2:53 PM Friday3 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ…

ಇತ್ತೀಚಿನ ಸುದ್ದಿ

ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

08/09/2025, 17:36

ಕಾಸರಗೋಡು(reporterkarnataka.com): 25ರ ಮಾರ್ಚ್ 22 ನೇ ದಿನ ಪೋಲಿಸರಿಂದ ದೊರಕಿದ ಮಾಹಿತಿಯ ಮೇರೆಗೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಸ್ನೇಹಾಲಯದ ರಕ್ಷಣಾ ತಂಡವು ಪೂಜಾ ಮತ್ತು ಆಕೆಯ ಎಂಟು ತಿಂಗಳಿನ ಮಗು ಆಯುಷನನ್ನು ರಕ್ಷಿಸಿ ತಾಯಿ–ಮಗುವನ್ನು ಮಂಜೇಶ್ವರದ ಸ್ನೇಹಾಲಯ ಮನೋ ಸಾಮಾಜಿಕ ಪುನಶ್ಚೇತನ ಸಂಸ್ಥೆಯ ಮಹಿಳೆಯರ ವಿಭಾಗದಲ್ಲಿ ದಾಖಲಿಸಿದರು.
ದೊರೆತ ಮಾಹಿತಿಯ ಪ್ರಕಾರ ಪೂಜಾ ಓರ್ವ ಗೃಹಿಣಿಯಾಗಿದ್ದು, ಮಾನಸಿಕ ಅಸ್ವಸ್ಥತೆಯ ಕಾರಣದಿಂದ ಬಿಹಾರವನ್ನು ಬಿಟ್ಟು ಉದ್ಯೋಗಕ್ಕಾಗಿ ತಮಿಳುನಾಡಿಗೆ ಹೊರಟಿದ್ದರು. ಆದರೆ ದುರಾದೃಷ್ಟದಿಂದ ತಮ್ಮ ಕುಟುಂಬದೊಡನೆ ಸಂಪರ್ಕ ಕಳೆದುಕೊಂಡರು. ಅವರಿಂದ ಬೇರ್ಪಟ್ಟರು.


ಆದರೆ ಸ್ನೇಹಾಲಯದಲ್ಲಿ ಆವಳ ಜೀವನಕ್ಕೆ ಒಂದು ಹೊಸ ತಿರುವು ಬಂತು. ಸ್ನೇಹಾಲಯದಲ್ಲಿ ದೊರೆತ ಸಮಗ್ರ ಮಾನಸಿಕ ಶಾರೀರಿಕ ಚಿಕಿತ್ಸೆ, ಅತ್ತ್ಯುತ್ತಮ ಆರೈಕೆ ಮತ್ತು ಸಮಾಲೋಚನೆಗಳಿಂದ ಆಕೆಯು ತನ್ನ ಮಾನಸಿಕ ಆರೋಗ್ಯವನ್ನು ಪುನ ಪಡೆದುಕೊಂಡಳು.
ತದನಂತರ ಅವರ ಪುನರ್ಮಿಲನ ಪ್ರಕ್ರಿಯೆ ಪ್ರಾರಂಭವಾಯಿತು. ಶ್ರದ್ದಾ ಫೌಂಡೇಶನಿನ ಬಸವರಾಜ್ ಅವರ ನೇತೃತ್ವದಲ್ಲಿ ಪೂಜಾಳ ವಿಳಾಸವನ್ನು ಪತ್ತೆ ಹಚ್ಚುವ ಕಾರ್ಯ ನಡೆಯಿತು ಹಾಗೂ ದೂರದ ಬಿಹಾರದಲ್ಲಿ ವಾಸಿಸುತ್ತಿರುವ ಆಕೆಯ ಗಂಡ ಮತ್ತು ಪರಿವಾರವನ್ನು ಪತ್ತೆ ಹಚ್ಚಲಾಯಿತು.
ಸಪ್ಟಂಬರ್ 7 ರಂದು ಪೂಜಾಳ ಗಂಡ ಭೂಪಾಲಿ ಆಕೆಯನ್ನು ಕರೆದುಕೊಂಡು ಹೋಗಲು ಸ್ನೇಹಾಲಯಕ್ಕೆ ಆಗಮಿಸಿದರು. ಈ ದಿನ ಪೂಜಾಳ ಬಾಳಿನಲ್ಲಿ ಅತ್ಯಂತ ಸಂತೋಷದ ದಿನವಾಗಿದ್ದರೂ ಸ್ನೇಹಾಲಯದ ಸಿಬ್ಬಂದಿಗಳಿಗೆ ಕಣ್ಣಿನಲ್ಲಿ ನೀರು ತರಿಸುವಂತ ದಿನವಾಗಿತ್ತು. ಕಾರಣ ಆಯುಷ್ ತನ್ನ ನಿಷ್ಕಳಂಕ ನಗು ಮತ್ತು ತುಂಟತನದಿಂದ ಸ್ನೇಹಾಲಯದ ಸಿಬ್ಬಂದಿಗಳ ಹೃದಯವನ್ನು ಸೂರೆ ಮಾಡಿ ಎಲ್ಲರ ಕಣ್ಮಣಿಯಾಗಿದ್ದ. ಅವನ ತುಂಟ ನೋಟ ಮತ್ತು ನಗು–ಕಿಸುಗುಸಿಗಳು ಪ್ರತಿಯೊಂದು ದಿನವನ್ನೂ ಹರ್ಷದಾಯಕವನ್ನಾಗಿಮಾಡಿದವು. ಅಲ್ಲದೆ ಸ್ನೇಹಾಲಯದ ಪ್ರತಿಯೊಂದು ಸಿಬ್ಬಂದಿಗಳಿಂದ ಅವನಿಗೆ ತಂದೆ ತಾಯಿಯ ಪ್ರೀತಿ, ಮಮತೆ, ಕರುಣೆ ಮತ್ತು ಒಲವು ದೊರಕುತ್ತಿತ್ತು.
ಕುಟುಂಬದೊಂದಿಗೆ ಪುನರ್ಮಿಲನಗೊಳ್ಳುವ ಸಂತೋಷವು ಪೂಜಾ ಮತ್ತು ಆಕೆಯ ಮಗುವಿಗೆ ಆಶೆ ಭರವಸೆಯಿಂದ ತುಂಬಿದ್ದರೂ, ಅವರ ಬೀಳ್ಕೊಡುಗೆ ಸ್ನೇಹಾಲಯಕ್ಕೆ ತುಂಬಾ ದುಃಖವನ್ನು ಉಂಟು ಮಾಡಿತು. ಎಲ್ಲರ ಪ್ರೀತಿಯ ಕೇಂದ್ರವಾಗಿರುವ ಆಯುಷ್ ವಿದಾಯ ಹೇಳುವಾಗ ಅನೇಕರ ಕಣ್ಣುಗಳು ತೇವವಾದವು.
ನಿರಾಶೆಯಿಂದ ಆರಂಭವಾದ ಈ ಜೀವನಯಾತ್ರೆ, ನಿಧಾನವಾಗಿ ಧೈರ್ಯ, ಆರೈಕೆ ಮತ್ತು ಚೇತರಿಕೆಯ ಕಥೆಯಾಗಿ ಬದಲಾಯಿತು. ಇಂದು ತಾಯಿ–ಮಗ ತಮ್ಮ ಮನೆ ಕಡೆ ಪ್ರಯಾಣಿಸುತ್ತಿದ್ದರೂ, ಅವರ ನೆನಪುಗಳು ಸದಾ ಸ್ನೇಹಾಲಯ ಕುಟುಂಬದ ಹೃದಯದಲ್ಲಿ ಅಚ್ಚದೇ ಉಳಿದಿವೆ. ಸ್ನೇಹಾಲಯದ ಸಂಸ್ಥಾಪಕ ಮತ್ತು ಸಮಸ್ತ ಸಿಬ್ಬಂದಿವರ್ಗದ ಮನಗಳು ಭಾರವಾದರೂ ಸಂತೋಷ ಭರಿತ ಹೃದಯದಿಂದ ಪೂಜಾ ಮತ್ತು ಆಯುಷನಿಗೆ ಶುಭ ಕೋರಿತು.

ಇತ್ತೀಚಿನ ಸುದ್ದಿ

ಜಾಹೀರಾತು