1:18 PM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಪೂರ್ವಜರ ಕಾಲದಿಂದಲೂ ಹರಕು ಬಟ್ಟೆ.. ಮುರುಕು ರೊಟ್ಟಿ..!: ಶತಮಾನ ಕಳೆದರೂ ಬದಲಾಗದ ನಿರ್ಗತಿಕರ ಬದುಕು!

04/12/2024, 14:59

*ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ 5 ಗ್ಯಾರಂಟಿ ಯೋಜನೆಗಳಿಂದಲೂ ವಂಚಿತರಾಗಿರುವ ನಿರ್ಗತಿಕರು*

*ಸಿಎಂ ಸಿದ್ದರಾಮಯ್ಯನವರ ತವರು ನಂಜನಗೂಡು ನಗರಸಭೆ ಅಧಿಕಾರಿಗಳ ನಿರ್ಲಕ್ಷತನಕ್ಕೆ ದಿನ ಬೆಳಗಾದರೆ ನಂಜುಂಡನ ಮುಡಿಗೆ ತುಳಸಿ ಹಾರ ನೀಡುವವರ ಬದುಕು ಮೂರಾಬಟ್ಟೆ..!*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com
ನಂಜನಗೂಡು ನಗರಸಭಾ ಅಧಿಕಾರಿಗಳ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ನಿರ್ಲಕ್ಷತನದಿಂದಾಗಿ ಗ್ಯಾರಂಟಿ ಯೋಜನೆಗಳಿಂದ ವಂಚಿತರಾದ ನಿರ್ಗತಿಕರರಾಗಿ ಜೀವನ ಸಾಗಿಸುತ್ತಿದ್ದಾರೆ.
ಧಾರ್ಮಿಕ ಪುಣ್ಯಕ್ಷೇತ್ರ ನಂಜುಂಡೇಶ್ವರನ ಸನಿಹದಲ್ಲಿಯೇ ತಲೆಮಾರುಗಳಿಂದ ನಿರ್ಗತಿಕ ಕುಟುಂಬಗಳು ವಾಸುತ್ತಿವೆ.
ಪೂರ್ವಜರ ಕಾಲದಿಂದಲೂ ನಂಜುಂಡೇಶ್ವರನಿಗೆ ಪ್ರಿಯವಾದ ತುಳಸಿಹಾರ ತಯಾರಿಕೆಯೇ ಇವರ ಕಾಯಕ.
ಸ್ವಂತ ಸೂರಿಲ್ಲ. ದಾಖಲಾತಿ ಇದ್ದರೂ ಸರ್ಕಾರದ ಗ್ಯಾರಂಟಿ ಯೋಜನೆ ದೊರೆಯುತ್ತಿಲ್ಲ.


ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಹೀನಾಯ ಪರಿಸ್ಥಿತಿಯಲ್ಲಿ ಜೀವನ ದೂಡುತ್ತಿರುವ ಸುಮಾರು 6 ಕುಟುಂಬದ 30ಕ್ಕೂ ಹೆಚ್ಚು ಮಂದಿ ಇದ್ದಾರೆ.
ನಂಜನಗೂಡು ಪಟ್ಟಣದ ಹಳ್ಳದ ಕೇರಿಯ ಮುಖ್ಯರಸ್ತೆ ಬದಿಯಲ್ಲಿ ಈ ಕುಟುಂಬಗಳು ವಾಸಿಸುತ್ತಿವೆ. ವಾಸವಿರುವ ನಿವೇಶನವು ಇವರದಲ್ಲ. ಪುಟ್ಟ ಶೌಚಾಲಯವೂ ಇವರಿಗಿಲ್ಲ.
ಪ್ರತಿ ಚುನಾವಣೆಗಳ ಸಂದರ್ಭದಲ್ಲಿ ಮತ ಕೇಳಲು ಬಂದು ಬೆಟ್ಟದಷ್ಟು ಭರವಸೆಗಳನ್ನು ತುಂಬುತ್ತಾರೆ ರಾಜಕಾರಣಿಗಳು .
ಇದುವರೆಗೂ ನಮಗೆ ಸೌಲಭ್ಯಗಳು ದೊರೆತಿಲ್ಲ. ನಮಗೂ ಕೇಳಿ ಕೇಳಿ ಸಾಕಾಗಿದೆ. ಯಾರೊಬ್ಬರೂ ನಮಗೆ ಸಹಾಯ ಮಾಡಿಲ್ಲ ಅಂತ ನೊಂದು ಆಕ್ರೋಶ ವ್ಯಕ್ತಪಡಿಸಿದ ನಿರ್ಗತಿಕರು.
ಇನ್ನಾದರೂ ಎಚ್ಚೆತ್ತು ಇವರ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುವರೆ ಕಾದು ನೋಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು