7:10 AM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಪೂಜಾರಳ್ಳಿ: “ಕೆರೆ ಉಳಿಸಿ-ರೈತರ ಹೊಲಗಳಿಗೆ ನೀರುಣುಸಿ” ಹೋರಾಟ, ಎಐಕೆಎಸ್ ನಿಂದ  ಡಿಸಿಗೆ ಒತ್ತಾಯ

12/06/2022, 23:00

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ತಾಲೂಕು ಪೂಜಾರಹಳ್ಳಿ ಕೆರೆಯಲ್ಲಿ, ” ಕೆರೆ ಉಳಿಸಿ ರೈತರ ಭೂಮಿಗಳಿಗೆ ನೀರುಣಿಸಿ” ಎಂಬ ಘೋಷಣೆಯೊಂದಿಗೆ ಅಖಿಲ ಭಾರತ ಕಿಸಾನ್ ಸಭಾ(AIKS) ಕೂಡ್ಲಿಗಿ ತಾಲೂಕು ಸಮಿತಿ, ಹಾಗೂ ಕನ್ನ ಬೋರಯ್ಯನ ಹಟ್ಟಿ  ಪೂಜಾರಹಳ್ಳಿ ತಾಂಡಾದ ಸಾವಿರಾರು ಜನಗಳ ನೇತೃತ್ವದಲ್ಲಿ ಹೋರಾಟದ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ನೀಡುವ ಮೂಲಕ ಕೆರೆಯ ಉಳಿಸುವ ಹೋರಾಟ ಮಾಡಲಾಯಿತು.

ವಿಜಯನಗರ ಜಿಲ್ಲಾಧಿಕಾರಿ ಗೆ ಮನವಿ ಸಲ್ಲಿಸಲಾಯಿತು. ಇದರ ಫಲವಾಗಿ ಕೆರೆ ಸರ್ವೆ ಇಲಾಖೆಯ ಅಧಿಕಾರಿಗಳು ಸರ್ವೆ ಮಾಡಿದರು.

ಕೆರೆಯ ಗಡಿ ಗುರುತಿಸಿ ಹದ್ದು ಬಸ್ತ್ ಮಾಡಲಾಗಿತ್ತು. ಜಿಲ್ಲಾಧಿಕಾರಿ ಸೂಚನೆಯಂತೆ ಜೂನ್10ರಂದು ಪೂಜಾರಳ್ಳಿ  ಕೆರೆಗೆ ಕಂದಾಯ ಇಲಾಖೆ ಹಾಗೂ ಸರ್ವೆ ಇಲಾಖೆ ಸೇರಿದಂತೆ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಕೆರೆಗೆ ಭೇಟಿ ನೀಡಿದರು. ಜಿಲ್ಲಾ ಅಪರ ಜಿಲ್ಲಾಧಿಕಾರಿ ಮಹೇಶಬಾಬು,ಜಿಲ್ಲಾ ಸರ್ವೆ ಇಲಾಖಾಧಿಕಾರಿ ಕುಸುಮಾ ಲತಾ, ತಹಶಿಲ್ದಾರರಾದ ಟಿ.ಜಗದೀಶ, ಕೂಡ್ಲಿಗಿ ತಾಲೂಕು ಸರ್ವೆ ಅಧಿಕಾರಿ ಕರಿಯಣ್ಣ ಹಾಗೂ ಸಿಬ್ಬಂದಿ, ಉಪ ತಹಶಿಲ್ದಾರರು ಹಾಗೂ ಕಂದಾಯ ಇಲಾಖಾ ಸಿಬ್ಬಂದಿ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿ, ಗ್ರ‍ಾಮ ಪಂಚಾತಿತಿ ಅಧ್ಯಕ್ಷೆ ಶಿಲ್ಪ ಬಸಪ್ಪ,ಸದಸ್ಯರಾದ ನಾಗೇಶ ಸೆರಿದಂತೆ ಬಹುತೇಕ ಗ್ರಾಪಂ ಸದಸ್ಯರು. ಅಖಿಲ ಭಾರತ ಕಿಸಾನ್ ಸಭಾ ರಾಜ್ಯ ಉಪಾಧ್ಯಕ್ಷ ಹೆಚ್.ವೀರಣ್ಣ ಅವರು ಮಾತನಾಡಿ, ಇದು ಅಖಿಲ ಭಾರತ ಕಿಸಾನ್ ಸಭಾ ದ ಹೋರಾಟಕ್ಕೆ ಸಿಕ್ಕ ಜಯವಾಗಿದೆ. ಗೆಲುವಿನ ಪ್ರಥಮ ಹೆಜ್ಜೆಯಾಗಿದೆ ಅಂತಿಮವರೆಗೂ ಹೋರಾಟ ನಿಲ್ಲದು,ಸುಮಾರು 50ಎಕರೆ ಗೂ ಹೆಚ್ಚು ಕೆರೆಯ ಭೂಮಿ ಒತ್ತುವರಿಯಾಗಿರುವುದು ಸಾಬೀತಾಗಿದೆ. ಮನೆಗಳನ್ನು ನಿರ್ಮಿಸಲಾಗಿದೆ ಹಾಗೂ ಕೆಲವರು ಬಿತ್ತನೆ ಮಾಡಿಕೊಂಡಿದ್ದಾರೆ. ಅಕ್ರಮ ವಾಗಿ ಒತ್ತುವರಿ ಮಾಡಿಕೊಂಡಿರುವುದನ್ನು, ಶೀಘ್ರವೇ ತೆರವುಗೊಳೊಸಬೇಕಿದೆ. ಇಲ್ಲವಾದಲ್ಲಿ ಹೋರಾಟ ನಿರಂತರ ನಡೆಯಲಿದೆ. ಸಂಬಂಧಿಸಿದಂತೆ ಸ್ಥಳೀಯ ಆಡಳಿತ, ಕಂದಾಯ ಇಲಾಖೆ ಹಾಗೂ ಕೆಲ ಇಲಾಖೆಗಳ ನಿರ್ಲಕ್ಷ್ಯದ ವಿರುದ್ಧ ಕಾನೂನು ಹೋರಾಟ ಅನಿವಾರ್ಯವಾಗಲಿದೆ  ಎಂದು ಅವರು ಎಚ್ಚರಿಸಿದ್ದಾರೆ. 


ಕಾರ್ಮಿಕ ಮುಖಂಡರಾದ ದಾಸಣ್ಣ ಮಹೇಶ್,ಗೆದ್ದಯ್ಯ,ಸಿದ್ದಲಿಂಗಸ್ವಾಮಿ, ಜಿ.ಎಚ್.ಅಂಜನಿ, ಅಜ್ಜನ ಬೋರಣ್ಣ,ಕೋಟಗಿ ತಿಪ್ಪೇಸ್ವಾಮಿ, ಓಬಣ್ಣ,ಬೋರಯ್ಯ, ನಾಗರಾಜಪ್ಪ, ಎನ್.ಪಿ.ವೆಂಕಟೇಶ್ ಸೇರಿದಂತೆ ಪೂಜಾರಿಹಳ್ಳಿ ಅಖಿಲ ಭಾರತ ಕಿಸಾನ್ ಸಭಾದ ಕಾರ್ತಕರ್ತರು, ಗ್ರಾಮಸ್ಥರು ಹಾಗೂ ಕಾರ್ಮಿಕರು ಇದರು.

ಇತ್ತೀಚಿನ ಸುದ್ದಿ

ಜಾಹೀರಾತು