6:27 AM Saturday16 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಪುಣೆ: ಸ್ವಚ್ಛತಾ ಬಾಬಾ, ನಿವೃತ್ತ ಶಿಕ್ಷಕ ಚಂದ್ರಕಾಂತ ರಾಧಾಬಾಯಿ ದಾಮೋದರ್ ಕುಲಕರ್ಣಿಗೆ ಶಾಸಕ ಕಾಮತ್ ಸನ್ಮಾನ

13/11/2024, 18:05

ಪುಣೆ/ಮಂಗಳೂರು(reporterkarnataka.com): ಸ್ವಚ್ಛತೆಯ ವಿಷಯದಲ್ಲಿ ಸ್ವತಃ ಪ್ರಧಾನಿ ನರೇಂದ್ರ ಮೋದಿಯ ಅವರನ್ನೇ ಪ್ರಭಾವಿಸಿದ್ದ ಹಿರಿಯರಾದ ನಿವೃತ್ತ ಸರ್ಕಾರಿ ಶಿಕ್ಷಕ ಚಂದ್ರಕಾಂತ ರಾಧಾಬಾಯಿ ದಾಮೋದರ್ ಕುಲಕರ್ಣಿ (ಸ್ವಚ್ಛತಾ ಬಾಬಾ) ಅವರನ್ನು ಶಾಸಕ ವೇದವ್ಯಾಸ ಕಾಮತ್ ಅವರು ಪುಣೆಯ ಚುನಾವಣಾ ಕಾರ್ಯಗಳ ನಡುವೆ ಭೇಟಿ ಮಾಡಿ ಸನ್ಮಾನಿಸಿದರು.


ನಂತರ ಮಾತನಾಡಿದ ಶಾಸಕರು, ಪ್ರಧಾನಿಗಳು ದೇಶದಲ್ಲಿ ಸ್ವಚ್ಛ ಭಾರತ ಅಭಿಯಾನವನ್ನು ಆರಂಭಿಸಿದಾಗ ನಿವೃತ್ತಿ ಜೀವನ ನಡೆಸುತ್ತಿದ್ದ ಕುಲಕರ್ಣಿಯವರು ತಮಗೆ ಬರುತ್ತಿದ್ದ 15,000 ಪಿಂಚಣಿಯಲ್ಲಿ ತಿಂಗಳಿಗೆ 5 ಸಾವಿರದಂತೆ, ಒಟ್ಟು 2,60,000/- ಸ್ವಚ್ಛ ಭಾರತ್ ನಿಧಿಗೆ ನೀಡಿ ದೇಶಕ್ಕೆ ಮಾದರಿಯಾಗಿದ್ದರು. ಅನೇಕ ಬಾರಿ ಕಾಶಿ, ಅಯೋಧ್ಯೆಗೆ ತೆರಳಿ 5-10 ದಿವಸಗಳ ಕಾಲ ತಂಗಿ ಸ್ವಚ್ಛತಾ ಕಾರ್ಯ ಮಾಡುವುದರಲ್ಲೇ ಸಂತೃಪ್ತಿಯನ್ನು ಕಾಣುವ ವಿಶೇಷ ವ್ಯಕ್ತಿ ಇವರು. ಇವೆಲ್ಲವನ್ನು ಗಮನಿಸಿ ಪ್ರಧಾನಿ ತಮ್ಮ ಮನ್ ಕಿ ಬಾತ್ ನಲ್ಲಿ ಇವರ ಬಗ್ಗೆ ಉಲ್ಲೇಖಿಸಿದ್ದು ಮಾತ್ರವಲ್ಲದೇ, ಎರಡು ಬಾರಿ ಅತ್ಯಂತ ಗೌರವದಿಂದ ಕರೆಸಿಕೊಂಡು ಸನ್ಮಾನಿಸಿದ್ದರು ಎಂದು ಶಾಸಕರು ಹೇಳಿದರು.
ಸ್ವತಃ ಪ್ರಧಾನಿಗಳೇ ಕುಲಕರ್ಣಿಯವರ ಕಾರ್ಯದಿಂದ ನಾನು ತುಂಬಾ ಪ್ರಭಾವಿತನಾಗಿ ಪ್ರೇರಣೆ ಪಡೆದಿದ್ದೇನೆ ಎಂದಿರುವುದು ಇಲ್ಲಿ ಗಮನಾರ್ಹವಾಗಿದ್ದು, ಉತ್ತರ ಪ್ರದೇಶದ ಅಮೇಥಿಯಲ್ಲಿ ಜನಸಾಮಾನ್ಯರ ಉಪಯೋಗಕ್ಕಾಗಿ ಸುಮಾರು 450ಕ್ಕೂ ಹೆಚ್ಚು ಕುಡಿಯುವ ನೀರಿನ ಬೋರ್ವೆಲ್ ನಿರ್ಮಾಣಗೊಳಿಸಿರುವ ಇವರು ತ್ರಯಂಬಕೇಶ್ವರದ ಪ್ರಾಚೀನ ಕುಂಡ ಸಹಿತ ಅನೇಕ ಐತಿಹಾಸಿಕ ಕೆರೆಗಳನ್ನು ಪುನರುಜ್ಜೀವನಗೊಳಿಸಿದ್ದಾರೆ. ಇಂತಹ ಸಮಾಜಮುಖಿ ವ್ಯಕ್ತಿ ನಮ್ಮ ಮಂಗಳೂರಿನ ಶ್ರೀ ರಾಮಕೃಷ್ಣ ಮಠಕ್ಕೂ ಮೂರು ಸಲ ಭೇಟಿ ನೀಡಿ ಸ್ವಚ್ಛತೆಯ ನಿಟ್ಟಿನಲ್ಲಿ ಮಠವು ವಹಿಸಿರುವ ಕಾಳಜಿ ಬಗ್ಗೆ ವಿಶೇಷ ಮೆಚ್ಚುಗೆ ಸೂಚಿಸಿದ್ದರು ಎಂದರು.
ಈ ಸಂದರ್ಭದಲ್ಲಿ ಕುಲಕರ್ಣಿಯವರ ಕುಟುಂಬದವರ ಸಹಿತ ಬಿಜೆಪಿ ಮುಖಂಡರಾದ ಸಂಜಯ್ ಪ್ರಭು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು