11:06 PM Thursday2 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಇಂದಿರಾ ಕ್ಯಾಂಟಿನಿನಲ್ಲಿ ಕಳಪೆ ಗುಣಮಟ್ಟದ ಆಹಾರ: ಗುತ್ತಿಗೆ ರದ್ದುಪಡಿಸಲು ಕರವೇ ಒತ್ತಾಯ

20/02/2025, 21:39

ಶಿವು ರಾಠೋಡ ಹುಣಸಗಿ ರಾಯಚೂರು

info.reporterkarnataka@gmail.com

ಲಿಂಗಸಗೂರು ಪಟ್ಟನದಲ್ಲಿರುವ ಇಂದಿರಾ ಕ್ಯಾಂಟೀನಲ್ಲಿ ನಿತ್ಯವು ಗುಣಮಟ್ಟದ ಆಹಾರ ನೀಡುತ್ತಿಲ್ಲ. ಕೂಡಲೇ ಗುತ್ತಿಗೆದಾರನ ಗುತ್ತಿಗೆ ರದ್ದುಪಡಿಸುವಂತೆ ಒತ್ತಾಯಿಸಿ ಕರ್ನಾಕಟ ರಕ್ಷಣಾ ವೇದಿಕೆಯ ಅಮರೇಶ ಅವರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.
ಪಟ್ಟಣದಲ್ಲಿರುವ ಇಂದಿರಾ ಕ್ಯಾಂಟೀನನಲ್ಲಿ ಗುಣಮಟ್ಟದ ಆಹಾರ ಹಂಚಿಕೆ ಮಾಡುವುದಿಲ್ಲ.

ಸರಿಯಾಗಿ ಬೆಂದಿರದ ಚಪಾತಿ ಹಾಗೂ ಅನ್ನ ಆಹಾರವನ್ನು ನೀಡಲಾಗುತ್ತಿದ್ದು, ಶಾಲಾ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳು ಬಡವರು ಸೇರಿದಂತೆ ಹಲವಾರು ಜನ ಇಂತಹುದ್ದೇ ಆಹಾರ ಸೇವಿಸಬೇಕಾಗಿದೆ.
ಸರಕಾರದಿಂದ ಬರುವ ಹಣದಲ್ಲಿ ಇಂದಿರಾ ಕ್ಯಾಂಟೀನ್ ನಡೆಸಲಾಗುತ್ತಿದ್ದು ರಿಯಾಯಿತಿ ದರದಲ್ಲಿ ಆಹಾರ ದೊರೆಯುತ್ತಿದೆ ಎಂದು ಬೇರೆಬೇರೆ ಕಡೆಯಿಂದ ಬರುವ ಬಡ ವಿದ್ಯಾರ್ಥಿಗಳು, ಇತರರು ಈ ಕ್ಯಾಂಟಿನ್ ಗೆ ಬರುತ್ತಾರೆ. ಆದರೆ ಇಲ್ಲಿಯ ಅಡುಗೆಯ ಸಿಬ್ಬಂದಿ ತಮ್ಮ ಮನಸೋ ಇಚ್ಚೆಯಂತೆ ಚಪಾತಿ ಮಾಡಿ ಅರೆಬರೆ ಬೆಂದಿರುವ ಊಟ ನೀಡುತ್ತಾರೆ. ಇಂತಹ ಊಟ ಸೇವಿಸಿದ ಹಲವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಅನ್ನವನ್ನು ಮುದ್ದೆಯಾಗಿ ಮಾಡಿದ್ದು ಅದರಲ್ಲಿ ಕೆಲವು ಬೆಂದಿವೆ ಕೆಲಹಾಗೆ ಇವೆ. ಅಂತಹ ಆಹಾರವನ್ನು ನೋಡಿದ ಹಲವಾರು ವಿದ್ಯಾರ್ಥಿಗಳು ಇಂತಹದ್ದು ಹೇಗೆ ತಿನ್ನಬೇಕು ಎಂದು ಪ್ರಶ್ನಿಸಿದ್ದಾರೆ.
ತಿಂದರೆ ತಿನ್ನಿ ಇಲ್ಲವಾದರೆ ಹೊಗಿ ಎಂದು ಬೆದರಿಕೆ ಹಾಕುತ್ತಿದ್ದಾರೆ. ಸಾರ್ವಜನಿಕರೊಡನೆ ವಾಗ್ವಾದಕ್ಕಿಳಿಯುವ ಬೆದರಿಕೆ ಹಾಕುವ ಇಲ್ಲಿಯ ಸಿಬ್ಬಂದಿಯ ಮೇಲೆ ಸೂಕ್ತ ಕ್ರಮ ಜರುಗಿಸಬೇಕು. ಹಾಗೂ ಗುತ್ತಿಗೆದಾರರ ಗುತ್ತಿಗೆ ರದ್ದು ಪಡಿಸಿ ಬೇರೆ ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಘಟನೆಯ ಅಮರೇಶ ಉಸ್ಕಿಹಾಳ, ದೇವರಾಜ, ರವಿಚಂದ್ರ, ರಮೇಶ, ಶಿವರಾಜ ಸೇರಿದಂತೆ ಇದ್ದರು

ಇತ್ತೀಚಿನ ಸುದ್ದಿ

ಜಾಹೀರಾತು