆ ಚುನಾವಣೆ ನಡೆಯಲಿದೆ ಎಂದು ಹೇಳಿದರು.
ಚುನಾವಣೆಯನ್ನು ಬುಧವಾರದವರೆಗೂ ಮುಂದೂಡಿ ಡಿಸಿಯವರಿಗೆ ಸಂಪರ್ಕಿಸುವಂತೆ ಎಜಿಯವರಿಗೆ ಸೂಚಿಸಿದ್ದಾರೆ. ಡಿಸಿಯವರಿಗೂ ಸಂಪರ್ಕಿಸುವುದು ಎಜಿಯವರ ಕೆಲಸ, ಆದರೆ, ಎಲ್ಲ ಸಂಪರ್ಕವನ್ನು ಬಂದ್ ಮಾಡಿಕೊಂಡು ಕುಂತಿದ್ದಾರೆ. ನಮಗೂ ಯಾರನ್ನೂ ಸಂಪರ್ಕ ಮಾಡಲು ಅವಕಾಶ ನೀಡಿಲ್ಲ. ಸರ್ಕಾರ ಚುನಾವಣೆ ವ್ಯವಸ್ಥೆಯನ್ನು ದುರುಯೋಗ ಮಾಡಿಕೊಂಡು ಕೃತಕ ಬಹುಮತ ಪಡೆದುಕೊಂಡು ಚುನಾವಣೆ ನಡೆಸಿದ್ದಾರೆ. ಅಂತಿಮವಾಗಿ ಜಯ ನಮಗೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ಎಂದು ಭರವಸೆ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು