12:51 AM Saturday10 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಪೂರ್ವಜರ ಕಾಲದಿಂದಲೂ ಹರಕು ಬಟ್ಟೆ.. ಮುರುಕು ರೊಟ್ಟಿ..!: ಶತಮಾನ ಕಳೆದರೂ ಬದಲಾಗದ ನಿರ್ಗತಿಕರ ಬದುಕು!

04/12/2024, 14:59

*ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ 5 ಗ್ಯಾರಂಟಿ ಯೋಜನೆಗಳಿಂದಲೂ ವಂಚಿತರಾಗಿರುವ ನಿರ್ಗತಿಕರು*

*ಸಿಎಂ ಸಿದ್ದರಾಮಯ್ಯನವರ ತವರು ನಂಜನಗೂಡು ನಗರಸಭೆ ಅಧಿಕಾರಿಗಳ ನಿರ್ಲಕ್ಷತನಕ್ಕೆ ದಿನ ಬೆಳಗಾದರೆ ನಂಜುಂಡನ ಮುಡಿಗೆ ತುಳಸಿ ಹಾರ ನೀಡುವವರ ಬದುಕು ಮೂರಾಬಟ್ಟೆ..!*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com
ನಂಜನಗೂಡು ನಗರಸಭಾ ಅಧಿಕಾರಿಗಳ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ನಿರ್ಲಕ್ಷತನದಿಂದಾಗಿ ಗ್ಯಾರಂಟಿ ಯೋಜನೆಗಳಿಂದ ವಂಚಿತರಾದ ನಿರ್ಗತಿಕರರಾಗಿ ಜೀವನ ಸಾಗಿಸುತ್ತಿದ್ದಾರೆ.
ಧಾರ್ಮಿಕ ಪುಣ್ಯಕ್ಷೇತ್ರ ನಂಜುಂಡೇಶ್ವರನ ಸನಿಹದಲ್ಲಿಯೇ ತಲೆಮಾರುಗಳಿಂದ ನಿರ್ಗತಿಕ ಕುಟುಂಬಗಳು ವಾಸುತ್ತಿವೆ.
ಪೂರ್ವಜರ ಕಾಲದಿಂದಲೂ ನಂಜುಂಡೇಶ್ವರನಿಗೆ ಪ್ರಿಯವಾದ ತುಳಸಿಹಾರ ತಯಾರಿಕೆಯೇ ಇವರ ಕಾಯಕ.
ಸ್ವಂತ ಸೂರಿಲ್ಲ. ದಾಖಲಾತಿ ಇದ್ದರೂ ಸರ್ಕಾರದ ಗ್ಯಾರಂಟಿ ಯೋಜನೆ ದೊರೆಯುತ್ತಿಲ್ಲ.


ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಹೀನಾಯ ಪರಿಸ್ಥಿತಿಯಲ್ಲಿ ಜೀವನ ದೂಡುತ್ತಿರುವ ಸುಮಾರು 6 ಕುಟುಂಬದ 30ಕ್ಕೂ ಹೆಚ್ಚು ಮಂದಿ ಇದ್ದಾರೆ.
ನಂಜನಗೂಡು ಪಟ್ಟಣದ ಹಳ್ಳದ ಕೇರಿಯ ಮುಖ್ಯರಸ್ತೆ ಬದಿಯಲ್ಲಿ ಈ ಕುಟುಂಬಗಳು ವಾಸಿಸುತ್ತಿವೆ. ವಾಸವಿರುವ ನಿವೇಶನವು ಇವರದಲ್ಲ. ಪುಟ್ಟ ಶೌಚಾಲಯವೂ ಇವರಿಗಿಲ್ಲ.
ಪ್ರತಿ ಚುನಾವಣೆಗಳ ಸಂದರ್ಭದಲ್ಲಿ ಮತ ಕೇಳಲು ಬಂದು ಬೆಟ್ಟದಷ್ಟು ಭರವಸೆಗಳನ್ನು ತುಂಬುತ್ತಾರೆ ರಾಜಕಾರಣಿಗಳು .
ಇದುವರೆಗೂ ನಮಗೆ ಸೌಲಭ್ಯಗಳು ದೊರೆತಿಲ್ಲ. ನಮಗೂ ಕೇಳಿ ಕೇಳಿ ಸಾಕಾಗಿದೆ. ಯಾರೊಬ್ಬರೂ ನಮಗೆ ಸಹಾಯ ಮಾಡಿಲ್ಲ ಅಂತ ನೊಂದು ಆಕ್ರೋಶ ವ್ಯಕ್ತಪಡಿಸಿದ ನಿರ್ಗತಿಕರು.
ಇನ್ನಾದರೂ ಎಚ್ಚೆತ್ತು ಇವರ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುವರೆ ಕಾದು ನೋಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು