9:32 PM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಪುಣೆ: ಸ್ವಚ್ಛತಾ ಬಾಬಾ, ನಿವೃತ್ತ ಶಿಕ್ಷಕ ಚಂದ್ರಕಾಂತ ರಾಧಾಬಾಯಿ ದಾಮೋದರ್ ಕುಲಕರ್ಣಿಗೆ ಶಾಸಕ ಕಾಮತ್ ಸನ್ಮಾನ

13/11/2024, 18:05

ಪುಣೆ/ಮಂಗಳೂರು(reporterkarnataka.com): ಸ್ವಚ್ಛತೆಯ ವಿಷಯದಲ್ಲಿ ಸ್ವತಃ ಪ್ರಧಾನಿ ನರೇಂದ್ರ ಮೋದಿಯ ಅವರನ್ನೇ ಪ್ರಭಾವಿಸಿದ್ದ ಹಿರಿಯರಾದ ನಿವೃತ್ತ ಸರ್ಕಾರಿ ಶಿಕ್ಷಕ ಚಂದ್ರಕಾಂತ ರಾಧಾಬಾಯಿ ದಾಮೋದರ್ ಕುಲಕರ್ಣಿ (ಸ್ವಚ್ಛತಾ ಬಾಬಾ) ಅವರನ್ನು ಶಾಸಕ ವೇದವ್ಯಾಸ ಕಾಮತ್ ಅವರು ಪುಣೆಯ ಚುನಾವಣಾ ಕಾರ್ಯಗಳ ನಡುವೆ ಭೇಟಿ ಮಾಡಿ ಸನ್ಮಾನಿಸಿದರು.


ನಂತರ ಮಾತನಾಡಿದ ಶಾಸಕರು, ಪ್ರಧಾನಿಗಳು ದೇಶದಲ್ಲಿ ಸ್ವಚ್ಛ ಭಾರತ ಅಭಿಯಾನವನ್ನು ಆರಂಭಿಸಿದಾಗ ನಿವೃತ್ತಿ ಜೀವನ ನಡೆಸುತ್ತಿದ್ದ ಕುಲಕರ್ಣಿಯವರು ತಮಗೆ ಬರುತ್ತಿದ್ದ 15,000 ಪಿಂಚಣಿಯಲ್ಲಿ ತಿಂಗಳಿಗೆ 5 ಸಾವಿರದಂತೆ, ಒಟ್ಟು 2,60,000/- ಸ್ವಚ್ಛ ಭಾರತ್ ನಿಧಿಗೆ ನೀಡಿ ದೇಶಕ್ಕೆ ಮಾದರಿಯಾಗಿದ್ದರು. ಅನೇಕ ಬಾರಿ ಕಾಶಿ, ಅಯೋಧ್ಯೆಗೆ ತೆರಳಿ 5-10 ದಿವಸಗಳ ಕಾಲ ತಂಗಿ ಸ್ವಚ್ಛತಾ ಕಾರ್ಯ ಮಾಡುವುದರಲ್ಲೇ ಸಂತೃಪ್ತಿಯನ್ನು ಕಾಣುವ ವಿಶೇಷ ವ್ಯಕ್ತಿ ಇವರು. ಇವೆಲ್ಲವನ್ನು ಗಮನಿಸಿ ಪ್ರಧಾನಿ ತಮ್ಮ ಮನ್ ಕಿ ಬಾತ್ ನಲ್ಲಿ ಇವರ ಬಗ್ಗೆ ಉಲ್ಲೇಖಿಸಿದ್ದು ಮಾತ್ರವಲ್ಲದೇ, ಎರಡು ಬಾರಿ ಅತ್ಯಂತ ಗೌರವದಿಂದ ಕರೆಸಿಕೊಂಡು ಸನ್ಮಾನಿಸಿದ್ದರು ಎಂದು ಶಾಸಕರು ಹೇಳಿದರು.
ಸ್ವತಃ ಪ್ರಧಾನಿಗಳೇ ಕುಲಕರ್ಣಿಯವರ ಕಾರ್ಯದಿಂದ ನಾನು ತುಂಬಾ ಪ್ರಭಾವಿತನಾಗಿ ಪ್ರೇರಣೆ ಪಡೆದಿದ್ದೇನೆ ಎಂದಿರುವುದು ಇಲ್ಲಿ ಗಮನಾರ್ಹವಾಗಿದ್ದು, ಉತ್ತರ ಪ್ರದೇಶದ ಅಮೇಥಿಯಲ್ಲಿ ಜನಸಾಮಾನ್ಯರ ಉಪಯೋಗಕ್ಕಾಗಿ ಸುಮಾರು 450ಕ್ಕೂ ಹೆಚ್ಚು ಕುಡಿಯುವ ನೀರಿನ ಬೋರ್ವೆಲ್ ನಿರ್ಮಾಣಗೊಳಿಸಿರುವ ಇವರು ತ್ರಯಂಬಕೇಶ್ವರದ ಪ್ರಾಚೀನ ಕುಂಡ ಸಹಿತ ಅನೇಕ ಐತಿಹಾಸಿಕ ಕೆರೆಗಳನ್ನು ಪುನರುಜ್ಜೀವನಗೊಳಿಸಿದ್ದಾರೆ. ಇಂತಹ ಸಮಾಜಮುಖಿ ವ್ಯಕ್ತಿ ನಮ್ಮ ಮಂಗಳೂರಿನ ಶ್ರೀ ರಾಮಕೃಷ್ಣ ಮಠಕ್ಕೂ ಮೂರು ಸಲ ಭೇಟಿ ನೀಡಿ ಸ್ವಚ್ಛತೆಯ ನಿಟ್ಟಿನಲ್ಲಿ ಮಠವು ವಹಿಸಿರುವ ಕಾಳಜಿ ಬಗ್ಗೆ ವಿಶೇಷ ಮೆಚ್ಚುಗೆ ಸೂಚಿಸಿದ್ದರು ಎಂದರು.
ಈ ಸಂದರ್ಭದಲ್ಲಿ ಕುಲಕರ್ಣಿಯವರ ಕುಟುಂಬದವರ ಸಹಿತ ಬಿಜೆಪಿ ಮುಖಂಡರಾದ ಸಂಜಯ್ ಪ್ರಭು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು