4:45 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಪುಣೆ: ಸ್ವಚ್ಛತಾ ಬಾಬಾ, ನಿವೃತ್ತ ಶಿಕ್ಷಕ ಚಂದ್ರಕಾಂತ ರಾಧಾಬಾಯಿ ದಾಮೋದರ್ ಕುಲಕರ್ಣಿಗೆ ಶಾಸಕ ಕಾಮತ್ ಸನ್ಮಾನ

13/11/2024, 18:05

ಪುಣೆ/ಮಂಗಳೂರು(reporterkarnataka.com): ಸ್ವಚ್ಛತೆಯ ವಿಷಯದಲ್ಲಿ ಸ್ವತಃ ಪ್ರಧಾನಿ ನರೇಂದ್ರ ಮೋದಿಯ ಅವರನ್ನೇ ಪ್ರಭಾವಿಸಿದ್ದ ಹಿರಿಯರಾದ ನಿವೃತ್ತ ಸರ್ಕಾರಿ ಶಿಕ್ಷಕ ಚಂದ್ರಕಾಂತ ರಾಧಾಬಾಯಿ ದಾಮೋದರ್ ಕುಲಕರ್ಣಿ (ಸ್ವಚ್ಛತಾ ಬಾಬಾ) ಅವರನ್ನು ಶಾಸಕ ವೇದವ್ಯಾಸ ಕಾಮತ್ ಅವರು ಪುಣೆಯ ಚುನಾವಣಾ ಕಾರ್ಯಗಳ ನಡುವೆ ಭೇಟಿ ಮಾಡಿ ಸನ್ಮಾನಿಸಿದರು.


ನಂತರ ಮಾತನಾಡಿದ ಶಾಸಕರು, ಪ್ರಧಾನಿಗಳು ದೇಶದಲ್ಲಿ ಸ್ವಚ್ಛ ಭಾರತ ಅಭಿಯಾನವನ್ನು ಆರಂಭಿಸಿದಾಗ ನಿವೃತ್ತಿ ಜೀವನ ನಡೆಸುತ್ತಿದ್ದ ಕುಲಕರ್ಣಿಯವರು ತಮಗೆ ಬರುತ್ತಿದ್ದ 15,000 ಪಿಂಚಣಿಯಲ್ಲಿ ತಿಂಗಳಿಗೆ 5 ಸಾವಿರದಂತೆ, ಒಟ್ಟು 2,60,000/- ಸ್ವಚ್ಛ ಭಾರತ್ ನಿಧಿಗೆ ನೀಡಿ ದೇಶಕ್ಕೆ ಮಾದರಿಯಾಗಿದ್ದರು. ಅನೇಕ ಬಾರಿ ಕಾಶಿ, ಅಯೋಧ್ಯೆಗೆ ತೆರಳಿ 5-10 ದಿವಸಗಳ ಕಾಲ ತಂಗಿ ಸ್ವಚ್ಛತಾ ಕಾರ್ಯ ಮಾಡುವುದರಲ್ಲೇ ಸಂತೃಪ್ತಿಯನ್ನು ಕಾಣುವ ವಿಶೇಷ ವ್ಯಕ್ತಿ ಇವರು. ಇವೆಲ್ಲವನ್ನು ಗಮನಿಸಿ ಪ್ರಧಾನಿ ತಮ್ಮ ಮನ್ ಕಿ ಬಾತ್ ನಲ್ಲಿ ಇವರ ಬಗ್ಗೆ ಉಲ್ಲೇಖಿಸಿದ್ದು ಮಾತ್ರವಲ್ಲದೇ, ಎರಡು ಬಾರಿ ಅತ್ಯಂತ ಗೌರವದಿಂದ ಕರೆಸಿಕೊಂಡು ಸನ್ಮಾನಿಸಿದ್ದರು ಎಂದು ಶಾಸಕರು ಹೇಳಿದರು.
ಸ್ವತಃ ಪ್ರಧಾನಿಗಳೇ ಕುಲಕರ್ಣಿಯವರ ಕಾರ್ಯದಿಂದ ನಾನು ತುಂಬಾ ಪ್ರಭಾವಿತನಾಗಿ ಪ್ರೇರಣೆ ಪಡೆದಿದ್ದೇನೆ ಎಂದಿರುವುದು ಇಲ್ಲಿ ಗಮನಾರ್ಹವಾಗಿದ್ದು, ಉತ್ತರ ಪ್ರದೇಶದ ಅಮೇಥಿಯಲ್ಲಿ ಜನಸಾಮಾನ್ಯರ ಉಪಯೋಗಕ್ಕಾಗಿ ಸುಮಾರು 450ಕ್ಕೂ ಹೆಚ್ಚು ಕುಡಿಯುವ ನೀರಿನ ಬೋರ್ವೆಲ್ ನಿರ್ಮಾಣಗೊಳಿಸಿರುವ ಇವರು ತ್ರಯಂಬಕೇಶ್ವರದ ಪ್ರಾಚೀನ ಕುಂಡ ಸಹಿತ ಅನೇಕ ಐತಿಹಾಸಿಕ ಕೆರೆಗಳನ್ನು ಪುನರುಜ್ಜೀವನಗೊಳಿಸಿದ್ದಾರೆ. ಇಂತಹ ಸಮಾಜಮುಖಿ ವ್ಯಕ್ತಿ ನಮ್ಮ ಮಂಗಳೂರಿನ ಶ್ರೀ ರಾಮಕೃಷ್ಣ ಮಠಕ್ಕೂ ಮೂರು ಸಲ ಭೇಟಿ ನೀಡಿ ಸ್ವಚ್ಛತೆಯ ನಿಟ್ಟಿನಲ್ಲಿ ಮಠವು ವಹಿಸಿರುವ ಕಾಳಜಿ ಬಗ್ಗೆ ವಿಶೇಷ ಮೆಚ್ಚುಗೆ ಸೂಚಿಸಿದ್ದರು ಎಂದರು.
ಈ ಸಂದರ್ಭದಲ್ಲಿ ಕುಲಕರ್ಣಿಯವರ ಕುಟುಂಬದವರ ಸಹಿತ ಬಿಜೆಪಿ ಮುಖಂಡರಾದ ಸಂಜಯ್ ಪ್ರಭು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು