10:36 PM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಪುಣೆ: ಸ್ವಚ್ಛತಾ ಬಾಬಾ, ನಿವೃತ್ತ ಶಿಕ್ಷಕ ಚಂದ್ರಕಾಂತ ರಾಧಾಬಾಯಿ ದಾಮೋದರ್ ಕುಲಕರ್ಣಿಗೆ ಶಾಸಕ ಕಾಮತ್ ಸನ್ಮಾನ

13/11/2024, 18:05

ಪುಣೆ/ಮಂಗಳೂರು(reporterkarnataka.com): ಸ್ವಚ್ಛತೆಯ ವಿಷಯದಲ್ಲಿ ಸ್ವತಃ ಪ್ರಧಾನಿ ನರೇಂದ್ರ ಮೋದಿಯ ಅವರನ್ನೇ ಪ್ರಭಾವಿಸಿದ್ದ ಹಿರಿಯರಾದ ನಿವೃತ್ತ ಸರ್ಕಾರಿ ಶಿಕ್ಷಕ ಚಂದ್ರಕಾಂತ ರಾಧಾಬಾಯಿ ದಾಮೋದರ್ ಕುಲಕರ್ಣಿ (ಸ್ವಚ್ಛತಾ ಬಾಬಾ) ಅವರನ್ನು ಶಾಸಕ ವೇದವ್ಯಾಸ ಕಾಮತ್ ಅವರು ಪುಣೆಯ ಚುನಾವಣಾ ಕಾರ್ಯಗಳ ನಡುವೆ ಭೇಟಿ ಮಾಡಿ ಸನ್ಮಾನಿಸಿದರು.


ನಂತರ ಮಾತನಾಡಿದ ಶಾಸಕರು, ಪ್ರಧಾನಿಗಳು ದೇಶದಲ್ಲಿ ಸ್ವಚ್ಛ ಭಾರತ ಅಭಿಯಾನವನ್ನು ಆರಂಭಿಸಿದಾಗ ನಿವೃತ್ತಿ ಜೀವನ ನಡೆಸುತ್ತಿದ್ದ ಕುಲಕರ್ಣಿಯವರು ತಮಗೆ ಬರುತ್ತಿದ್ದ 15,000 ಪಿಂಚಣಿಯಲ್ಲಿ ತಿಂಗಳಿಗೆ 5 ಸಾವಿರದಂತೆ, ಒಟ್ಟು 2,60,000/- ಸ್ವಚ್ಛ ಭಾರತ್ ನಿಧಿಗೆ ನೀಡಿ ದೇಶಕ್ಕೆ ಮಾದರಿಯಾಗಿದ್ದರು. ಅನೇಕ ಬಾರಿ ಕಾಶಿ, ಅಯೋಧ್ಯೆಗೆ ತೆರಳಿ 5-10 ದಿವಸಗಳ ಕಾಲ ತಂಗಿ ಸ್ವಚ್ಛತಾ ಕಾರ್ಯ ಮಾಡುವುದರಲ್ಲೇ ಸಂತೃಪ್ತಿಯನ್ನು ಕಾಣುವ ವಿಶೇಷ ವ್ಯಕ್ತಿ ಇವರು. ಇವೆಲ್ಲವನ್ನು ಗಮನಿಸಿ ಪ್ರಧಾನಿ ತಮ್ಮ ಮನ್ ಕಿ ಬಾತ್ ನಲ್ಲಿ ಇವರ ಬಗ್ಗೆ ಉಲ್ಲೇಖಿಸಿದ್ದು ಮಾತ್ರವಲ್ಲದೇ, ಎರಡು ಬಾರಿ ಅತ್ಯಂತ ಗೌರವದಿಂದ ಕರೆಸಿಕೊಂಡು ಸನ್ಮಾನಿಸಿದ್ದರು ಎಂದು ಶಾಸಕರು ಹೇಳಿದರು.
ಸ್ವತಃ ಪ್ರಧಾನಿಗಳೇ ಕುಲಕರ್ಣಿಯವರ ಕಾರ್ಯದಿಂದ ನಾನು ತುಂಬಾ ಪ್ರಭಾವಿತನಾಗಿ ಪ್ರೇರಣೆ ಪಡೆದಿದ್ದೇನೆ ಎಂದಿರುವುದು ಇಲ್ಲಿ ಗಮನಾರ್ಹವಾಗಿದ್ದು, ಉತ್ತರ ಪ್ರದೇಶದ ಅಮೇಥಿಯಲ್ಲಿ ಜನಸಾಮಾನ್ಯರ ಉಪಯೋಗಕ್ಕಾಗಿ ಸುಮಾರು 450ಕ್ಕೂ ಹೆಚ್ಚು ಕುಡಿಯುವ ನೀರಿನ ಬೋರ್ವೆಲ್ ನಿರ್ಮಾಣಗೊಳಿಸಿರುವ ಇವರು ತ್ರಯಂಬಕೇಶ್ವರದ ಪ್ರಾಚೀನ ಕುಂಡ ಸಹಿತ ಅನೇಕ ಐತಿಹಾಸಿಕ ಕೆರೆಗಳನ್ನು ಪುನರುಜ್ಜೀವನಗೊಳಿಸಿದ್ದಾರೆ. ಇಂತಹ ಸಮಾಜಮುಖಿ ವ್ಯಕ್ತಿ ನಮ್ಮ ಮಂಗಳೂರಿನ ಶ್ರೀ ರಾಮಕೃಷ್ಣ ಮಠಕ್ಕೂ ಮೂರು ಸಲ ಭೇಟಿ ನೀಡಿ ಸ್ವಚ್ಛತೆಯ ನಿಟ್ಟಿನಲ್ಲಿ ಮಠವು ವಹಿಸಿರುವ ಕಾಳಜಿ ಬಗ್ಗೆ ವಿಶೇಷ ಮೆಚ್ಚುಗೆ ಸೂಚಿಸಿದ್ದರು ಎಂದರು.
ಈ ಸಂದರ್ಭದಲ್ಲಿ ಕುಲಕರ್ಣಿಯವರ ಕುಟುಂಬದವರ ಸಹಿತ ಬಿಜೆಪಿ ಮುಖಂಡರಾದ ಸಂಜಯ್ ಪ್ರಭು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು