3:04 PM Tuesday9 - June 2026
ಬ್ರೇಕಿಂಗ್ ನ್ಯೂಸ್
ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ…

ಇತ್ತೀಚಿನ ಸುದ್ದಿ

ಪುಣೆ: ಸ್ವಚ್ಛತಾ ಬಾಬಾ, ನಿವೃತ್ತ ಶಿಕ್ಷಕ ಚಂದ್ರಕಾಂತ ರಾಧಾಬಾಯಿ ದಾಮೋದರ್ ಕುಲಕರ್ಣಿಗೆ ಶಾಸಕ ಕಾಮತ್ ಸನ್ಮಾನ

13/11/2024, 18:05

ಪುಣೆ/ಮಂಗಳೂರು(reporterkarnataka.com): ಸ್ವಚ್ಛತೆಯ ವಿಷಯದಲ್ಲಿ ಸ್ವತಃ ಪ್ರಧಾನಿ ನರೇಂದ್ರ ಮೋದಿಯ ಅವರನ್ನೇ ಪ್ರಭಾವಿಸಿದ್ದ ಹಿರಿಯರಾದ ನಿವೃತ್ತ ಸರ್ಕಾರಿ ಶಿಕ್ಷಕ ಚಂದ್ರಕಾಂತ ರಾಧಾಬಾಯಿ ದಾಮೋದರ್ ಕುಲಕರ್ಣಿ (ಸ್ವಚ್ಛತಾ ಬಾಬಾ) ಅವರನ್ನು ಶಾಸಕ ವೇದವ್ಯಾಸ ಕಾಮತ್ ಅವರು ಪುಣೆಯ ಚುನಾವಣಾ ಕಾರ್ಯಗಳ ನಡುವೆ ಭೇಟಿ ಮಾಡಿ ಸನ್ಮಾನಿಸಿದರು.


ನಂತರ ಮಾತನಾಡಿದ ಶಾಸಕರು, ಪ್ರಧಾನಿಗಳು ದೇಶದಲ್ಲಿ ಸ್ವಚ್ಛ ಭಾರತ ಅಭಿಯಾನವನ್ನು ಆರಂಭಿಸಿದಾಗ ನಿವೃತ್ತಿ ಜೀವನ ನಡೆಸುತ್ತಿದ್ದ ಕುಲಕರ್ಣಿಯವರು ತಮಗೆ ಬರುತ್ತಿದ್ದ 15,000 ಪಿಂಚಣಿಯಲ್ಲಿ ತಿಂಗಳಿಗೆ 5 ಸಾವಿರದಂತೆ, ಒಟ್ಟು 2,60,000/- ಸ್ವಚ್ಛ ಭಾರತ್ ನಿಧಿಗೆ ನೀಡಿ ದೇಶಕ್ಕೆ ಮಾದರಿಯಾಗಿದ್ದರು. ಅನೇಕ ಬಾರಿ ಕಾಶಿ, ಅಯೋಧ್ಯೆಗೆ ತೆರಳಿ 5-10 ದಿವಸಗಳ ಕಾಲ ತಂಗಿ ಸ್ವಚ್ಛತಾ ಕಾರ್ಯ ಮಾಡುವುದರಲ್ಲೇ ಸಂತೃಪ್ತಿಯನ್ನು ಕಾಣುವ ವಿಶೇಷ ವ್ಯಕ್ತಿ ಇವರು. ಇವೆಲ್ಲವನ್ನು ಗಮನಿಸಿ ಪ್ರಧಾನಿ ತಮ್ಮ ಮನ್ ಕಿ ಬಾತ್ ನಲ್ಲಿ ಇವರ ಬಗ್ಗೆ ಉಲ್ಲೇಖಿಸಿದ್ದು ಮಾತ್ರವಲ್ಲದೇ, ಎರಡು ಬಾರಿ ಅತ್ಯಂತ ಗೌರವದಿಂದ ಕರೆಸಿಕೊಂಡು ಸನ್ಮಾನಿಸಿದ್ದರು ಎಂದು ಶಾಸಕರು ಹೇಳಿದರು.
ಸ್ವತಃ ಪ್ರಧಾನಿಗಳೇ ಕುಲಕರ್ಣಿಯವರ ಕಾರ್ಯದಿಂದ ನಾನು ತುಂಬಾ ಪ್ರಭಾವಿತನಾಗಿ ಪ್ರೇರಣೆ ಪಡೆದಿದ್ದೇನೆ ಎಂದಿರುವುದು ಇಲ್ಲಿ ಗಮನಾರ್ಹವಾಗಿದ್ದು, ಉತ್ತರ ಪ್ರದೇಶದ ಅಮೇಥಿಯಲ್ಲಿ ಜನಸಾಮಾನ್ಯರ ಉಪಯೋಗಕ್ಕಾಗಿ ಸುಮಾರು 450ಕ್ಕೂ ಹೆಚ್ಚು ಕುಡಿಯುವ ನೀರಿನ ಬೋರ್ವೆಲ್ ನಿರ್ಮಾಣಗೊಳಿಸಿರುವ ಇವರು ತ್ರಯಂಬಕೇಶ್ವರದ ಪ್ರಾಚೀನ ಕುಂಡ ಸಹಿತ ಅನೇಕ ಐತಿಹಾಸಿಕ ಕೆರೆಗಳನ್ನು ಪುನರುಜ್ಜೀವನಗೊಳಿಸಿದ್ದಾರೆ. ಇಂತಹ ಸಮಾಜಮುಖಿ ವ್ಯಕ್ತಿ ನಮ್ಮ ಮಂಗಳೂರಿನ ಶ್ರೀ ರಾಮಕೃಷ್ಣ ಮಠಕ್ಕೂ ಮೂರು ಸಲ ಭೇಟಿ ನೀಡಿ ಸ್ವಚ್ಛತೆಯ ನಿಟ್ಟಿನಲ್ಲಿ ಮಠವು ವಹಿಸಿರುವ ಕಾಳಜಿ ಬಗ್ಗೆ ವಿಶೇಷ ಮೆಚ್ಚುಗೆ ಸೂಚಿಸಿದ್ದರು ಎಂದರು.
ಈ ಸಂದರ್ಭದಲ್ಲಿ ಕುಲಕರ್ಣಿಯವರ ಕುಟುಂಬದವರ ಸಹಿತ ಬಿಜೆಪಿ ಮುಖಂಡರಾದ ಸಂಜಯ್ ಪ್ರಭು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು