11:54 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಇಂದಿರಾ ಕ್ಯಾಂಟಿನಿನಲ್ಲಿ ಕಳಪೆ ಗುಣಮಟ್ಟದ ಆಹಾರ: ಗುತ್ತಿಗೆ ರದ್ದುಪಡಿಸಲು ಕರವೇ ಒತ್ತಾಯ

20/02/2025, 21:39

ಶಿವು ರಾಠೋಡ ಹುಣಸಗಿ ರಾಯಚೂರು

info.reporterkarnataka@gmail.com

ಲಿಂಗಸಗೂರು ಪಟ್ಟನದಲ್ಲಿರುವ ಇಂದಿರಾ ಕ್ಯಾಂಟೀನಲ್ಲಿ ನಿತ್ಯವು ಗುಣಮಟ್ಟದ ಆಹಾರ ನೀಡುತ್ತಿಲ್ಲ. ಕೂಡಲೇ ಗುತ್ತಿಗೆದಾರನ ಗುತ್ತಿಗೆ ರದ್ದುಪಡಿಸುವಂತೆ ಒತ್ತಾಯಿಸಿ ಕರ್ನಾಕಟ ರಕ್ಷಣಾ ವೇದಿಕೆಯ ಅಮರೇಶ ಅವರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.
ಪಟ್ಟಣದಲ್ಲಿರುವ ಇಂದಿರಾ ಕ್ಯಾಂಟೀನನಲ್ಲಿ ಗುಣಮಟ್ಟದ ಆಹಾರ ಹಂಚಿಕೆ ಮಾಡುವುದಿಲ್ಲ.

ಸರಿಯಾಗಿ ಬೆಂದಿರದ ಚಪಾತಿ ಹಾಗೂ ಅನ್ನ ಆಹಾರವನ್ನು ನೀಡಲಾಗುತ್ತಿದ್ದು, ಶಾಲಾ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳು ಬಡವರು ಸೇರಿದಂತೆ ಹಲವಾರು ಜನ ಇಂತಹುದ್ದೇ ಆಹಾರ ಸೇವಿಸಬೇಕಾಗಿದೆ.
ಸರಕಾರದಿಂದ ಬರುವ ಹಣದಲ್ಲಿ ಇಂದಿರಾ ಕ್ಯಾಂಟೀನ್ ನಡೆಸಲಾಗುತ್ತಿದ್ದು ರಿಯಾಯಿತಿ ದರದಲ್ಲಿ ಆಹಾರ ದೊರೆಯುತ್ತಿದೆ ಎಂದು ಬೇರೆಬೇರೆ ಕಡೆಯಿಂದ ಬರುವ ಬಡ ವಿದ್ಯಾರ್ಥಿಗಳು, ಇತರರು ಈ ಕ್ಯಾಂಟಿನ್ ಗೆ ಬರುತ್ತಾರೆ. ಆದರೆ ಇಲ್ಲಿಯ ಅಡುಗೆಯ ಸಿಬ್ಬಂದಿ ತಮ್ಮ ಮನಸೋ ಇಚ್ಚೆಯಂತೆ ಚಪಾತಿ ಮಾಡಿ ಅರೆಬರೆ ಬೆಂದಿರುವ ಊಟ ನೀಡುತ್ತಾರೆ. ಇಂತಹ ಊಟ ಸೇವಿಸಿದ ಹಲವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಅನ್ನವನ್ನು ಮುದ್ದೆಯಾಗಿ ಮಾಡಿದ್ದು ಅದರಲ್ಲಿ ಕೆಲವು ಬೆಂದಿವೆ ಕೆಲಹಾಗೆ ಇವೆ. ಅಂತಹ ಆಹಾರವನ್ನು ನೋಡಿದ ಹಲವಾರು ವಿದ್ಯಾರ್ಥಿಗಳು ಇಂತಹದ್ದು ಹೇಗೆ ತಿನ್ನಬೇಕು ಎಂದು ಪ್ರಶ್ನಿಸಿದ್ದಾರೆ.
ತಿಂದರೆ ತಿನ್ನಿ ಇಲ್ಲವಾದರೆ ಹೊಗಿ ಎಂದು ಬೆದರಿಕೆ ಹಾಕುತ್ತಿದ್ದಾರೆ. ಸಾರ್ವಜನಿಕರೊಡನೆ ವಾಗ್ವಾದಕ್ಕಿಳಿಯುವ ಬೆದರಿಕೆ ಹಾಕುವ ಇಲ್ಲಿಯ ಸಿಬ್ಬಂದಿಯ ಮೇಲೆ ಸೂಕ್ತ ಕ್ರಮ ಜರುಗಿಸಬೇಕು. ಹಾಗೂ ಗುತ್ತಿಗೆದಾರರ ಗುತ್ತಿಗೆ ರದ್ದು ಪಡಿಸಿ ಬೇರೆ ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಘಟನೆಯ ಅಮರೇಶ ಉಸ್ಕಿಹಾಳ, ದೇವರಾಜ, ರವಿಚಂದ್ರ, ರಮೇಶ, ಶಿವರಾಜ ಸೇರಿದಂತೆ ಇದ್ದರು

ಇತ್ತೀಚಿನ ಸುದ್ದಿ

ಜಾಹೀರಾತು