3:24 AM Tuesday1 - September 2026
ಬ್ರೇಕಿಂಗ್ ನ್ಯೂಸ್
ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.…

ಇತ್ತೀಚಿನ ಸುದ್ದಿ

ಪುಣೆ: ಸ್ವಚ್ಛತಾ ಬಾಬಾ, ನಿವೃತ್ತ ಶಿಕ್ಷಕ ಚಂದ್ರಕಾಂತ ರಾಧಾಬಾಯಿ ದಾಮೋದರ್ ಕುಲಕರ್ಣಿಗೆ ಶಾಸಕ ಕಾಮತ್ ಸನ್ಮಾನ

13/11/2024, 18:05

ಪುಣೆ/ಮಂಗಳೂರು(reporterkarnataka.com): ಸ್ವಚ್ಛತೆಯ ವಿಷಯದಲ್ಲಿ ಸ್ವತಃ ಪ್ರಧಾನಿ ನರೇಂದ್ರ ಮೋದಿಯ ಅವರನ್ನೇ ಪ್ರಭಾವಿಸಿದ್ದ ಹಿರಿಯರಾದ ನಿವೃತ್ತ ಸರ್ಕಾರಿ ಶಿಕ್ಷಕ ಚಂದ್ರಕಾಂತ ರಾಧಾಬಾಯಿ ದಾಮೋದರ್ ಕುಲಕರ್ಣಿ (ಸ್ವಚ್ಛತಾ ಬಾಬಾ) ಅವರನ್ನು ಶಾಸಕ ವೇದವ್ಯಾಸ ಕಾಮತ್ ಅವರು ಪುಣೆಯ ಚುನಾವಣಾ ಕಾರ್ಯಗಳ ನಡುವೆ ಭೇಟಿ ಮಾಡಿ ಸನ್ಮಾನಿಸಿದರು.


ನಂತರ ಮಾತನಾಡಿದ ಶಾಸಕರು, ಪ್ರಧಾನಿಗಳು ದೇಶದಲ್ಲಿ ಸ್ವಚ್ಛ ಭಾರತ ಅಭಿಯಾನವನ್ನು ಆರಂಭಿಸಿದಾಗ ನಿವೃತ್ತಿ ಜೀವನ ನಡೆಸುತ್ತಿದ್ದ ಕುಲಕರ್ಣಿಯವರು ತಮಗೆ ಬರುತ್ತಿದ್ದ 15,000 ಪಿಂಚಣಿಯಲ್ಲಿ ತಿಂಗಳಿಗೆ 5 ಸಾವಿರದಂತೆ, ಒಟ್ಟು 2,60,000/- ಸ್ವಚ್ಛ ಭಾರತ್ ನಿಧಿಗೆ ನೀಡಿ ದೇಶಕ್ಕೆ ಮಾದರಿಯಾಗಿದ್ದರು. ಅನೇಕ ಬಾರಿ ಕಾಶಿ, ಅಯೋಧ್ಯೆಗೆ ತೆರಳಿ 5-10 ದಿವಸಗಳ ಕಾಲ ತಂಗಿ ಸ್ವಚ್ಛತಾ ಕಾರ್ಯ ಮಾಡುವುದರಲ್ಲೇ ಸಂತೃಪ್ತಿಯನ್ನು ಕಾಣುವ ವಿಶೇಷ ವ್ಯಕ್ತಿ ಇವರು. ಇವೆಲ್ಲವನ್ನು ಗಮನಿಸಿ ಪ್ರಧಾನಿ ತಮ್ಮ ಮನ್ ಕಿ ಬಾತ್ ನಲ್ಲಿ ಇವರ ಬಗ್ಗೆ ಉಲ್ಲೇಖಿಸಿದ್ದು ಮಾತ್ರವಲ್ಲದೇ, ಎರಡು ಬಾರಿ ಅತ್ಯಂತ ಗೌರವದಿಂದ ಕರೆಸಿಕೊಂಡು ಸನ್ಮಾನಿಸಿದ್ದರು ಎಂದು ಶಾಸಕರು ಹೇಳಿದರು.
ಸ್ವತಃ ಪ್ರಧಾನಿಗಳೇ ಕುಲಕರ್ಣಿಯವರ ಕಾರ್ಯದಿಂದ ನಾನು ತುಂಬಾ ಪ್ರಭಾವಿತನಾಗಿ ಪ್ರೇರಣೆ ಪಡೆದಿದ್ದೇನೆ ಎಂದಿರುವುದು ಇಲ್ಲಿ ಗಮನಾರ್ಹವಾಗಿದ್ದು, ಉತ್ತರ ಪ್ರದೇಶದ ಅಮೇಥಿಯಲ್ಲಿ ಜನಸಾಮಾನ್ಯರ ಉಪಯೋಗಕ್ಕಾಗಿ ಸುಮಾರು 450ಕ್ಕೂ ಹೆಚ್ಚು ಕುಡಿಯುವ ನೀರಿನ ಬೋರ್ವೆಲ್ ನಿರ್ಮಾಣಗೊಳಿಸಿರುವ ಇವರು ತ್ರಯಂಬಕೇಶ್ವರದ ಪ್ರಾಚೀನ ಕುಂಡ ಸಹಿತ ಅನೇಕ ಐತಿಹಾಸಿಕ ಕೆರೆಗಳನ್ನು ಪುನರುಜ್ಜೀವನಗೊಳಿಸಿದ್ದಾರೆ. ಇಂತಹ ಸಮಾಜಮುಖಿ ವ್ಯಕ್ತಿ ನಮ್ಮ ಮಂಗಳೂರಿನ ಶ್ರೀ ರಾಮಕೃಷ್ಣ ಮಠಕ್ಕೂ ಮೂರು ಸಲ ಭೇಟಿ ನೀಡಿ ಸ್ವಚ್ಛತೆಯ ನಿಟ್ಟಿನಲ್ಲಿ ಮಠವು ವಹಿಸಿರುವ ಕಾಳಜಿ ಬಗ್ಗೆ ವಿಶೇಷ ಮೆಚ್ಚುಗೆ ಸೂಚಿಸಿದ್ದರು ಎಂದರು.
ಈ ಸಂದರ್ಭದಲ್ಲಿ ಕುಲಕರ್ಣಿಯವರ ಕುಟುಂಬದವರ ಸಹಿತ ಬಿಜೆಪಿ ಮುಖಂಡರಾದ ಸಂಜಯ್ ಪ್ರಭು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು